ಬಿಸಿ ಬಿಸಿ ಸುದ್ದಿ

ಗ್ರಾಮ ಪಂಚಾಯತ್ ಅಧ್ಯಕ್ಷರಿಂದ ಡೆಂಗಿ ಲಾರ್ವ ಉತ್ಪತ್ತಿಗಳ ನಾಶಕ್ಕೆ ಚಾಲನೆ

ಅಫಜಲಪುರ: ಗೊಬ್ಬೂರು ವ್ಯಾಪ್ತಿಯ ಬಂದರವಾಡ ಗ್ರಾಮ ಪಂಚಾಯಿತಿಯಲ್ಲಿ ಮಾನ್ಯ ಆಯುಕ್ತರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಂಗಳೂರು ಆದೇಶದ ಅನ್ವಯ ವಾರಕ್ಕೆ ಒಂದು ಸಲ ಅಂದರೆ ಪ್ರತಿ ಶುಕ್ರವಾರ ಲಾರ್ವ ಸಮೀಕ್ಷೆ ದಿನಾಚರಣೆಯನ್ನು ಕೈಗೊಳ್ಳಲು ಸೂಚಿಸಿದ್ದು ಅದರಂತೆ ಶ್ರೀಮತಿ ವಿಮಲಾಭಾಯಿ ಗೋಲಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಪೋಸ್ಟರ್, ಪ್ರದರ್ಶಿಸುವ ಮೂಲಕ ಪಂಚಾಯಿತಿ ಆವರಣದಲ್ಲಿ ಉದ್ಘಾಟಿಸಿದರು.

ತರುವಾಯ ಪ್ರಾಥಮಿಕ ಆರೋಗ್ಯ ಕೇಂದ್ರ ಗೊಬ್ಬುರ್ ಬಿಯ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶಶಿಧರ್ ಬಳೆ ಡೆಂಗಿ ನಿಯಂತ್ರಣದಲ್ಲಿ ಲಾರ್ವ ಉತ್ಪತ್ತಿಗಳ ನಾಶ ಮಾಡುವ ಕುರಿತು ಮಾತನಾಡುತ್ತಾ ಸೊಳ್ಳೆಗಳ ಉತ್ಪತ್ತಿಯಾಗದಂತೆ ಆರೋಗ್ಯ ಇಲಾಖೆಯೊಂದಿಗೆ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಗ್ರಾಮಸ್ಥರು ತಮ್ಮ ಗ್ರಾಮವನ್ನು ಸ್ವಚ್ಛವಾಗಿರಿಸಿಕೊಂಡು ಹೋಗಲು ತಮ್ಮ ಮನೆ ಮನೆಗೆ ಆಶಾ ಕಾರ್ಯಕರ್ತರು ಇನ್ನು ಮುಂದೆ ಪ್ರತಿ ಶುಕ್ರವಾರ ತಮ್ಮ ಗ್ರಾಮದಲ್ಲಿ ಬಂದು ಲಾರ್ವ ಸಮೀಕ್ಷೆ ಕೈಗೊಂಡಾಗ ಅವರಿಗೆ ಸಹಕರಿಸಿದಲ್ಲಿ ಡೆಂಗಿ ನಿಯಂತ್ರಣ ಸಾಧ್ಯ. ಈ ಸಾಲಿನ ಪ್ರಸ್ತುತ ಘೋಷ ವಾಕ್ಯದಂತೆ ಸಮುದಾಯ ಸಹಕಾರದಿಂದ ಮಾತ್ರ ಡೆಂಗಿ ನಿಯಂತ್ರಣ ಸಾಧ್ಯ ಎಂದು ತಿಳಿಸಿದರು.

