ಹೈದರಾಬಾದ್ ಕರ್ನಾಟಕ

ಜಿಲ್ಲಾ ಕೇಂದ್ರದಲ್ಲಿ ಮಹಿಳಾ ಆಯೋಗದ ಸೆಲ್ ಸ್ಥಾಪನೆ: ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ

ಕಲಬುರಗಿ: ಕೌಟುಂಬಿಕ ದೌರ್ಜನ್ಯ, ಲೈಂಗಿಕ ದೌರ್ಜನ್ಯ ಹೀಗೆ ವಿವಿಧ ಪ್ರಕರಣಗಳಲ್ಲಿ ಮಹಿಳೆಯರು ದೂರು ನೀಡಲು ಅನುಕೂಲವಾಗುವಂತೆ ರಾಜ್ಯ ಮಹಿಳಾ ಆಯೋಗದ ಸೆಲ್ ಎಲ್ಲಾ ಜಿಲ್ಲಾ ಕೇಂದ್ರದಲ್ಲಿ ಸ್ಥಾಪಿಸಲಾಗುವುದು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಹೇಳಿದರು.

ಬುಧವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಆಯೋಗಕ್ಕೆ ದೂರು ಸಲ್ಲಿಸಲು ಜಿಲ್ಲಾ ಹಂತದಲ್ಲಿ ವ್ಯವಸ್ಥೆಯಾದರೆ ಇನ್ನು ಅನುಕೂಲ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಚೇರಿಯಲ್ಲಿಯೇ ಒಂದು ಸೆಲ್ ಸ್ಥಾಪಿಸಿ ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ದೂರದ ಬೆಂಗಳೂರಿಗೆ ಬರುವುದು ತಪ್ಪಲಿದೆ ಎಂದರು.

ಕಲಬುರಗಿ, ಕೋಲಾರ ದಂತಹ ಗಡಿ ಪ್ರದೇಶದಲ್ಲಿ ಮಹಿಳೆಯರ ಕಳ್ಳ ಸಾಗಾಣೆಗೆ ಕಡಿವಾಣ ಹಾಕಬೇಕಿದೆ. ಅಪಹರಣಕ್ಕೊಳಗಾಗುವ ಬಾಲಕೀಯರು, ಮಹಿಳೆಯರನ್ನು ಕಾನೂನು ಬಾಹಿರ ಚಡುವಟಿಕೆಗಳಿಗೆ ಬಳಸಿಕೊಳ್ಳುವ ದೊಡ್ಡ ಮಾಫಿಯಾ ಇದ್ದು, ಇದಕ್ಕೆಲ್ಲ ನಿಯಂತ್ರಣ ಹೇರಬೇಕಿದೆ. ಇದಕ್ಕಾಗಿ ಮಹಿಳಾ‌ ಸಂಬಂಧಿತ ಇಲಾಖೆಗಳು ಅರಿವು ಮೂಡಿಸುವ ಕಾರ್ಯಕ್ರಮ ಆಯೋಜನೆಗೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದು ಅವರು ಒತ್ತಿ ಹೇಳಿದರು.

ಕಲಬುರಗಿ ಜಿಲ್ಲೆಯಲ್ಲಿ ಮಿಷನ್ ಸುರಕ್ಷಾ, ಅನೆಮಿಯಾ ಮುಕ್ತ ಕರ್ನಾಟಕ‌ ಅಭಿಯಾನ, ಜನಸ್ನೇಹಿದಂತಹ ಮಹಿಳಾ ಸ್ನೇಹಿ ಕಾರ್ಯಕ್ರಮ ಆಯೋಜನೆಗೆ ಸಂತಸ ವ್ಯಕ್ತಪಡಿಸಿದ ಅಧ್ಯಕ್ಷರು, ಮಹಿಳಾ ಮಿಸ್ಸಿಂಗ್ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದರು.

ಇನ್ನು ಜಿಲ್ಲೆಯಲ್ಲಿ ನ್ಯಾಪಕಿನ್ ಹಾಳು, ಅಂಗನವಾಡಿಯಲ್ಲಿ ಕಳಪೆ ತತ್ತಿ ಪೂರೈಕೆ ಸಂಬಂಧ ಮುಖ್ಯಮಂತ್ರಿಗಳು ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರ‌ಗಮನಕ್ಕೆ ತರುವೆ ಎಂದು ಡಾ.ನಾಗಲಕ್ಷ್ಮೀ ಚೌಧರಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಡಿ.ಸಿ. ಬಿ.ಫೌಜಿಯಾ ತರನ್ನುಮ್, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಎಸ್.ಪಿ.ಅಕ್ಷಯ್ ಹಾಕೈ, ಡಿ.ಸಿ.ಪಿ. ಕನಿಕಾ ಸಿಕ್ರಿವಾಲ್, ಹೆಚ್ಚುವರಿ ಎಸ್.ಪಿ. ಶ್ರೀನಿಧಿ, ಎ.ಸಿ.ಪಿ. ಬಿಂದುಮಣಿ ಆರ್.ಎನ್. ಇದ್ದರು.

