ಬಿಸಿ ಬಿಸಿ ಸುದ್ದಿ

ಶೇ.100ರಷ್ಟು ಅನುದಾನ ಬಳಕೆಗೆ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಸೂಚನೆ

ಎಸ್.ಸಿ.ಪಿ.-ಟಿ.ಎಸ್.ಪಿ ಪ್ರಗತಿ ಪರಿಶೀಲನಾ ಸಭೆ

ಕಲಬುರಗಿ: ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಸಮುದಾಯದ ಕಲ್ಯಾಣಕ್ಕಾಗಿ ವಿವಿಧ ಇಲಾಖೆಗೆ ಎಸ್.ಸಿ.ಪಿ-ಟಿ.ಎಸ್.ಪಿ. ಯೋಜನೆಯಡಿ ಬಿಡುಗಡೆಯಾದ ಅನುದಾನವನ್ನು ಶೇ.100ರಷ್ಟು ಬಳಕೆಯಾಗಬೇಕು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶುಕ್ರವಾರ ಇಲ್ಲಿನ ಡಿ.ಸಿ.ಕಚೇರಿ ಸಭಾಂಗಣದಲ್ಲಿ ಅನುಸೂಚಿತ ಜಾತಿಗಳ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆ ಕಾರ್ಯಕ್ರಮಗಳ ಅನುಷ್ಠಾನದ ಜಿಲ್ಲಾ ಮಟ್ಟದ ಮೊದಲನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಸಕ್ತ ತ್ರೈಮಾಸಿಕ ಅಂತ್ಯಕ್ಕೆ ಬಹುತೇಕ ಇಲಾಖೆಗಳು ಬಿಡುಗಡೆಯಾದ ಅನುದಾನಕ್ಕೆ ಆರ್ಥಿಕ ಪ್ರಗತಿ ಸಾಧಿಸದಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿ ಮುಂದಿನ ತ್ರೈಮಾಸಿಕ ಅಂತ್ಯದೊಳಗೆ ಎರಡು ತ್ರೈಮಾಸಿಕ ಪ್ರಗತಿ ಸಾಧಿಸಬೇಕೆಂದರು.

ಕಳೆದ 2023-24ನೇ ಸಾಲಿನಲ್ಲಿ ಶೇ.90ಕ್ಕಿಂತ ಕಡಿಮೆ ಪ್ರಗತಿ ಸಾಧಿಸಿದ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಎಸ್.ಸಿ.ಪಿ-ಟಿ.ಎಸ್.ಪಿ ಕಾರ್ಯಕ್ರಮಗಳ ಜೊತೆಗೆ ಇಲಾಖಾ ಕಾರ್ಯಕ್ರಮದಲ್ಲಿಯೂ ಪ್ರಗತಿ ಸಾಧಿಸಬೇಕೆಂದರು.

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಬರುವ ಜುಲೈ 8 ಮತ್ತು 9 ರಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ ಸಿ.ಇ.ಓ ಗಳ ಕಾನ್ಫೆರೆನ್ಸ್ ನಡೆಯಲಿದ್ದು, ಕಳೆದ ಸೆಪ್ಟೆಂಬರ್ ಮಾಹೆಯಲ್ಲಿ ನಡೆದ ಸಭೆಯಲ್ಲಿನ ತೀರ್ಮಾನಕ್ಕೆ ಅನುಪಾಲನಾ ವರದಿಯನ್ನು ಕೂಡಲೆ ಈ ಕಚೇರಿಗೆ ಸಲ್ಲಿಸಬೇಕೆಂದು ತಿಳಿಸಿದ ಜಿಲ್ಲಾಧಿಕಾರಿಗಳು, ಎಸ್.ಸಿ.ಪಿ-ಟಿ.ಎಸ್.ಪಿ ಯೋಜನೆಗಳ ಭೌತಿಕ ಮತ್ತು ಆರ್ಥಿಕ ಪ್ರಗತಿ ಸಾಧಿಸುವುದರ ಜೊತೆಗೆ ತಂತ್ರಾಂಶದಲ್ಲಿ ನಿಖರವಾಗಿ ಅಪಡೇಟ್ ಸಹ ಮಾಡಬೇಕು ಎಂದರು.

