ಬಿಸಿ ಬಿಸಿ ಸುದ್ದಿ

ಡಿಸಿಸಿ ಅಧ್ಯಕ್ಷರನ್ನಾಗಿ ಮುಕ್ತಾರ್ ಪಟೇಲ್ ನೇಮಕಕ್ಕೆ ಒತ್ತಾಯ

  • ಎಂ.ಡಿ ಮಶಾಖ ಚಿತ್ತಾಪುರ

ಚಿತ್ತಾಪುರ; ಕಾಂಗ್ರೆಸ್ ಪಕ್ಷದ ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಕಾಂಗ್ರೆಸ್ ಪಕ್ಷದ ಕಟ್ಟಾಳು ಮುಕ್ತಾರ್ ಪಟೇಲ್ ಅವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕೆಂದು ಯುವ ಕಾಂಗ್ರೆಸ್ ಮುಖಂಡ ಇಬ್ರಾಹೀಂ ಶೇಖ ಅವರು ಒತ್ತಾಯಿಸಿದ್ದಾರೆ.

ಕಳೆದ 30 ವರ್ಷಗಳಿಂದ ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಅಲ್ಪಸಂಖ್ಯಾತರ ಮತಗಳು ವಿಭಜನೆಯಾದಂತೆ ಒಗ್ಗೂಡಿಸಿ ಸಂಘಟಿಸುವುದರಲ್ಲಿ ಇವರ ಶ್ರಮ ಸಾಕಷ್ಟಿದೆ‌. ಇವರು ಯಾವುದೇ ಅಧಿಕಾರಕ್ಕೆ ಆಸೆ ಪಡೆದೆ ಸಾಮಾನ್ಯ ಕಾರ್ಯಕರ್ತನಂತೆ ಸೇವೆ ಸಲ್ಲಿಸುತ್ತಿದ್ದಾರೆ. ಲೋಕಸಭೆ, ವಿಧಾನಸಭೆ, ವಿಧಾನ ಪರಿಷತ್, ಎಪಿಎಂಸಿ, ಜಿಪಂ, ತಾಪಂ, ಪುರಸಭೆ ಚುನಾವಣೆಗಳಲ್ಲಿ ಅಭ್ಯರ್ಥಿಗಳ ಗೆಲುವಿಗೆ ಹಗಲು ರಾತ್ರಿ ಎನ್ನದೇ ಶ್ರಮಿಸಿದ್ದಾರೆ ಎಂದರು.

ಇದೀಗ ಹಾಲಿ ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಅಲ್ಪಸಂಖ್ಯಾತರಲ್ಲದೇ ಎಲ್ಲಾ ಜಾತಿಗಳ ಸಮುದಾಯದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸರ್ವ ಕಾರ್ಯಕರ ಕುಂದು ಕೊರತೆಗಳಿಗೆ ಸ್ಪಂಧಿಸುತ್ತಾ ಎಲ್ಲರ ವಿಶ್ವಾಸ ಗಳಿಸಿದ್ದಾರೆ. ಹೀಗಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಕ್ತಾರ್ ಪಟೇಲ್ ಅವರ ಸೇವೆಯನ್ನು‌ ಪರಿಗಣಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

emedialine

Recent Posts

KKRDB ಸಭೆ: 5,000 ಕೋಟಿ ರೂ. ಅನುದಾನಕ್ಕೆ ಕ್ರಿಯಾ ಯೋಜನೆ ರೂಪಿಸಲು ಅನುಮೋದನೆ

ಕಲಬುರಗಿ: ಪ್ರಸಕ್ತ 2024-25ನೇ ಸಾಲಿನ ಆಯವ್ಯಯದಲ್ಲಿ ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕ ಪ್ರದೇಶದ‌ ಅಭಿವೃದ್ಧಿಗೆ ಘೋಷಿಸಿರುವ 5,000 ಕೋಟಿ ರೂ.…

