ಕಲಬುರಗಿ: ಜಿಲ್ಲೆಯಲ್ಲಿ ಅಕ್ರಮ ಸಾಗುವಳಿಯನ್ನು ಸಕ್ರಮಗೊಳಿಸುವ ನಮೂನೆ 50, 53 ಹಾಗೂ 57 ಬಗರ್ ಹುಕುಂ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಬೇಕೆಂದು ಡಿ.ಸಿ. ಬಿ.ಫೌಜಿಯಾ ತರನ್ನುಮ್ ಜಿಲ್ಲೆಯ ತಹಶೀಲ್ದಾರರಿಗೆ ಸೂಚನೆ ನೀಡಿದರು.
ಮಂಗಳವಾರ ಸಂಜೆ ತಮ್ಮ ಕಚೇರಿಯಲ್ಲಿ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ಬಗರ್ ಹುಕುಂ ತಂತ್ರಾಂಶದಲ್ಲಿ ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲಿಸಿ ಅರ್ಹ ಅರ್ಜಿಗಳನ್ನು ಶಾಸಕರ ಅಧ್ಯಕ್ಷತೆಯ ಸಮಿತಿ ಮುಂದೆ ಮಂಡಿಸಬೇಕು. ಅನರ್ಹ ಅರ್ಜಿಗಳನ್ನು ತಮ್ಮಹಂತದಲ್ಲಿಯೇ ತಿರಸ್ಕರಿಸಬೇಕು ಎಂದರು.
ಸೋಮವಾರ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಕಲಬುರಗಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನೆ ನಡೆಸಿ ಕಂದಾಯ ಸೇವೆ ಮತ್ತಷ್ಟು ಸರಳೀಕರಣಗೊಳಿಸುವುದರ ಜೊತೆಗೆ ಡಿಜಿಟೈಲೇಷನ್ ಗೆ ಒತ್ತು ನೀಡುವಂತೆ ಕರೆ ನೀಡಿದ್ದು, ತಾಲೂಕಾ ಕಚೇರಿಯಲ್ಲಿ ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದರು.
ಸರ್ಕಾರದ ವಿವಿಧ ಸವಲತ್ತು ಪಡೆಯಲು ಆಧಾರ್ ಸೀಡಿಂಗ್ ತುಂಬಾ ಉಪಯುಕ್ತವಾಗಿದ್ದು, ಪಹಣಿಗೆ ಆಧಾರ್ ಜೋಡಿಸುವ ಕಾರ್ಯ ಸಚಿವರು ನೀಡಿರುವ ಡೆಡ್ ಲೈನ್ ನಂತೆ ಜುಲೈ ಮಾಹೆಯೊಳಗೆ ಪೂರ್ಣಗೊಳಿಸಬೇಕೆಂದರು. ಆಧಾರ್ ಜೋಡಣೆಯಿಂದ ಡಿ.ಬಿ.ಟಿ. ಮೂಲಕ ಪರಿಹಾರ ಹಣ ನೇರ ಜಮೆ, ಮಾಲೀಕತ್ವ ದೃಢ, ವಂಚನೆ ತಪ್ಪಿಸುವ ಹೀಗೆ ಅನೇಕ ಲಾಭಗಳ ಕುರಿತು ಆಯಾ ಶಾಸಕರಿಂದಲೆ ಇದರ ಮಹತ್ವ ತಿಳಿಸುವ ವಿಡಿಯೋ ಕ್ಲಿಪ್ ಮಾಡಿ ಸಾಮಾಜಿಕ ಜಾಲತಾಣ ಮೂಲಕ ರೈತಾಪಿ ವರ್ಗಕ್ಕೆ ಅರಿವು ಮೂಡಿಸಬೇಕೆಂದರು.
ಪ್ರವಾಹ ಪರಿಸ್ಥಿತಿಗೆ ಸನ್ನಧರಾಗಿ: ಪ್ರಸಕ್ತ ಸಾಲಿನಲ್ಲಿ ಹೆಚ್ಚಿನ ಮಳೆ ಮುನ್ಸೂಚನೆ ಇದೆ. ಹಿಂದಿನ ದಾಖಲೆಗಳ ಪ್ರಕಾರ ಜಿಲ್ಲೆಯ ಭೀಮಾ ನದಿಯಿಂದ ನಮಗೆ ನೆರೆ ಹಾವಳಿ ಭೀತಿ ಹೆಚ್ಚು. ನದಿ, ಜಲಾಶಯ ದಂಡೆಯಲ್ಲಿರುವ ಜನ-ಜಾನುವಾರಗಳ ರಕ್ಷಣೆ ಹಿನ್ನೆಲೆಯಲ್ಲಿ ಪ್ರವಾಹ ಪರಿಸ್ಥಿತಿ ಎದುರಾದಲ್ಲಿ ಇದನ್ನು ಸಮರ್ಥವಾಗಿ ಎದುರಿಸಲು ತಹಶೀಲ್ದಾರರು ಸನ್ನಧರಾಗಬೇಕು ಎಂದು ಡಿ.ಸಿ. ಬಿ.ಫೌಜಿಯಾ ತರನ್ನುಮ್ ತಿಳಿಸಿದರು.
ಸಭೆಯಲ್ಲಿ ಸಹಾಯಕ ಆಯುಕ್ತ ಆಶಪ್ಪ ಪೂಜಾರಿ, ಡಿ.ಡಿ.ಎಲ್.ಆರ್. ಪ್ರವೀಣ ಸೇರಿದಂತೆ ತಾಲೂಕಾ ತಹಶೀಲ್ದಾರರು ಹಾಗೂ ಇತರೆ ಕಂದಾಯ ಸಿಬ್ಬಂದಿಗಳು ಇದ್ದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…