ಕಲಬುರಗಿ; ಅಪರಿಚಿತ ವ್ಯಕ್ತಿಗಳು ಸರ್ಕಾರಿ ಅಧಿಕಾರಿ-ನೌಕರರಿಗೆ ಕರೆ ಮಾಡಿ ತಾನು ಲೋಕಾಯುಕ್ತ ಅಧಿಕಾರಿ ಎಂದು ಬಿಂಬಿಸಿಕೊಂಡು ಹಣ ಕೇಳಿದಲ್ಲಿ ಮೊಬೈಲ್ ನಲ್ಲಿ ಅದನ್ನು ರೆಕಾರ್ಡ್ ಮಾಡಿಕೊಂಡು ಹತ್ತಿರದ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿ ಎಂದು ಕಲಬುರಗಿ ಲೋಕಾಯುಕ್ತ ಎಸ್.ಪಿ. ಆ್ಯಂಟನಿ ಜಾನ್ ಜೆ.ಕೆ. ತಿಳಿಸಿದ್ದಾರೆ.
ಕೆಲವು ಅಪರಿಚಿತರು 9156540734 ಹಾಗೂ ಇತರೆ ಸಂಖ್ಯೆಗಳಿಂದ ಸರ್ಕಾರಿ ನೌಕರರಿಗೆ ಕರೆ ಮಾಡಿ ತಾವು ಡಿ.ಎಸ್ಪಿ, ಲೋಕಾಯುಕ್ತ ಬೆಂಗಳೂರು/ ಕಲಬುರಗಿ/ ಬೀದರ/ ಯಾದಗಿರ ಎಂದು ಹೇಳಿ ತಮ್ಮ ವಿರುದ್ಧ ಲೋಕಾಯುಕ್ತದಲ್ಲಿ ದೂರು ಇದೆ, ತಮ್ಮನ್ನು ಕಾಣುವಂತೆ ನಿಗದಿತ ಸ್ಥಳಕ್ಕೆ ಬರಲು ತಿಳಿಸಿ ಗೂಗಲ್ ಪೇ ಅಥವಾ ಪೋನ್ ಪೇ ಮೂಲಕ ಹಣ ಹಾಕಲು ಇಲ್ಲದಿದ್ದಲ್ಲಿ ಲೋಕಾಯುಕ್ತ ರೇಡ್ ಅಥವಾ ಟ್ರ್ಯಾಪ್ ಮಾಡುತ್ತೇವೆ ಎಂದು ಹೆದರಿಸುತ್ತಿರುವ ಬಗ್ಗೆ ಮಾಹಿತಿ ಬಂದಿದೆ.
ಹೀಗಾಗಿ ಕಲಬುರಗಿ ಜಿಲ್ಲೆಯ ಸರ್ಕಾರಿ ನೌಕರರು ಈ ರೀತಿಯಾಗಿ ಯಾವುದೇ ಪೋನ್ ಕರೆ ಮಾಡಿ ಹೆದರಿಸುತ್ತಿದ್ದರೆ ಪೊಲೀಸ್ ಠಾಣೆಗೆ ದೂರು ನೀಡುವುದಲ್ಲದೆ ಕಲಬುರಗಿ ಲೋಕಾಯುಕ್ತ ಎಸ್.ಪಿ. -9364062519 ಅಥವಾ ದೂ.ಸಂಖ್ಯೆ 08472-295364ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಆಲೂರು ನಿವಾಸಿ ಹಾಗೂ ಕಲಬುರಗಿ ಡಯಟ್ ಹಿರಿಯ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಹಣಮಂತರಾವ್ ನಾಟೀಕಾರ(53)…
ರಾಷ್ಟ್ರೀಯ ವೈದ್ಯಕೀಯ ಆಯೋಗದ ಅಧ್ಯಕ್ಷರಿಗೆ ಪತ್ರ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ.15ರಷ್ಟು ಎನ್ ಆರ್ ಐ ಕೋಟಾ ಕೊಡಿ 508…
ಭಾಗ್ಯ ವಂತಿ ದೇವಸ್ಥಾನ ಅಭಿವೃದ್ಧಿ ಘತ್ತರಗಾಕ್ಕೆ ಬಂದು ಕಣ್ತೆರೆದು ನೋಡಲಿ ಕಲಬುರಗಿ: ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಹಿಂದಿನ ಕಲಬುರಗಿ…
ಸುರಪುರ:ಪಟ್ಟಣದ ಉಪ ಕಾರಾಗೃಹಕ್ಕೆ ಜಿಲ್ಲಾ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉಪ…
ಸುರಪುರ:ಕರ್ನಾಟಕ ರಂಗಕ್ಷೇತ್ರಕ್ಕೆ ಹಿರಿಯ ನಾಟಕಕಾರರಾಗಿದ್ದ ಸಿ.ಜಿ.ಕೆ ಅವರ ಕೊಡುಗೆ ಅಪಾರವಾಗಿದೆ ಎಂದು ಸಗರನಾಡು ಸೇವಾ ಪ್ರತಿಷ್ಠಾನ ಅಧ್ಯಕ್ಷ ಪ್ರಕಾಶ ಅಂಗಡಿ…
ಸುರಪುರ: ಮೇರು ಸಾಹಿತಿ ಡಾ.ಕಮಲಾಹಂಪನಾ ಅವರ ಕೃತಿಗಳನ್ನು ಓದುವದು ಹಾಗೂ ಆ ಕೃತಿಗಳು ಸಾಮಾನ್ಯ ಜನರಿಗೆ ಸಿಗುವಂತೆ ಮಾಡುವದು ಇಂದಿನ…