ಬಿಸಿ ಬಿಸಿ ಸುದ್ದಿ

ಸಿಯುಕೆಯಲ್ಲಿ ರಾಷ್ಟ್ರೀಯ ಅಪ್ರೆಂಟಿಸ್‍ಶಿಪ್ ತರಬೇತಿ ಯೋಜನೆ ಕುರಿತು ಜಾಗೃತಿ

ಕಲಬುರಗಿ: “ನ್ಯಾಷನಲ್ ಅಪ್ರೆಂಟಿಸ್‍ಶಿಪ್ ಟ್ರೈನಿಂಗ್ ಸ್ಕೀಮ್ (ಓಂಖಿS) ಐಟಿಐ, ಪಿಯುಸಿ, ಡಿಪೆÇ್ಲೀಮಾ ಮತ್ತು ಪದವೀಧರರು ಸೇರಿದಂತೆ ತಾಂತ್ರಿಕ ಮತ್ತು ತಾಂತ್ರಿಕೇತರ ವಿದ್ಯಾರ್ಥಿಗಳಿಗೆ ಉದ್ಯೋಗ ತರಬೇತಿಯನ್ನು ನೀಡುತ್ತದೆ” ಎಂದು ಬೋರ್ಡ್ ಆಫ್ ಅಪ್ರೆಂಟಿಸ್‍ಶಿಪ್ ಟ್ರೈನಿಂಗ್ ನ-ದಕ್ಷಿಣ ವಲಯದ, ನಿರ್ದೇಶಕ ವಿಜಯ್ ಶಂಕರ್ ಪಾಂಡೆ ಹೇಳಿದರು.

ಸಿಯುಕೆಯಲ್ಲಿ ಆಯೋಜಿಸಿದ್ದ ನ್ಯಾಷನಲ್ ಅಪ್ರೆಂಟಿಸ್‍ಶಿಪ್ ಟ್ರೈನಿಂಗ್ ಸ್ಕೀಮ್ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅವರು ಮುಂದುವರೆದು ಮಾತನಾಡಿ “ಪದವಿ ಪೂರ್ವ ಮತ್ತು ಪದವಿ ವಿದ್ಯಾರ್ಥಿಗಳಿಗೆ ತರಬೇತಿ ಮತ್ತು ಉದ್ಯೋಗಾವಕಾಶಗಳನ್ನು ಒದಗಿಸಲು ಭಾರತ ಸರ್ಕಾರವು 1961 ರಲ್ಲಿ ಅಪ್ರೆಂಟಿಸ್‍ಶಿಪ್ ಕಾಯಿದೆಯನ್ನು ಜಾರಿಗೊಳಿಸಿದೆ ಮತ್ತು 1973 ರಿಂದ ಕಾರ್ಯರೂಪಕ್ಕೆ ಬಂದಿದೆ. ಈ ಕಾಯಿದೆಯಡಿಯಲ್ಲಿ ವಿದ್ಯಾರ್ಥಿಗಳು, ಸಂಸ್ಥೆಗಳು ಮತ್ತು ಕಂಪನಿಗಳ ನಡುವಿನ ಅಂತರವನ್ನು ಕಡಿಮೆ ಮಾಡಲು ಮತ್ತು ಸಂಯೋಜಕ ಸಂಸ್ಥೆಯಾಗಿ ಕಾರ್ಯನಿರ್ವಹಿಸಲು ಅಪ್ರೆಂಟಿಸ್‍ಶಿಪ್ ತರಬೇತಿ ಮಂಡಳಿಯನ್ನು ಸ್ಥಾಪಿಸಲಾಯಿತು.

