ಬಿಸಿ ಬಿಸಿ ಸುದ್ದಿ

ಸಿಮೆಂಟ್ ಕಾರ್ಖಾನೆಗಳಲ್ಲಿ 50% ಸ್ಥಳಿಯರಿಗೆ ಉದ್ಯೋಗ ನೀಡಲು ಕೇಂದ್ರ ಸಚಿವರಿಗೆ ಮನವಿ

ಶಹಾಬಾದ, ಕಡೇಚೂರು-ಬಾಡಿಯಾಳ ಕಾರ್ಖಾನೆ ಪುನರ ಪ್ರಾರಂಭಿಸಲು ಮನವಿ

ಕಲಬುರಗಿ : ಕಲಬುರಗಿ ಜಿಲ್ಲೆಯಲ್ಲಿ ಅನೇಕ ಸಿಮೆಂಟ್ ಕಾರ್ಖಾನೆ ಹಾಗೂ ಸಕ್ಕರೆ ಕಾರ್ಖಾನೆ ಗಳದ್ದು ಅದರಲ್ಲಿ ಶೇ 50% ಹುದ್ದೆಗಳನ್ನು ಸ್ಥಳಿಯರಿಗೆ ನೀಡುವುದರ ಮೂಲಕ ನಮ್ಮ ಕಲಬುರಗಿ ಜಿಲ್ಲೆಯ ಜನರಿಗೆ ಗುಳೆ ಹೊಗುವುದನ್ನು ತಪ್ಪಿಸಲು ಕಾರ್ಖಾನೆಗಳಿಗೆ ನಿರ್ದೆಶನ ನೀಡಬೇಕೆಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಜೆಡಿಎಸ್ ಪಕ್ಷದ ಕಲಬುರಗಿ ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೇದಾರ ಮನವಿ ಮಾಡಿದ್ದಾರೆ.

ಬೆಂಗಳೂರಿನ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ನಿವಾಸದಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿ ಯಾದಗೀರಿ ಜಿಲ್ಲೆಯ ಹಿಂದುಳಿದ ಈ ಭಾಗದಲ್ಲಿ ಬೃಹತ್ ಕೈಗಾರಿಕೆಗಳು ಬರಲಿ ಎಂಬ ಉದ್ದೇಶದಿಂದ ಸರ್ಕಾರ ಕಡೇಚೂರು,ಬಾಡಿಯಾಳ ಮತ್ತು ಶೆಟ್ಟಿಹಳ್ಳಿ ಗ್ರಾಮಗಳಿಗೆ ಸೇರಿದ್ದ 3,232 ಎಕರೆ ಭೂಮಿಯನ್ನು ಕೆಐಎಡಿಬಿ 2012-13ರಲ್ಲಿ ಸ್ವಾಧೀನ ಪಡಿಸಿಕೊಂಡಿತು.

ಈ ಜಾಗ ಸ್ವಾಧೀನಪಡಿಸಿಕೊಂಡು ದಶಕ ಮೇಲಾಯಿತು. ಆದರೆ, ಅಂತಹ ಉದ್ಯಮಗಳು ಸ್ಥಾಪನೆಗೊಳ್ಳಲಿಲ್ಲ. ಗಡಿ ಪ್ರದೇಶದಲ್ಲಿ ಥರ್ಮಲ್ ಪವರ್. ಜವಳಿ ಪಾರ್ಕ, ಕೋಕಾ ಕೋಲಾ ಕಂಪನಿ ಸೇರಿದಂತೆ ಹಲವು ದೈತ್ಯ ಕಂಪನಿಗಳು ಇಲ್ಲಿಗೆ ಬಂದು ಕೈಗಾರಿಕಾ ಸ್ಥಾಪಿಸಿದರೆ ಕಲ್ಯಾಣ ಕರ್ನಾಟಕ ಭಾಗದ ನಿರುದ್ಯೋಗ ನಿವಾರಣೆಯಾಗಲಿದೆ. ಅಲ್ಲದೆ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಆದರೆ, ದಶಕ ಕಳೆದರೂ ಅಲ್ಲಿ ಒಂದು ಬೃಹತ್ ಕೈಗಾರಿಕೆ ಬರಲಿಲ್ಲ.

ಕನಸು ಮತ್ತು ಉತ್ಸಾಹಕ್ಕೆ ತಣ್ಣಿರು ಬಿದ್ದು ಭೂಮಿ ಕೊಟ್ಟ ರೈತರು ಕಂಗಾಲಾಗಿದ್ದು ಜನರು , ಗುಳೆ ಹೋಗುತ್ತಿದ್ದಾರೆ ಆದಕಾರಣ ತಾವೂ ಬೃಹತ ಕೈಗಾರಿಕೆಗಳನ್ನು ಪ್ರಾರಂಭಿಸಬೇಕು, ಹಾಗೂ ಕಲಬುರಗಿ ಜಿಲ್ಲೆಯ ಶಹಾಬಾದ ಎಸಿಸಿ ಸಿಮೆಂಟ್ ಕಾರ್ಖಾನೆ ಸ್ಥಗಿತ್ತಾವಾಗಿದ್ದು ಕಾರ್ಖಾನೆ ಪುನರ ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು ಇದರಿಂದ ಕಲ್ಯಾಣ ಕರ್ನಾಟಕ ಭಾಗದ ಅರ್ಹವಿದ್ಯಾವಂತರಿಗೆ ಉದ್ಯೋಗ ಸಿಗಲಿವೆ. ಇದರಿಂದಾಗಿ ಗುಳೆ ಹೋಗುವುದು ಕೊಂಚ ತಪ್ಪಲಿದೆ ಎಂದು ಮನವಿ ಮಾಡಿದ್ದರು.