ಸಮಾಜ ಕಲ್ಯಾಣ ಇಲಾಖೆಯ ಪ್ರಭಾರಿ ಜಂಟಿ ನಿರ್ದೇಶಕ ಮುನಾವರ ದೌಲಾ ಮಾತನಾಡಿ, ಜಿಲ್ಲೆಗೆ 2024-25ನೇ ಸಾಲಿನಲ್ಲಿ ವಿವಿಧ ಇಲಾಖೆಗಳಿಗೆ ಒಟ್ಟಾರೆ ಎಸ್.ಸಿ.ಪಿ. ಯೋಜನೆಯಡಿ 8,913.77 ಲಕ್ಷ ರೂ. ಹಂಚಿಕೆಯಾಗಿ 922.41 ಲಕ್ಷ ರೂ. ಬಿಡುಗಡೆಯಾಗಿದ್ದು, ಇದರಲ್ಲಿ 372.37 ಲಕ್ಷ ರೂ. ಖರ್ಚು ಮಾಡಲಾಗಿದೆ. ಅದೇ ರೀತಿ ಟಿ.ಎಸ್.ಪಿ. ಯೋಜನೆಯಡಿ 1,940.46 ಲಕ್ಷ ರೂ. ಹಂಚಿಕೆ ಪೈಕಿ 257.10 ಲಕ್ಷ ರೂ. ಬಿಡುಗಡೆಯಾಗಿದ್ದು, ಇದರಲ್ಲಿ 39.63 ಲಕ್ಷ ರೂ. ಖರ್ಚು ಮಾಡಲಾಗಿದೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

emedialine

Recent Posts

ನಿಧನ ವಾರ್ತೆ: ಹಣಮಂತರಾವ್ ನಾಟೀಕಾರ

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಆಲೂರು ನಿವಾಸಿ ಹಾಗೂ ಕಲಬುರಗಿ ಡಯಟ್ ಹಿರಿಯ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಹಣಮಂತರಾವ್ ನಾಟೀಕಾರ(53)…

8 hours ago

ಕರ್ನಾಟಕ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್.ಆರ್.ಐ ಕೋಟಾ ಕೋರಿ ಕೇಂದ್ರಕ್ಕೆ ಪತ್ರ ಬರೆದ ಸಚಿವ ಶರಣಪ್ರಕಾಶ್ ಪಾಟೀಲ್

ರಾಷ್ಟ್ರೀಯ ವೈದ್ಯಕೀಯ ಆಯೋಗದ ಅಧ್ಯಕ್ಷರಿಗೆ ಪತ್ರ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ.15ರಷ್ಟು ಎನ್ ಆರ್ ಐ ಕೋಟಾ ಕೊಡಿ 508…

10 hours ago

ಆಂದೋಲಾ ಸ್ವಾಮೀಜಿಗೆ ಘತ್ತರಗಾ ಗ್ರಾಮಸ್ಥರ ಸವಾಲು

ಭಾಗ್ಯ ವಂತಿ ದೇವಸ್ಥಾನ ಅಭಿವೃದ್ಧಿ ಘತ್ತರಗಾಕ್ಕೆ ಬಂದು ಕಣ್ತೆರೆದು ನೋಡಲಿ ಕಲಬುರಗಿ: ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಹಿಂದಿನ‌ ಕಲಬುರಗಿ…

10 hours ago

ಉಪ ಕಾರಾಗೃಹಕ್ಕೆ ಜಿಲ್ಲಾ ನ್ಯಾಯಾಧೀಶರ ಧಿಡೀರ್ ಭೇಟಿ; ಪರಿಶೀಲನೆ

ಸುರಪುರ:ಪಟ್ಟಣದ ಉಪ ಕಾರಾಗೃಹಕ್ಕೆ ಜಿಲ್ಲಾ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉಪ…

10 hours ago

ರಂಗಭೂಮಿಗೆ ಸಿ.ಜಿ.ಕೆ ಕೊಡುಗೆ ಅಪಾರ; ಸಿಜಿಕೆ ಪ್ರಶಸ್ತಿ ಪ್ರದಾನ ಸಮಾರಂಭ

ಸುರಪುರ:ಕರ್ನಾಟಕ ರಂಗಕ್ಷೇತ್ರಕ್ಕೆ ಹಿರಿಯ ನಾಟಕಕಾರರಾಗಿದ್ದ ಸಿ.ಜಿ.ಕೆ ಅವರ ಕೊಡುಗೆ ಅಪಾರವಾಗಿದೆ ಎಂದು ಸಗರನಾಡು ಸೇವಾ ಪ್ರತಿಷ್ಠಾನ ಅಧ್ಯಕ್ಷ ಪ್ರಕಾಶ ಅಂಗಡಿ…

10 hours ago

ಕನ್ನಡ ಸಾಹಿತ್ಯ ಸಂಘ ಸಾಹಿತಿ ದಿ.ಡಾ.ಕಮಲಾ ಹಂಪನಾಗೆ ಶ್ರದ್ಧಾಂಜಲಿ

ಸುರಪುರ: ಮೇರು ಸಾಹಿತಿ ಡಾ.ಕಮಲಾಹಂಪನಾ ಅವರ ಕೃತಿಗಳನ್ನು ಓದುವದು ಹಾಗೂ ಆ ಕೃತಿಗಳು ಸಾಮಾನ್ಯ ಜನರಿಗೆ ಸಿಗುವಂತೆ ಮಾಡುವದು ಇಂದಿನ…

10 hours ago