ಚಿತ್ತಾಪುರ: 12ನೇ ಶತಮಾನದ ವಚನ ಸಾಹಿತ್ಯವನ್ನು ಸಂಶೋಧನೆ ಮಾಡಿ ಮುದ್ರಿಸಿ ಜನಸಾಮಾನ್ಯರಿಗೆ ಮುಟ್ಟಿಸಿದ ಕೀರ್ತಿ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಅವರಿಗೆ ಸಲ್ಲುತ್ತದೆ ಎಂದು ಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳು ಹೇಳಿದರು.
ಅವರು ರಾವೂರ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಅವರ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ವಚನ ಕಂಠ ಪಾಠ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಿ ಮಾತನಾಡಿದರು.
ಇವತ್ತು ನಾವೆಲ್ಲಾ ವಚನ ಸಾಹಿತ್ಯ ಓದುತ್ತಿದ್ದೇವೆ ಎಂದರೆ ಅದು ಹಳಕಟ್ಟಿಯವರ ತ್ಯಾಗದಿಂದ ಸಾಧ್ಯವಾಗಿದೆ. ದೀಪ ತಾನು ಉರಿದು ಸುತ್ತಲೂ ಸುಗಂಧ ಸೂಸುವಂತೆ ಹಳಕಟ್ಟಿಯವರು ತಮ್ಮ ವಯಕ್ತಿಕ ಜೀವನವನ್ನು ತ್ಯಾಗ ಮಾಡಿ ಸರ್ವಸ್ವವನ್ನು ವಚನ ಸಾಹಿತ್ಯದ ಉಳಿವಿದೆ ತ್ಯಾಗ ಮಾಡಿದ್ದಾರೆ. ಅವರ ಸೇವೆ ಸದಾ ಸ್ಮರಣಿಯ ಎಂದು ಹೇಳಿದರು.
ಶಿಕ್ಷಕ ಶಿವಾನಂದ ಡೋಮನಾಳ ಮಾತನಾಡಿದರು. ವಚನ ಸ್ಪರ್ಧೆಯಲ್ಲಿ ಅತಿ ಹೆಚ್ಚು ವಚನ ಹೇಳಿದ ಕಾರ್ತಿಕ, ಸೋಮಶೇಖರ್, ಶರಣ್, ಅಕ್ಷರ,ಭಾಗ್ಯಶ್ರೀ, ಕಾರ್ತಿಕ, ಬಸವರಾಜ, ಹರ್ಷಿತ್, ದಿವ್ಯಶ್ರೀ ಅವರಿಗೆ ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು.
ಕಾರ್ಯಕ್ರಮದಲ್ಲಿ ಶಿಕ್ಷಕರಾದ ವಿದ್ಯಾಧರ ಖಂಡಾಳ, ಗಂಗಪ್ಪ ಕಟ್ಟಿಮನಿ, ವಿಜಯಲಕ್ಷ್ಮಿ ಬಮ್ಮನಳ್ಳಿ, ಈಶ್ವರಗೌಡ ಪಾಟೀಲ್, ಶಿವಕುಮಾರ್ ಸರಡಗಿ, ಈರಣ್ಣ ಹಳ್ಳಿ, ಕಾವೇರಿ ಮಡಿವಾಳ, ಭೀಮಾಶಂಕರ ಬಮ್ಮನಳ್ಳಿ, ಸುಭಾಷ ಚವಾಣ, ರಾಜು ಆಳ್ಳೊಳ್ಳಿ, ಅನುಸೂಯ ಹೂಗಾರ್ ಸೇರಿದಂತೆ ಶಿಕ್ಷಕರು, ಮಕ್ಕಳು ಉಪಸ್ಥಿತರಿದ್ದರು. ಸಿದ್ದಲಿಂಗ ಬಾಳಿ ನಿರೂಪಿಸಿ ವಂದಿಸಿದರು.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗಕ್ಕೆ ಕಲಂ 371ಜೆ ಯಂತೆ ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮ ಎಂದು ಘೋಷಣೆ ಮಾಡಲು ಸರಕಾರದ…
ಕಲಬುರಗಿ: ನಗರದ ಸಂಗಮೇಶ್ವರ ಸಭಾಗೃಹದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ವಲಯದ ವಿಭಾಗ ಮಟ್ಟದ 2ನೇ ದಾಸ ಸಾಹಿತ್ಯ ಸಮ್ಮೇಳನ…
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…