ಕಂಪನಿಗಳು ವಿದ್ಯಾರ್ಥಿಗಳಿಗೆ ತರಬೇತಿ ಮತ್ತು ಉದ್ಯೋಗಾವಕಾಶಗಳನ್ನು ಒದಗಿಸುತ್ತವೆ. ಈ ಯೋಜನೆಯಡಿ ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ಕನಿಷ್ಠ ರೂ. 9000 ಸ್ಟೈಫಂಡ್ ನೀಡಲಾಗುತ್ತದೆ. ಇದರಲ್ಲಿ 50 ಪ್ರತಿಶತವನ್ನು ಕೇಂದ್ರ ಸರ್ಕಾರವು ನೇರವಾಗಿ ಟ್ರೈನಿ ಖಾತೆಗೆ ಜಮಾ ಮಾಡುತ್ತದೆ.”

ಈ ಕಾರ್ಯಕ್ರಮದಡಿಯಲ್ಲಿ ನಡೆಸಲಾದ ಚಟುವಟಿಕೆಗಳ ಕುರಿತು ಮಾತನಾಡಿದ ಅವರು, “ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ, ಕಂಪನಿಗಳು ಮತ್ತು ವಿದ್ಯಾರ್ಥಿಗಳಿಳನ್ನು ಒಂದೆವೇದಿಕೆಯಲ್ಲಿ ತರಲು ಅಪ್ರೆಂಟಿಸ್‍ಶಿಪ್ ಮೇಳಗಳನ್ನು ಆಯೋಜಿಸುವುದು ಮತ್ತು ತರಬೇತಿ ಪಡೆದವರು, ಸಂಸ್ಥೆಗಳು ಮತ್ತು ಕಂಪನಿಗಳ ಅಂಕಿಅಂಶಗಳನ್ನು ನಿರ್ವಹಿಸುವುದು. ಅಂತಿಮ ವರ್ಷದ ವಿದ್ಯಾರ್ಥಿಗಳು http://nats.education.gov.in ಮೂಲಕ ಈ ಯೋಜನೆಗೆ ನೋಂದಾಯಿಸಿಕೊಳ್ಳಬಹುದಾಗಿದೆ” ಎಂದು ಅವರು ಹೇಳಿದರು.

ಉದ್ಯೋಗ ಮಾರುಕಟ್ಟೆಯಲ್ಲಿನ ಪರಸ್ಥಿತಿಯ ಕುರಿತು ಮಾತನಾಡಿದ ಅವರು, “ಇಂದಿನ ಉದ್ಯಮಕ್ಕೆ ಸಮಸ್ಯೆಗೆ ಪರಿಹಾರ, ವಿಮರ್ಶಾತ್ಮಕ ಚಿಂತನೆ, ಸಂವಹನ ಮತ್ತು ಪರಸ್ಪರ ಸಂಬಂಧದ ನಿರ್ವಹಣೆ, ಅಳವಡಿಸಿಕೊಳ್ಳುವಿಕೆ, ನಮ್ಯತೆ, ಧನಾತ್ಮಕ ವರ್ತನೆ, ಕಾರ್ಯಾಧಾರಿತ ನಿರ್ದಿಷ್ಟ ಸಾಮಥ್ರ್ಯಗಳು, ನೈತಿಕತೆ ಮತ್ತು ಮೌಲ್ಯಗಳು, ಸೃಜನಾತ್ಮಕ ಮತ್ತು ನವೀನ ಚಿಂತನೆಗಳಂತಹ ಕೌಶಲ್ಯಗಳ ಅಗತ್ಯವಿದೆ” ಎಂದು ಹೇಳಿದರು.