10 hours ago

ರೋಗಿಗಳ ಆತ್ಮವಿಶ್ವಾಸ ಹೆಚ್ಚಿಸಲು ರೋಗಿಗಳೊಂದಿಗೆ ವೈದ್ಯರು ಹೆಚ್ಚು ಮಾತಾಡಬೇಕು: ಡಾ. ಫಾರುಕ್ ಮನ್ನೂರ

ಕಲಬುರಗಿ: ರೋಗಿಗಳೊಂದಿಗೆ ವೈದ್ಯರು ಹೆಚ್ಚುಹೊತ್ತು ಮಾತನಾಡಿದಷ್ಟು ಆತ್ಮವಿಶ್ವಾಸ ರೋಗಿಗಳಲ್ಲಿ ಬೆಳೆಯುತ್ತದೆ ಜತೆಗೆ ಕಾಯಿಲೆಯ ಬಗ್ಗೆ ವೈದ್ಯರಿಗೂ ಸ್ಪಷ್ಠತೆ ಸಿಗುತ್ತದೆ. ಇದರಿಂದಾಗಿ…

10 hours ago

ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯ ಗ್ರಾಜುವೇಷನ್ ಡೇ

ಸುರಪುರ: ನಗರದ ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇಂಜಿನಿಯರಿಂಗ್, ಎಂಬಿಎ ಮತ್ತು ಎಂ.ಟೆಕ್ ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಗ್ರಾಜುವೇಷನ್ ಡೇ…

10 hours ago

ಮಹಿಳೆಯರು ಅನ್ಯಾಯದ ವಿರುದ್ಧ ನಿಲ್ಲುವುದು ಅವಶ್ಯಕ: ಶೋಭಾ.ಎಸ್

ಶಹಾಬಾದ: ಮಹಿಳೆಯರು ಅನ್ಯಾಯದ ವಿರುದ್ಧ ಹೋರಾಟದ ಜತೆಗೆ ವೈಚಾರಿಕವಾಗಿ ಗಟ್ಟಿಯಾಗಿ ನಿಲ್ಲುವುದು ಬಹಳ ಅವಶ್ಯಕ ಎಂದು ಐಎಂಎಸ್‍ಎಸ್ ರಾಜ್ಯ ಕಾರ್ಯದರ್ಶಿ…

10 hours ago

ಸರಕಾರಿ ಪದವಿಪೂರ್ವ ಕಾಲೇಜಿಗೆ ಮೂಲಸೌಲಭ್ಯ ಒದಗಿಸಬೇಕೆಂದು ಪ್ರತಿಭಟನೆ

ಶಹಾಬಾದ: ನಗರದ ಸರಕಾರಿ ಪದವಿಪೂರ್ವ ಕಾಲೇಜಿಗೆ ಖಾಯಂ ಉಪನ್ಯಾಸಕರನ್ನು ನೇಮಿಸಬೇಕು ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಸೋಮವಾರ ಎಐಡಿಎಸ್‍ಓ…

11 hours ago

ವೈದ್ಯರು, ಪತ್ರಕರ್ತರಿಗಿದು ಸವಾಲಿನ ಸಮಯ: ಪೊಲೀಸ್ ಕಮೀಷರನರ್ ಚೇತನ್ ಆರ್

ಕಲಬುರಗಿ: ಇಂಟರ್ನೆಟ್ ಮತ್ತು ಸಾಮಾಜಿಕ ಮಾಧ್ಯಮಗಳು ಉಚ್ಛ್ರಾಯ ಸ್ಥಿತಿಯಲ್ಲಿರುವ ಇಂದಿನ ದಿನಗಳಲ್ಲಿ ವೈದ್ಯರು ಮತ್ತು ಪತ್ರಕರ್ತರು ಸವಾಲಿನ ಸನ್ನಿವೇಶಗಳನ್ನು ಎದುರಿಸುತ್ತಿದ್ದಾರೆ…

11 hours ago