ಬಿಸಿ ಬಿಸಿ ಸುದ್ದಿ

ವಿವಿಧ ಸಾಧಕರಿಗೆ ಸನ್ಮಾನ ಸಮಾರಂಭ: ಶಿಕ್ಷಕರಿಂದ ದೇಶಕಟ್ಟುವ ಕಾರ್ಯ ನಿರಂತರವಾಗಿ ಜರುಗಲಿ

ಕಲಬುರಗಿ: ಸಮಾಜದಲ್ಲಿ ಶಿಕ್ಷಕರು ಗುರುವಿನ ಸ್ಥಾನದಲ್ಲಿದ್ದು, ತಮ್ಮ ಪವಿತ್ರ ಬೋಧನಾ ಸೇವೆಯ ಜೊತೆಗೆ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಮಾಜಕ್ಕೂ ಗುರುವಾಗಬೇಕು. ಕರ್ತವ್ಯ ಪ್ರಜ್ಞೆಯಿಂದ ಸೇವೆಯನ್ನು ಸಲ್ಲಿಸುವ ಮೂಲಕ ದೇಶ ಕಟ್ಟುವ ಕಾರ್ಯ ಶಿಕ್ಷಕರಿಂದ ನಿರಂತರವಾಗಿ ಜರುಗಬೇಕಾಗಿದೆಯೆಂದು ರಾಜ್ಯ ಉತ್ತಮ ವಿಜ್ಞಾನ ಶಿಕ್ಷಕ ಪ್ರಶಸ್ತಿ ಪುರಷ್ಕೃತ ಸಹ ಶಿಕ್ಷಕ ಚಂದ್ರಶೇಖರ ಪಾಟೀಲ ಹೇಳಿದರು.

ಅವರು ನಗರದ ಆಳಂದ ರಸ್ತೆಯ, ದೇವಿನಗರದಲ್ಲಿರುವ ’ಎಮ್.ಎಮ್.ಎನ್ ಶಾಲೆ’ಯಲ್ಲಿ, ಇಲ್ಲಿನ ’ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಭಾನುವಾರ ಹಮ್ಮಿಕೊಳ್ಳಲಾಗಿದ್ದ ವಿವಿಧ ಸಾಧಕರಿಗೆ ಸತ್ಕಾರ ಸಮಾರಂಭದಲ್ಲಿ ಗೌರವ ಸ್ವೀಕರಿಸಿ ನಂತರ ಮಾತನಾಡುತ್ತಿದ್ದರು. ಜಿಲ್ಲಾ ಸರ್ಕಾರಿ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ಚಂದ್ರಕಾಂತ ಬಿರಾದಾರ ಮಾತನಾಡಿ, ವ್ಯಕ್ತಿಗೆ ದೊರೆಯುವ ಸದಾವಕಾಶಗಳನ್ನು ಸಮಾಜದ ಒಳಿಗಾಗಿ ವಿನಿಯೋಗಿಸಬೇಕು. ಪ್ರಶಸ್ತಿಗಾಗಿ ಕಾರ್ಯ ಮಾಡದೆ, ನಮ್ಮ ಸೇವೆಯೆ ಪ್ರಶಸ್ತಿಯಾಗಬೇಕೆಂದು ಮಾರ್ಮಿಕವಾಗಿ ನುಡಿದರು.

ಮುಖ್ಯ ಅತಿಥಿಯಾಗಿದ್ದ ನ್ಯಾಯವಾದಿ ಹಣಮಂತರಾಯ ಅಟ್ಟೂರ ಮಾತನಾಡಿ, ಸದಾ ಸಮಾಜಕ್ಕೆ ದುಡಿಯುವ ಮನ ನಮ್ಮದಾಗಬೇಕು. ಅಂತಹ ಸೇವಕರನ್ನು ಗುರುತಿಸಿ ಗೌರವಿಸುವ ಕಾರ್ಯ ಮಾಡುತ್ತಿರುವ ಬಳಗದ ಕಾರ್ಯ ಶ್ಲಾಘನೀಯವಾಗಿದೆಯೆಂದರು.

ಕಾರ್ಯಕ್ರಮದಲ್ಲಿ ಬಳಗದ ಸಂಸ್ಥಾಪಕ ಅಧ್ಯಕ್ಷ ಪ್ರೊ.ಎಚ್.ಬಿ.ಪಾಟೀಲ, ವೀರೇಶ ಬೋಳಶೆಟ್ಟಿ, ಶಿವಚಿiಸ್ವಾಮಿ ಮಠಪತಿ, ಕೆ.ಬಸವರಾಜ, ಚಂದ್ರಕಾಂತ ತಳವಾರ, ಸೂರ್ಯಕಾಂತ ಸಾವಳಗಿ, ಚನ್ನಯ್ಯ ಸ್ವಾಮಿ, ರೇಣುಕಾಚಾರ್ಯ ಸ್ಥಾವರಮಠ, ಅಣ್ಣಾರಾವ ಮಂಗಾಣೆ, ರಾಜಕುಮಾರ ಬಟಗೇರಿ, ನಾಗೇಂದ್ರಪ್ಪ ಕಲಶೆಟ್ಟಿ, ಅಮರ ಬಂಗರಗಿ, ಡಿ.ಬಿ.ಕುಲಕರ್ಣಿ, ಪ್ರದೀಪ ಕುಂಬಾರ, ನಿಂಗರಾಜ ವಾಲಿ, ಸಂತೋಷ ಹೂಗಾರ, ಹಣಮಂತರಾಯ ದಿಂಡೂರೆ, ಗಜಾನಂದ ಕುಂಬಾರ, ಶ್ರೀಶೈಲ ನಾಗಶೆಟ್ಟಿ, ಬಸವರಾಜ ಹೆಳವರ, ರವೀಚಿದ್ರ ಗುತ್ತೇದಾರ, ಮಲ್ಲಿನಾಥ ಮುನ್ನೋಳಿ, ಮಲಕಾರಿ ಪೂಜಾರಿ ಸ್ಭೆರಿದಂತೆ ಅನೇಕರು ಭಾಗವಹಿಸಿದ್ದರು.

ಕಾರ್ಯಕ್ರಮವನ್ನು ಮಹಾದೇವ ಹಿರೇಮಠ ಪ್ರಾರ್ಥಿಸಿದರು. ನರಸಪ್ಪ ಬಿರಾದಾರ ದೇಗಾಂವ ಸ್ವಾಗತಿಸಿದರು. ಶಿವಕಾಂತ ಚಿಮ್ಮಾ ನಿರೂಪಣೆ ಮಾಡಿದರು. ಪ್ರಭುಲಿಂಗ ಮೂಲಗೆ ವಂದಿಸಿದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

2 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

2 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

4 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

4 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

4 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

5 hours ago