ಬಿಸಿ ಬಿಸಿ ಸುದ್ದಿ

ಜನಪದ ಕಲಾವಿದರು ಸಮಾಜದ ಆಸ್ತಿ

ಕಲಬುರಗಿ; ಗ್ರಾಮೀಣ ಭಾಗದಲ್ಲಿ ಅನೇಕ ಜನ ಕಲಾವಿದರು ಹಗಲಿರುಳು ಸೇವೆಗೈದು ಜನಪದ ಉಳಿಸುವುದರೊಂದಿಗೆ ಸಮಾಜದ ಆಸ್ತಿಯಾಗಿದ್ದಾರೆ ಎಂದು ನ್ಯಾಯವಾದಿ ಹಣಮಂತರಾಯ ಎಸ್. ಅಟ್ಟೂರ ಹೇಳಿದರು.

ನಗರದ ಸಂತೋಷ ಕಾಲೋನಿಯ ದಕ್ಷಿಣಮುಖಿ ಹನುಮನ ದೇವಸ್ಥಾನದ ಆವರಣದಲ್ಲಿ ಶ್ರೀದೇವಿ ಸರಸ್ವತಿ ಕಲಾ ಬಳಗದ ವತಿಯಿಂದ ಹಮ್ಮಿಕೊಂಡ ಜಾನಪದ ಸಂಗೀತೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ ಕಲಾವಿದರ ಜೀವನಕ್ಕೆ ಯಾವುದೇ ಭದ್ರತೆ ಇಲ್ಲದೆ, ಆರ್ಥಿಕ ತೊಂದರೆಯಿಂದ ತಮ್ಮ ಕುಟುಂಬ ನಿರ್ವಹಣೆ ಮಾಡುವುದೇ ಕಷ್ಟವಾಗಿದೆ. ಅದಕ್ಕಾಗಿ ಸರಕಾರ ಪ್ರತಿ ತಿಂಗಳು ಕಲಾವಿದರಿಗೆ ಮಾಶಾಸನ ನೀಡಿ ಕಲಾವಿದರ ಬಾಳಿಗೆ ಬೆಳಕಾಗಲಿ. ಕಲಾವಿದರ ಭದ್ರತೆ ಒದಗಿಸುವುದರೊಂದಿಗೆ ಗ್ಯಾರಂಟಿ ಯೋಜನೆ ಜಾರಿಗೆ ಮಾಡಲೆಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶ್ರೀಶೈಲ ಮುಲಗೆ ಮಾತನಾಡುತ್ತಾ ಸರಕಾರ ಕಲಾವಿದರಿಗೆ ಅರ್ಜಿ ಹಾಕಿಸಿಕೊಂಡು ಕಲಾವಿದರೆಂದು ಗುರುತಿಸುವ ಬದಲು ನಿಜವಾದ ಕಲಾವಿದರನ್ನು ಸರಕಾರವೆ ಗುರುತಿಸಿ ಸಹಾಯ, ಸಹಕಾರ ಮಾಡಲಿ. ಇಂತಹ ಕಲಾವಿದರನ್ನು ಗುರುತಿಸಿ ಬೆಳೆಸುವುದು ನಮ್ಮ ನಿಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಉಪನ್ಯಾಸಕರಾದ ರವೀಂದ್ರ ಗುತ್ತೇದಾರ, ಆಳಂದ ಸತ್ಯ ಸಾಯಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯಾದ ಮಲಕಾರಿ ಪೂಜಾರಿ, ಶಿವರಾಜ್ ಪರ್ತಾಪುರ, ಸಿದ್ದರಾಮಪ್ಪ ಸಾವಳಗಿ, ಸಾತಲಿಂಗಪ್ಪ ಶಾಸ್ತ್ರಿ, ಹಾಗೂ ಸಂಘದ ಅಧ್ಯಕ್ಷರಾದ ಶರಣಪ್ಪ ಕಟ್ಟಿಮನಿ ಇದ್ದರು.