emedialine

Recent Posts

ಮಹಿಳೆಯರನ್ನು ಗೌರವಿಸುವ ಶ್ರೀಮಂತ ಸಂಪ್ರದಾಯ ಹೊಂದಿರುವ ದೇಶ ಭಾರತ

ಮಾರ್ಚ್ 8 ರಂದು ಅಂತರರಾಷ್ಟ್ರೀಯ ಮಹಿಳಾ ದಿನ ಅಶೋಕ ಪಾಟೀಲ ಮಹಿಳೆ ಅಥವಾ ಸ್ತ್ರೀ ಪದವು ಸಂಸ್ಕøತದ್ದು, ಕನ್ನಡದಲ್ಲಿ ಈ…

2 weeks ago

ನಿಧನ ವಾರ್ತೆ: ಭೀಮರಾವ.ಸಿ.ಸುಗೂರ

ಶಹಾಬಾದ:ನಗರದ ಹಳೆಶಹಾಬಾದನ ವೀರಶೈವ ಲಿಂಗಾಯತ ಸಮಾಜದ ಮುಖಂಡರಾದ ಭೀಮರಾವ.ಸಿ.ಸುಗೂರ (77) ಶನಿವಾರದಂದು ನಿಧನರಾಗಿದ್ದಾರೆ. ಇವರಿಗೆ ಇಬ್ಬರು ಸುಪುತ್ರರು, ಇಬ್ಬರು ಸುಪುತ್ರಿಯರು…

2 weeks ago

ನೆಲೋಗಿ ಬಿ.ಆರ್.ಅಂಬೇಡ್ಕರ ಭವನದಲ್ಲಿ ಛತ್ರಪತಿ ಶಿವಾಜಿಯ ಮಹಾರಾಜರ ಜನ್ಮ ದಿನಾಚರಣೆ

ಜೇವರ್ಗಿ: ಇಂದು ನೆಲೋಗಿ ಗ್ರಾಮದಲ್ಲಿ ಡಾ. ಅಂಬೇಡ್ಕರ್ ಸೇವಾ ಚಾರಿಟೇಬಲ್ ಟ್ರಸ್ಟ್ ನೆಲೋಗಿವತಿಯಿಂದ ಡಾ. ಬಿ.ಆರ್.ಅಂಬೇಡ್ಕರ ಸಮುದಾಯ ಭವನದಲ್ಲಿ ಛತ್ರಪತಿ…

4 weeks ago

ಸಮಾಜದಲ್ಲಿನ ಅನಿಷ್ಟ ಪದ್ಧತಿ ಹೋರಾಟ ಅಗತ್ಯ: ಮೇಯರ್

ಇ-ಮೀಡಿಯಾ ಲೈನ್ ನ್ಯೂಸ್ ಕಲಬುರಗಿ: ಮೂಢನಂಬಿಕೆ, ಅನಿಷ್ಟ ಪದ್ಧತಿ, ಸಂವಿಧಾನದ ಆಶಯ ಈಡೇಸುವ ನಿಟ್ಟಿನಲ್ಲಿ ಜನ್ಮ ತಾಳಿದ ಮಾನವ ಬಂಧುತ್ವ…

1 month ago

ಕಲಬುರಗಿ; 200 ಶಾಲಾ ಮಕ್ಕಳಿಗೆ ಆನಾಪಾನ ಧ್ಯಾನ ಆಯೋಜನೆ

ಕಲಬುರಗಿ: ನಗರದ ಸೆಂಟ್ ಮೇರಿ ಶಾಲೆಯಲ್ಲಿ 5 ರಿಂದ 9 ನೇ ತರಗತಿಯ 200 ಶಾಲಾ ಮಕ್ಕಳಿಗೆ ಆನಾಪಾನ ಧ್ಯಾನ…

1 month ago

ಉಚಿತ ಆರೋಗ್ಯ ತಪಾಸಣೆ ಶಿಬಿರ

ಜೇವರ್ಗಿ: ತಾಲೂಕಿನ ಜನರ ಸೇವೆಗಾಗಿ ಕಲಬುರಗಿಯ ಇಸ್ಲಾಮಾಬಾದ ಕಾಲೋನಿಯ ಅಲ್ ಶಿಫಾ ಆಸ್ಪತ್ರೆಯ ಮುಖ್ಯಸ್ಥರು ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು…

1 month ago