ಗೌರವಾನ್ವಿತ ಕುಲಪತಿ ಪೆÇ್ರ.ಬಟ್ಟು ಸತ್ಯನಾರಾಯಣ ಅವರು ಅಧ್ಯಕ್ಷೀಯ ಭಾಷಣ ಮಾಡಿ, “ಪ್ರತಿಯೊಬ್ಬರೂ ನಿರುದ್ಯೋಗದ ಬಗ್ಗೆ ಮಾತನಾಡುತ್ತಾರೆ ಆದರೆ ಅದನ್ನು ಹೇಗೆ ಪರಿಹರಿಸುವುದು ಎಂಬುದು ಬಹಳ ಮುಖ್ಯ. ಕ್ಯಾಂಪಸ್‍ನಿಂದ ಹೊರಹೋಗುವ ಮೊದಲು ವಿದ್ಯಾರ್ಥಿಗಳನ್ನು ಉದ್ಯೋಗಿಗಳನ್ನಾಗಿ ಮಾಡುವುದು ಮತ್ತು ಉದ್ಯೋಗ ಪಡೆಯಲು ವೇದಿಕೆಯನ್ನು ಒದಗಿಸುವುದು ಶಿಕ್ಷಣ ಸಂಸ್ಥೆಗಳ ಜವಾಬ್ದಾರಿಯಾಗಿದೆ. ಆದ್ದರಿಂದ ನಮ್ಮ ವಿದ್ಯಾರ್ಥಿಗಳಿಗೆ ತರಬೇತಿ ಮತ್ತು ಉದ್ಯೋಗಾವಕಾಶಗಳ ಬಗ್ಗೆ ಮಾಹಿತಿಯನ್ನು ಒದಗಿಸಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ವಿದ್ಯಾರ್ಥಿಗಳು ಉದ್ಯೋಗ ಹುಡುಕುವ ಬದಲು ಉದ್ಯಮಿಗಳಾಗಬೇಕು ಮತ್ತು ಉದ್ಯೋಗ ಸೃಷ್ಟಿಸಬೇಕು. ನೀವು ಕ್ಯಾಂಪಸ್‍ನಲ್ಲಿರುವವರೆಗೆ ಸೌಲಭ್ಯಗಳನ್ನು ಬಳಸಿಕೊಳ್ಳಿ ಮತ್ತು ಅಗತ್ಯವಿರುವ ಕೌಶಲ್ಯ ಮತ್ತು ಸಾಮಥ್ರ್ಯಗಳನ್ನು ಪಡೆದುಕೊಳ್ಳಿ” ಎಂದು ವಿದ್ಯಾರ್ಥಿಗಳಿಗೆ ಹೇಳಿದರು.

ಕುಲಸಚಿವ ಪೆÇ್ರ.ಆರ್.ಆರ್.ಬಿರಾದಾರ್ ಅವರು ಮಾತನಾಡಿ, “ಇಂದಿನ ಜಗತ್ತು ಯಶಸ್ವಿಯಾಗಲು ಜ್ಞಾನದ ಜೊತೆಗೆ ಕೌಶಲ್ಯದ ಅಗತ್ಯವಿದೆ. ಆದ್ದರಿಂದ ವಿದ್ಯಾರ್ಥಿಗಳು ಮೃದು ಮತ್ತು ಕಠಿಣ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು, ಈ ಕೌಶಲ್ಯಗಳಿಲ್ಲದ ಬರಿ ಪ್ರಮಾಣಪತ್ರಕ್ಕೆ ಯಾವುದೇ ಮೌಲ್ಯವಿಲ್ಲ. ಅಭಿವೃದ್ಧಿ ಹೊಂದಿದ ದೇಶಗಳಿಗೆ ಹೋಲಿಸಿದರೆ ಭಾರತ ಕೌಶಲ್ಯದ ವಿಷಯದಲ್ಲಿ ಬಹಳ ಹಿಂದುಳಿದಿದೆ. ಅಭಿವೃದ್ಧಿ ಹೊಂದಿದ ದೇಶಗಳಲ್ಲಿ 80 ಪ್ರತಿಶತದಷ್ಟು ಜನರು ಔಪಚಾರಿಕ ತರಬೇತಿಯ ಮೂಲಕ ಕೌಶಲ್ಯವನ್ನು ಹೊಂದಿದ್ದಾರೆ ಆದರೆ ಭಾರತದಲ್ಲಿ ಇದು ಕೇವಲ 5 ಪ್ರತಿಶತ. 2024 ರ ಸಮೀಕ್ಷೆಯ ಪ್ರಕಾರ ಕೇವಲ 54 ಪ್ರತಿಶತ ಪದವೀಧರರು ಮಾತ್ರ ಉದ್ಯೋಗಕ್ಕೆ ಅರ್ಹರಾಗಿದ್ದಾರೆ ಮತ್ತು ವಾರ್ಷಿಕ ನಿರುದ್ಯೋಗ ದರ ಸುಮಾರು 8 ಪ್ರತಿಶತದಷ್ಟಿದೆ. ಆದ್ದರಿಂದ ಇಂತಹ ಕಾರ್ಯಕ್ರಮಗಳು ಈ ಕಾಲದ ಅಗತ್ಯವಾಗಿದೆ” ಎಂದು ಹೇಳಿದರು.