ಖ್ಯಾತ ಸಂಗೀತ ಕಲಾವಿದರಾದ ಗುರುಶಾಂತಯ್ಯ ಸ್ಥಾವರಮಠ, ಸೂರ್ಯಕಾಂತ ಶಾಸ್ತ್ರಿ ದುತ್ತರಗಾಂವ, ಪರಶುರಾಮ ಗರೂರ, ವೀರಭದ್ರಯ್ಯ ಸ್ಥಾವರಮಠ, ಶ್ರೀಶೈಲ ಯಳಸಂಗಿ, ಪ್ರಭು ಚಕ್ಕಿ, ಪವಿತ್ರಾ ಸ್ಥಾವರಮಠ ಸೇರಿದಂತೆ ಅನೇಕ ಜನ ಕಲಾವಿದರು ಜನಪದ ಗೀತೆಗಳು ಹಾಡುವ ಮೂಲಕ ಜನರನ್ನು ರಂಜಿಸಿದರು.

ಕಾರ್ಯಕ್ರಮದಲ್ಲಿ ರವಿಕುಮಾರ ಗೋಲಗೇರಿ, ಶಿವಶಂಕರ ಹೀರಾ ಸೇರಿದಂತೆ ಅನೇಕ ಜನ ಉಪಸ್ಥಿತರಿದ್ದರು. ಧನ್ಯವಾದಗಳೊಂದಿಗೆ, ಶರಣಪ್ಪ ಕಟ್ಟಿಮನಿ

emedialine

Recent Posts

ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆ ಸಮೀಕ್ಷೆ : ಡಾ. ಶಾಲಿನಿ ರಜನೀಶ್

ಬೆಂಗಳೂರು: ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆಹಚ್ಚಲು ಜುಲೈ 15 ರಿಂದ 30 ರವರೆಗೆ ಸಮೀಕ್ಷೆ ನಡೆಸಲಾಗುವುದು…

2 hours ago

ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ: ಸಿಎಂ ಸಿದ್ದು

ಬೆಂಗಳೂರು: ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ…

2 hours ago

ಕನ್ನಡದ ನೆಲದಲ್ಲಿ ಕನ್ನಡಿಗರ ಮಕ್ಕಳೇ ಉದ್ಯೋಗ ಮಿಸಲಾತಿ ಕೇಳುವಂತಹ ಪರಸ್ಥಿತಿ ಆಘಾತಕಾರಿ

ಕಲಬುರಗಿ: ಡಾ.ಸರೋಜನಿ ಮಹಿಷಿ ವರದಿ ಅನುಷ್ಠಾನಕ್ಕೆ ನಡೆದ, ನಡೆಯುತ್ತಿರುವ ಹೋರಾಟಗಳಿಗೆ ಲೆಕ್ಕವೇ ಇಲ್ಲ. ಮಹಿಷಿ ವರದಿಯ ಹೆಸರು ಹೇಳಿ ಆಳಿದ…

2 hours ago

ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹೇಶ್ ರೆಡ್ಡಿ ನಾಮಪತ್ರ ಸಲ್ಲಿಕೆ

ಕಲಬುರಗಿ: ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹಾಸಭಾದ ಅಧ್ಯಕ್ಷ ಶರಣಕುಮಾರ ಮೋದಿ ಹಾಗೂ ಸಮಾಜದ…

2 hours ago

ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲ: ರಾಜ್ಯ ಸರಕಾರದ ವಿರುದ್ಧ ಸಾಂಕೇತಿಕ ಧರಣಿ ಸತ್ಯಾಗೃಹ

ಕಲಬುರಗಿ: ಕರ್ನಾಟಕ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲವಾದ ರಾಜ್ಯ ಸರ್ಕಾರ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪುನೀತರಾಜ…

2 hours ago

ನಿವೃತ್ತಿ ಜೀವನ ಸುಖಕರವಾಗಿರಲಿ; ಪಾಟೀಲ್

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸ್ಥಳೀಯ ಪೊಲೀಸ್ ಠಾಣೆಯಲ್ಲಿ 20 ವರ್ಷ ಒಂದೇ ಕಡೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ ಎಎಸ್'ಐ…

2 hours ago