ಬಿಸಿ ಬಿಸಿ ಸುದ್ದಿ

ರೈತ ಪರ ವಿರೋಧಿ ಕಾಂಗ್ರೆಸ್ ಸರ್ಕಾರ

ಕಲಬುರಗಿ: ರಾಜ್ಯ ಸರ್ಕಾರ ಜನಪರ, ರೈತಪರ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಬಿಜೆಪಿ ಜಿಲ್ಲಾ ರೈತ ಮೋರ್ಚಾದ ಜಿಲ್ಲಾ ಅಧ್ಯಕ್ಷ ಬಸವರಾಜ್ ಪಾಟೀಲ್ ಕಮಲಾಪುರ ಖಂಡಿಸಿದ್ದಾರೆ.

ಕಳೆದ ಬಜೆಟ್ ನಲ್ಲಿ ಪೆÇ್ರೀತ್ಸಾಹ ಧನಕ್ಕೆ ಬಿಡುಗಡೆಯಾಗಿದ್ದ ಹಣವನ್ನು ಪಶುಪಲನಾ ಇಲಾಖೆ ಇತರೆ ಖರ್ಚು ವೆಚ್ಚಗಳಿಗೆ ಬಳಕೆಮಾಡಿಕೊಂಡಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಷಯದ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಬಾಕಿ ಉಳಿದಿರುವ ಎಂಟು ತಿಂಗಳ ಹಣವನ್ನು ಯಾವಾಗ ಕೊಡುತ್ತಾರೆ ಎಂದು ರೈತರು ಪ್ರಶ್ನಿಸಿದರೆ, ಹಾಲು ಒಕ್ಕೂಟದ ಅಧಿಕಾರಿಗಳು ಸಹಕಾರಿ ಇಲಾಖೆಯತ್ತ ಬೊಟ್ಟು ಮಾಡುತ್ತಾರೆ. ಸಹಕಾರ ಇಲಾಖೆಯವರು ಆರ್ಥಿಕ ಇಲಾಖೆ ಮೇಲೆ ಬೊಟ್ಟು ಮಾಡುತ್ತಾರೆ. ಈ ಗೊಂದಲದ ಬಗ್ಗೆ ರೈತರಿಗೆ ಮನವರಿಕೆ ಮಾಡಿಕೊಡಬೇಕು. ಹಾಲಿನ ಪೆÇ್ರೀತ್ಸಹ ಧನವೂ ಇಲ್ಲ. ಬರ ಪರಿಹಾರದ ಹಣವೂ ಇಲ್ಲ, ಬಿತ್ತನೆ ಬೀಜಗಳ ಬೆಲೆ ಏರಿಕೆಯಾಗಿದೆ.

ಭೂ ಸಿರಿ ಯೋಜನೆಯನ್ನು ನಿಲ್ಲಿಸಲಾಗಿದೆ, ರೈತ ವಿದ್ಯಾನಿಧಿ ಯೋಜನೆಯನ್ನು ನಿಲ್ಲಿಸಲಾಗಿದೆ. ದುಪ್ಪಟ್ಟು ಹಣವನ್ನು ಟ್ರಾನ್ಸ್ ಫಾರ್ಮರ್ ಗಳಿಗೆ ನೀಡುವಂತಾಗಿದೆ, ಪೆಟ್ರೋಲ್, ಡೀಸೆಲ್ ಬೆಲೆಯನ್ನು ಏರಿಕೆಮಾಡಲಾಗಿದೆ, ಮುದ್ರಾಂಕ ದರವನ್ನು ಏರಿಸಿದೆ, ಆಸ್ತಿ ನೋಂದಣಿ ಶೇ.30 ರಷ್ಟು ಹೆಚ್ಚಾಗಿದೆ, ಕ್ಷೀರ ಸಮೃದ್ಧಿ ಬ್ಯಾಂಕ್ ಯಾಕೆ ಪ್ರಾರಂಭಿಸಿಲ್ಲ, 824 ರೈತರ ಆತ್ಮ ಹತ್ಯೆಗೆ ಕಾರಣಗಳೇನು? ಸರಕಾರ ತಿಳಿಸಬೇಕು ಎಂದು ಅವರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

39 mins ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

43 mins ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

3 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

3 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

3 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

4 hours ago