ಇಡೀ ಸ್ಈಜಿಪ್ಟೀಸೊಳ್ಳೆ ಶುದ್ಧವಾದ ನೀರಿನಲ್ಲಿ ತನ್ನ ಸಂತತಿಯನ್ನು ಉತ್ಪತ್ತಿ ಮಾಡುತ್ತದೆ ಅದಕ್ಕೆ ತಮ್ಮ ಮನೆಯಲ್ಲಿ ಸಂಗ್ರಹಿಸಿದ ನೀರನ್ನು ವಾರಕ್ಕೊಮ್ಮೆ ಖಾಲಿ ಮಾಡಿ, ಹತ್ತು ನಿಮಿಷ ಒಣಗಿಸಿ ತದನಂತರ ಪುನಃ ನೀರು ಸಂಗ್ರಹಿಸಿದಲ್ಲಿ ಸೊಳ್ಳೆಗಳ ಉತ್ಪತ್ತಿಯ ನಾಶಕ್ಕೆ ಒಳ್ಳೆಯ ಮಾರ್ಗವಾಗಿದೆ. ಅಲ್ಲದೆ ತಮ್ಮ ಮನೆಯಲ್ಲಿ ಘನತ್ಯಾಜ್ಯ ವಸ್ತುಗಳಾದ ಬಿಸಾಡಿದ ಟೈರು, ಪ್ಲಾಸ್ಟಿಕ್ ಬಾಟಲ್, ತೆಂಗಿನ ಎಳೆನೀರಿನ ಚಿಪ್ಪು, ಒಡೆದ ಮಡಿಕೆ , ಇವುಗಳಲ್ಲಿ ಸೊಳ್ಳೆಗಳ ಉತ್ಪತ್ತಿಗೆ ತಾಣಗಳಾಗಿವೆ. ಅವುಗಳನ್ನು ತಮ್ಮ ಮನೆಯಲ್ಲಿ ಹಾಗೂ ಮನೆಯ ಸುತ್ತಮುತ್ತಲು ಇರದಂತೆ ಕಾಪಾಡಿಕೊಳ್ಳಿ, ಗ್ರಾಮವನ್ನು ಸ್ವಚ್ಛವಾಗಿಟ್ಟುಕೊಳ್ಳಿ, ಎಂದು ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿಯ ಸದಸ್ಯರು ಹಾಗೂ ಸಿಬ್ಬಂದಿಗಳು, ಆಯುಷ್ಮಾನ್ ಮಂದಿರದ ಸಿಬ್ಬಂದಿಗಳಾದ ಸಮುದಾಯ ಆರೋಗ್ಯ ಅಧಿಕಾರಿ ಭುವನೇಶ್ವರಿ, ಪ್ರಾಥಮಿಕ ಆರೋಗ್ಯ ಕಾಳಜಿ ಅಧಿಕಾರಿ ರಾಜೇಶ್ವರಿ, ಆಶಾ ಕಾರ್ಯಕರ್ತರಾದ ಭಾಗ್ಯಶ್ರೀ, ಪಾರ್ವತಿ, ಮರಿಯಮ್ಮ, ಅಂಬುಬಾಯಿ, ರೂಪ , ಹಾಜರಿದ್ದರು, ತದನಂತರ ಗ್ರಾಮದಲ್ಲಿ ಲಾರ್ವ ಸಮೀಕ್ಷೆ ದಿನಾಚರಣೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರು ಆಶಾ ಕಾರ್ಯಕರ್ತರು ಸಿಬ್ಬಂದಿಯೊಡನೆ ಜೊತೆಗೂಡಿ ಸಮೀಕ್ಷಾ ಕಾರ್ಯಕ್ಕೆ ಚಾಲನೆ ನೀಡಿ ಸಾರ್ವಜನಿಕರಿಗೆ ಮಾಹಿತಿ ನೀಡಿದರು.

emedialine

Recent Posts

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

9 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

11 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

11 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

11 hours ago

ಮಹಿಳಾ ಘಟಕದ ನೂತನ ಪದಾಧಿಕಾರಿಗಳ ನೇಮಕ

ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…

12 hours ago

ಮಜರ್ ಆಲಂ ಖಾನ್ ಅಧ್ಯಕತೆಯಲ್ಲಿ ನಗರದ ವಿನ್ಯಾಸ ಮಾಲೀಕರು, ಡೆವಲಪರ್ಸ್, ಬಿಲ್ಡರ್ಸ್ ಅವರೊಂದಿಗೆ ಸಭೆ

ಕಲಬುರಗಿ: ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ್ ಆಲಂ ಖಾನ್ ಇವರ ಅಧ್ಯಕ್ಷತೆಯಲ್ಲಿ ನಗರದ ಬಿಲ್ಡರ್ಸ್ ಡೆವಲಪರ್ಸ್ ಮತ್ತು ವಿನ್ಯಾಸದ ಮಾಲೀಕರವರೊಂದಿಗೆ…

12 hours ago