ಕಲಬುರಗಿ ಜಿಲ್ಲೆಯಲ್ಲಿ ಬೃಹತ್ ಕೈಗಾರಿಕೆಗಳು ಬರಲಿವೆ ಎಂಬ ಆಸೆಯಿಂದ ರೈತರು ಭೂಮಿ ಕೊಟ್ಟರು. ಆದರೆ, ಕಾರ್ಖಾನೆ ಅವರು ಭೂಮಿ ಕೊಟ್ಟ ರೈತರಿಗೆ ಕುಟುಂಬಗಳಿಗೆ ಬಹುತೇಕ ಕಡೆ ಇನ್ನೂವರೆಗೂ ಉದ್ಯೋಗ ನೀಡುತ್ತಿಲ್ಲಾ ಹಾಗೂ ಸ್ಥಳಿಯ ಪ್ರತಿಭಾವಂತ ನಿರುದ್ಯೊಗಿಗಳಿಗೂ ಉದ್ಯೊಗ ನೀಡುತ್ತಿಲ್ಲಾ ಇದರ ಕುರಿತು ಕೇಂದ್ರ ಸಚಿವರ ಗಮನಕ್ಕೆ ತರಲಾಗಿದೆ.- ಬಾಲರಾಜ್ ಗುತ್ತೇದಾರ, ಜಿಲ್ಲಾ ಜೆಡಿಎಸ್ ಅಧ್ಯಕ್ಷರು ಕಲಬುರಗಿ.

emedialine

Recent Posts

ಕಲಬುರಗಿ: ಸಿಸಿ ರಸ್ತೆ ಕಾಮಗಾರಿಗೆ ಚಾಲನೆ

ಕಲಬುರಗಿ: ಮಹಾನಗರ ಪಾಲಿಕೆ ವಾರ್ಡ್ ಸಂಖ್ಯೆ 15ರ ಫಿರದೋಸ್ ಕಾಲೋನಿ ಬಡಾವಣೆಯಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಸೈಯದ್ ಮಿರಾಜೊದ್ದೀನ್ ಕಾಶೀಪ್…

2 hours ago

ಸಿಯುಕೆಯಲ್ಲಿ ರಾಷ್ಟ್ರೀಯ ಅಪ್ರೆಂಟಿಸ್‍ಶಿಪ್ ತರಬೇತಿ ಯೋಜನೆ ಕುರಿತು ಜಾಗೃತಿ

ಕಲಬುರಗಿ: "ನ್ಯಾಷನಲ್ ಅಪ್ರೆಂಟಿಸ್‍ಶಿಪ್ ಟ್ರೈನಿಂಗ್ ಸ್ಕೀಮ್ (ಓಂಖಿS) ಐಟಿಐ, ಪಿಯುಸಿ, ಡಿಪೆÇ್ಲೀಮಾ ಮತ್ತು ಪದವೀಧರರು ಸೇರಿದಂತೆ ತಾಂತ್ರಿಕ ಮತ್ತು ತಾಂತ್ರಿಕೇತರ…

3 hours ago

ಭಾರತ ಸೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯಿಂದ ಸಮಾಲೋಚನ ಕಾರ್ಯಗಾರ

ಕಲಬುರಗಿ: ಭಾರತ ಸೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ನಗರದ ಅಪ್ಪಾ ಪಬ್ಲಿಕ್ ಶಾಲೆಯ ಲಿಂ.ಡಾ.ಬಸವರಾಜಪ್ಪ ಅಪ್ಪಾ ಸ್ಮಾರಕ ಭವನದಲ್ಲಿಂದು…

3 hours ago

ಖಾಸಗಿ ಶಾಲೆಯ ಡೊನೇಷನ್ ಹಾವಳಿ ತಡೆಯುವಂತೆ ಆಗ್ರಹಿಸಿ ಮನವಿ

ಕಲಬುರಗಿ: ಜಿಲ್ಲೆಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಶೈಕ್ಷಣಿಕ ಶುಲ್ಕ ಹೆಚ್ಚಳ ಹಾಗೂ ಕಟ್ಟಡ ಮತ್ತು ಪ್ರವೇಶ ಶುಲ್ಕ ಹೆಸರಿನಲ್ಲಿ ಡೊನೇಷನ್…

3 hours ago

ಪರಿಚಲನೆ ಅಭಿನಂದನಾ ಗ್ರಂಥ ಲೋಕಾರ್ಪಣೆ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದಲ್ಲಿ ಜರುಗುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರ…

3 hours ago

ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕರ ಅರ್ಜಿ ಸ್ವೀಕಾರ

ಸಾರ್ವಜನಿಕರ ಕೆಲಸಗಳಿಗೆ ವಿಳಂಬ ಮಾಡುವುದು ಸರಿಯಲ್ಲ: ಡಿವೈಎಸ್ಪಿ ಹಣಮಂತ್ರಾಯ ಸುರಪುರ: ಸಾರ್ವಜನಿಕರು ತಮ್ಮ ಯಾವುದೇ ಕೆಲಸಗಳಿಗೆ ಕಚೇರಿಗೆ ಬಂದರೆ ವಿಳಂಬ…

3 hours ago