ಬಿಸಿ ಬಿಸಿ ಸುದ್ದಿ

ಸರ್ಕಾರಿ ಶಾಲೆ ಬಗ್ಗೆ ಮುಜುಗರ ಬೇಡಾ

ಕಲಬುರಗಿ: ಮಕ್ಕಳಿಗಾಗಿ ಆಸ್ತಿ ಮಾಡಬೇಡಿ, ಮಕ್ಕಳನ್ನೇ ಆಸ್ತಿ ಮಾಡಿ, ಪ್ರತಿಯೊಂದಕ್ಕೂ ಯಾವುದಾದರೂ ಒಂದು ಸರ್ಕಾರಿ ನೌಕರಿ ಬೇಕು ಎಂದು ಹೇಳವ ಪಾಲಕರು ಏಕೆ ನಿಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತೀರಿ’ ಸರ್ಕಾರಿ ಶಾಲೆ ಬಗ್ಗೆ ಮುಜುಗರ ಬೇಡಾ ಎಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕ ಜಗದೇವ ಕುಂಬಾರ ಹೇಳಿದರು.

ತಾಲೂಕಿನ ಕದ್ದರ್ಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಎಎಲ್.ಎಲ್ಎಲ್ಎಫ್ ಸಂಸ್ಥೆ ಹಮ್ಮಿಕೊಂಡಿದ್ದ ಶಾಲಾ ದಾಖಲಾತಿ ಆಂದೋಲನ ಅಂಗವಾಗಿ ಮಂಗಳವಾರ ನಡೆದ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಆರು ವರ್ಷದ ಮೇಲ್ಪಟ್ಟ ಹೆಣ್ಣಿರಲಿ, ಗಂಡಿರಲಿ ತಪ್ಪದೇ ಸರ್ಕಾರಿ ಶಾಲೆಯಲ್ಲಿ ಮಕ್ಕಳನ್ನು ನೋಂದಾಯಿಸಿ ಮಕ್ಕಳ ಶಿಕ್ಷಣ ಕಲಿಕೆಗೆ ಪಾಲಕರು ಸಹಕರಿಸಬೇಕು.

ಶಾಲಾ ಮಕ್ಕಳಿಗಾಗಿ ಉಚಿತ ಸಮವಸ್ತ್ರ, ಹಾಲು, ಪುಸ್ತಕ, ಬಿಸಿಯೂಟ, ಶೂಭಾಗ್ಯ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಮಕ್ಕಳನ್ನು ಶಿಕ್ಷಣವಂತರನ್ನಾಗಿ ಮಾಡಬೇಕು ಎಂದರು.

ಎಎಲ್.ಎಲ್ಎಲ್ಎಫ್ ಸಂಸ್ಥೆಯು ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಸಮಾಜದಲ್ಲಿ ಒಳ್ಳೆಯ ಕೆಲಸ ಮಾಡುತ್ತಿದೆ. ಇಂದು ನಮ್ಮ ಶಾಲೆಯಲ್ಲಿ ನಡೆದ ಈ ದಾಖಲಾತಿ ಆಂದೋಲನ ಸಾಕ್ಷಿಯಾಗಿದೆ ಎಂದು ಹೇಳಿದರು.

ಶಾಲಾ ಮುಖ್ಯಗುರುಗಳಾದ ಚಂದ್ರಕಾಂತ ಐನಾಪೂರ ಮಾತನಾಡಿ ರಜೆ ಕಳೆದಿರುವ ಮಕ್ಕಳು ಶಾಲಾ ಆರಂಭದ ದಿನಗಳಲ್ಲಿ ಶಾಲೆಗೆ ಬರುವುದಿಲ್ಲ. ಇದನ್ನು ಗಮನದಲ್ಲಿಟ್ಟುಕೊಂಡು ನಾವು ಎತ್ತಿನಗಾಡಿ ಮೆರವಣಿಗೆ ಮಾಡುವ ಮೂಲಕ ಗ್ರಾಮದಲ್ಲಿ ದಾಖಲಾತಿ ಆಂದೋಲನ ಮತ್ತು ಶಾಲೆಗೆ ಮಕ್ಕಳನ್ನು ಕಳುಹಿಸಿ ಎಂದು ಜನರಲ್ಲಿ ಜಾಗೃತಿ ಮೂಡಿಸಿದ್ದೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮುಖ್ಯಗುರುಗಳಾದ ಈಶ್ವರ್ ಜೀವಣಗಿ, ದೇವೆಂದ್ರಪ್ಪ ಭಾಗೋಡಿ, ಶ್ರೀಮತಿ ವಿಜಯಲಕ್ಷ್ಮಿ ಮಾಡಬೂಳ, ಎಸ್ಡಿಎಂಸಿ ಅಧ್ಯಕ್ಷ ಶ್ರೀಶೈಲ,ಮುಖ್ಯ ಅತಿಥಿಗಳಾದ ವೆಂಕಟೇಶ್ ರಾವೂರ, ಪ್ರದೀಪ್ ಪೂಜಾರಿ, ಎಎಲ್. ಎಲ್ಎಲ್ಎಫ್ ಸಂಸ್ಥೆಯ ಎಸ್ಆರ್ ಪಿ ರೇಷ್ಮಾ, ಶಿಕ್ಷಕರಾದ ನಾಗಮ್ಮ ಕುಂಬಾರ, ಸಂಪಣ್ಣಗೌಡ, ಸಂಸ್ಥೆಯ ಸಂಪನ್ಮೂಲ ಶಿಕ್ಷಕರಾದ ಸರೀತಾ ಜೀವಣಗಿ, ಹಣಮಂತ ಕುಂಬಾರ, ಗೌತಮಿ, ಮಲ್ಲಮ್ಮ ಮುಡಬೂಳ, ಸುವರ್ಣ, ತಿಪ್ಪಣ್ಣ ಭಾಗೋಡಿ, ಶಿವಲಿಂಗಪ್ಪ, ಗ್ರಾಮದ ಮುಖಂಡರಾದ ಸುಭಾಷ್ ಚಂದ್ರ ಬೆಳಗುಂಪಿ, ಬಸಂತ್ ಗುತ್ತೇದಾರ್, ದಶರಥ್, ಸೇರಿದಂತೆ ಇತರರು ಇದ್ದರು.

