ಕಲಬುರಗಿ: ಕೌಟುಂಬಿಕ ದೌರ್ಜನ್ಯ, ಲೈಂಗಿಕ ದೌರ್ಜನ್ಯ ಹೀಗೆ ವಿವಿಧ ಪ್ರಕರಣಗಳಲ್ಲಿ ಮಹಿಳೆಯರು ದೂರು ನೀಡಲು ಅನುಕೂಲವಾಗುವಂತೆ ರಾಜ್ಯ ಮಹಿಳಾ ಆಯೋಗದ ಸೆಲ್ ಎಲ್ಲಾ ಜಿಲ್ಲಾ ಕೇಂದ್ರದಲ್ಲಿ ಸ್ಥಾಪಿಸಲಾಗುವುದು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಹೇಳಿದರು.
ಬುಧವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಆಯೋಗಕ್ಕೆ ದೂರು ಸಲ್ಲಿಸಲು ಜಿಲ್ಲಾ ಹಂತದಲ್ಲಿ ವ್ಯವಸ್ಥೆಯಾದರೆ ಇನ್ನು ಅನುಕೂಲ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಚೇರಿಯಲ್ಲಿಯೇ ಒಂದು ಸೆಲ್ ಸ್ಥಾಪಿಸಿ ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ದೂರದ ಬೆಂಗಳೂರಿಗೆ ಬರುವುದು ತಪ್ಪಲಿದೆ ಎಂದರು.
ಕಲಬುರಗಿ, ಕೋಲಾರ ದಂತಹ ಗಡಿ ಪ್ರದೇಶದಲ್ಲಿ ಮಹಿಳೆಯರ ಕಳ್ಳ ಸಾಗಾಣೆಗೆ ಕಡಿವಾಣ ಹಾಕಬೇಕಿದೆ. ಅಪಹರಣಕ್ಕೊಳಗಾಗುವ ಬಾಲಕೀಯರು, ಮಹಿಳೆಯರನ್ನು ಕಾನೂನು ಬಾಹಿರ ಚಡುವಟಿಕೆಗಳಿಗೆ ಬಳಸಿಕೊಳ್ಳುವ ದೊಡ್ಡ ಮಾಫಿಯಾ ಇದ್ದು, ಇದಕ್ಕೆಲ್ಲ ನಿಯಂತ್ರಣ ಹೇರಬೇಕಿದೆ. ಇದಕ್ಕಾಗಿ ಮಹಿಳಾ ಸಂಬಂಧಿತ ಇಲಾಖೆಗಳು ಅರಿವು ಮೂಡಿಸುವ ಕಾರ್ಯಕ್ರಮ ಆಯೋಜನೆಗೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದು ಅವರು ಒತ್ತಿ ಹೇಳಿದರು.
ಕಲಬುರಗಿ ಜಿಲ್ಲೆಯಲ್ಲಿ ಮಿಷನ್ ಸುರಕ್ಷಾ, ಅನೆಮಿಯಾ ಮುಕ್ತ ಕರ್ನಾಟಕ ಅಭಿಯಾನ, ಜನಸ್ನೇಹಿದಂತಹ ಮಹಿಳಾ ಸ್ನೇಹಿ ಕಾರ್ಯಕ್ರಮ ಆಯೋಜನೆಗೆ ಸಂತಸ ವ್ಯಕ್ತಪಡಿಸಿದ ಅಧ್ಯಕ್ಷರು, ಮಹಿಳಾ ಮಿಸ್ಸಿಂಗ್ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದರು.
ಇನ್ನು ಜಿಲ್ಲೆಯಲ್ಲಿ ನ್ಯಾಪಕಿನ್ ಹಾಳು, ಅಂಗನವಾಡಿಯಲ್ಲಿ ಕಳಪೆ ತತ್ತಿ ಪೂರೈಕೆ ಸಂಬಂಧ ಮುಖ್ಯಮಂತ್ರಿಗಳು ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಗಮನಕ್ಕೆ ತರುವೆ ಎಂದು ಡಾ.ನಾಗಲಕ್ಷ್ಮೀ ಚೌಧರಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಡಿ.ಸಿ. ಬಿ.ಫೌಜಿಯಾ ತರನ್ನುಮ್, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಎಸ್.ಪಿ.ಅಕ್ಷಯ್ ಹಾಕೈ, ಡಿ.ಸಿ.ಪಿ. ಕನಿಕಾ ಸಿಕ್ರಿವಾಲ್, ಹೆಚ್ಚುವರಿ ಎಸ್.ಪಿ. ಶ್ರೀನಿಧಿ, ಎ.ಸಿ.ಪಿ. ಬಿಂದುಮಣಿ ಆರ್.ಎನ್. ಇದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…