ಕ್ಯಾಂಪಸ್ ಪ್ಲೆಸ್ಮೆಂಟ್ ಅಧಿಕಾರಿ ಡಾ.ಪರಮೇಶ ಎಸ್ ಪಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪೆÇ್ರ.ಆರ್.ಎಸ್.ಹೆಗಡಿ, ಪೆÇ್ರ.ಬಸವರಾಜ ಕುಬಕಡ್ಡಿ, ಪೆÇ್ರ.ಪರಮೇಶ, ಪೆÇ್ರ. ಜಿ.ಆರ್.ಅಂಗಡಿ, ಡಾ.ಪಿ.ಎಸ್.ಕಟ್ಟಿಮನಿ, ಡಾ.ಎಂ.ಜೊಹೈರ್ ಇತರ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

emedialine

Recent Posts

ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆ ಸಮೀಕ್ಷೆ : ಡಾ. ಶಾಲಿನಿ ರಜನೀಶ್

ಬೆಂಗಳೂರು: ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆಹಚ್ಚಲು ಜುಲೈ 15 ರಿಂದ 30 ರವರೆಗೆ ಸಮೀಕ್ಷೆ ನಡೆಸಲಾಗುವುದು…

51 mins ago

ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ: ಸಿಎಂ ಸಿದ್ದು

ಬೆಂಗಳೂರು: ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ…

59 mins ago

ಕನ್ನಡದ ನೆಲದಲ್ಲಿ ಕನ್ನಡಿಗರ ಮಕ್ಕಳೇ ಉದ್ಯೋಗ ಮಿಸಲಾತಿ ಕೇಳುವಂತಹ ಪರಸ್ಥಿತಿ ಆಘಾತಕಾರಿ

ಕಲಬುರಗಿ: ಡಾ.ಸರೋಜನಿ ಮಹಿಷಿ ವರದಿ ಅನುಷ್ಠಾನಕ್ಕೆ ನಡೆದ, ನಡೆಯುತ್ತಿರುವ ಹೋರಾಟಗಳಿಗೆ ಲೆಕ್ಕವೇ ಇಲ್ಲ. ಮಹಿಷಿ ವರದಿಯ ಹೆಸರು ಹೇಳಿ ಆಳಿದ…

1 hour ago

ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹೇಶ್ ರೆಡ್ಡಿ ನಾಮಪತ್ರ ಸಲ್ಲಿಕೆ

ಕಲಬುರಗಿ: ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹಾಸಭಾದ ಅಧ್ಯಕ್ಷ ಶರಣಕುಮಾರ ಮೋದಿ ಹಾಗೂ ಸಮಾಜದ…

1 hour ago

ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲ: ರಾಜ್ಯ ಸರಕಾರದ ವಿರುದ್ಧ ಸಾಂಕೇತಿಕ ಧರಣಿ ಸತ್ಯಾಗೃಹ

ಕಲಬುರಗಿ: ಕರ್ನಾಟಕ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲವಾದ ರಾಜ್ಯ ಸರ್ಕಾರ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪುನೀತರಾಜ…

1 hour ago

ನಿವೃತ್ತಿ ಜೀವನ ಸುಖಕರವಾಗಿರಲಿ; ಪಾಟೀಲ್

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸ್ಥಳೀಯ ಪೊಲೀಸ್ ಠಾಣೆಯಲ್ಲಿ 20 ವರ್ಷ ಒಂದೇ ಕಡೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ ಎಎಸ್'ಐ…

1 hour ago