emedialine

Recent Posts

KKRDB ಸಭೆ: 5,000 ಕೋಟಿ ರೂ. ಅನುದಾನಕ್ಕೆ ಕ್ರಿಯಾ ಯೋಜನೆ ರೂಪಿಸಲು ಅನುಮೋದನೆ

ಕಲಬುರಗಿ: ಪ್ರಸಕ್ತ 2024-25ನೇ ಸಾಲಿನ ಆಯವ್ಯಯದಲ್ಲಿ ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕ ಪ್ರದೇಶದ‌ ಅಭಿವೃದ್ಧಿಗೆ ಘೋಷಿಸಿರುವ 5,000 ಕೋಟಿ ರೂ.…

10 hours ago

ರೋಗಿಗಳ ಆತ್ಮವಿಶ್ವಾಸ ಹೆಚ್ಚಿಸಲು ರೋಗಿಗಳೊಂದಿಗೆ ವೈದ್ಯರು ಹೆಚ್ಚು ಮಾತಾಡಬೇಕು: ಡಾ. ಫಾರುಕ್ ಮನ್ನೂರ

ಕಲಬುರಗಿ: ರೋಗಿಗಳೊಂದಿಗೆ ವೈದ್ಯರು ಹೆಚ್ಚುಹೊತ್ತು ಮಾತನಾಡಿದಷ್ಟು ಆತ್ಮವಿಶ್ವಾಸ ರೋಗಿಗಳಲ್ಲಿ ಬೆಳೆಯುತ್ತದೆ ಜತೆಗೆ ಕಾಯಿಲೆಯ ಬಗ್ಗೆ ವೈದ್ಯರಿಗೂ ಸ್ಪಷ್ಠತೆ ಸಿಗುತ್ತದೆ. ಇದರಿಂದಾಗಿ…

10 hours ago

ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯ ಗ್ರಾಜುವೇಷನ್ ಡೇ

ಸುರಪುರ: ನಗರದ ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇಂಜಿನಿಯರಿಂಗ್, ಎಂಬಿಎ ಮತ್ತು ಎಂ.ಟೆಕ್ ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಗ್ರಾಜುವೇಷನ್ ಡೇ…

10 hours ago

ಮಹಿಳೆಯರು ಅನ್ಯಾಯದ ವಿರುದ್ಧ ನಿಲ್ಲುವುದು ಅವಶ್ಯಕ: ಶೋಭಾ.ಎಸ್

ಶಹಾಬಾದ: ಮಹಿಳೆಯರು ಅನ್ಯಾಯದ ವಿರುದ್ಧ ಹೋರಾಟದ ಜತೆಗೆ ವೈಚಾರಿಕವಾಗಿ ಗಟ್ಟಿಯಾಗಿ ನಿಲ್ಲುವುದು ಬಹಳ ಅವಶ್ಯಕ ಎಂದು ಐಎಂಎಸ್‍ಎಸ್ ರಾಜ್ಯ ಕಾರ್ಯದರ್ಶಿ…

10 hours ago

ಸರಕಾರಿ ಪದವಿಪೂರ್ವ ಕಾಲೇಜಿಗೆ ಮೂಲಸೌಲಭ್ಯ ಒದಗಿಸಬೇಕೆಂದು ಪ್ರತಿಭಟನೆ

ಶಹಾಬಾದ: ನಗರದ ಸರಕಾರಿ ಪದವಿಪೂರ್ವ ಕಾಲೇಜಿಗೆ ಖಾಯಂ ಉಪನ್ಯಾಸಕರನ್ನು ನೇಮಿಸಬೇಕು ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಸೋಮವಾರ ಎಐಡಿಎಸ್‍ಓ…

10 hours ago

ವೈದ್ಯರು, ಪತ್ರಕರ್ತರಿಗಿದು ಸವಾಲಿನ ಸಮಯ: ಪೊಲೀಸ್ ಕಮೀಷರನರ್ ಚೇತನ್ ಆರ್

ಕಲಬುರಗಿ: ಇಂಟರ್ನೆಟ್ ಮತ್ತು ಸಾಮಾಜಿಕ ಮಾಧ್ಯಮಗಳು ಉಚ್ಛ್ರಾಯ ಸ್ಥಿತಿಯಲ್ಲಿರುವ ಇಂದಿನ ದಿನಗಳಲ್ಲಿ ವೈದ್ಯರು ಮತ್ತು ಪತ್ರಕರ್ತರು ಸವಾಲಿನ ಸನ್ನಿವೇಶಗಳನ್ನು ಎದುರಿಸುತ್ತಿದ್ದಾರೆ…

11 hours ago