ಬಿಸಿ ಬಿಸಿ ಸುದ್ದಿ

ವಾಡಿಯಲ್ಲಿ ಕಲರ್ ಕಲರ್ ಕುಡಿಯುವ ನೀರು ಪೂರೈಕೆ

ವಾಡಿ: ಮಾಡುತ್ತಿರುವ ಕುಡಿವ ನೀರಿನಲ್ಲಿ ಚರಂಡಿ ನೀರು ಹಾಗೂ ಮಳೆಯಿಂದ ಕಲುಷಿತ ನೀರು ಸೇರ್ಪಡೆಯಾಗಿ ಸಾರ್ವಜನಿಕರು ಅನಿವಾರ್ಯವಾಗಿ ರಾಡಿ ನೀರು ಬಳಸುವ ಪರಿಸ್ಥಿತಿ ಬಂದಿದೆ‌ ಇದನ್ನು ಗಂಭೀರವಾಗಿ ಪರಿಗಣಿಸಿ ಕ್ರಮಕೈಗೊಳ್ಳಿ ಎಂದು ಜಿಲ್ಲಾಧಿಕಾರಿಗಳಿಗೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ ಮನವಿ ಪತ್ರ ಸಲ್ಲಿಸಿದ್ದಾರೆ.

ಶಾಶ್ವತ ಕುಡಿಯುವ ನೀರಿನ ಯೋಜನೆಯಡಿ ನೀರು ಶುದ್ಧೀಕರಣ ಘಟಕ ನಿರ್ಮಾಣವಾದರೂ ಸಹ ಇಲ್ಲಿನ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಶುದ್ದಿಕರಣ ಗೊಳ್ಳುತ್ತಿಲ್ಲ, ನದಿಯ ತೀರದಲ್ಲಿಯೂ ಸಾಕಷ್ಟು ಪಾರ್ಥೆನಿಯಂ ಕಸ, ಜಾಲಿ ಕಂಟಿ ಸೇರಿದಂತೆ ಇತರ ಕಸ ತೆಗೆದಿಲ್ಲ, ಹೀಗಾಗಿ ನೀರು ಮಲಿನವಾಗುತ್ತಿದೆ.

ನದಿಯ ನೀರಲ್ಲಿ ಮಣ್ಣು ಮಿಶ್ರಿತ ಹಾಗೂ ಎಸಿಸಿ ,ರೇಲ್ವೆ ಹಾಗೂ ಪಟ್ಟಣ ಸೇರಿದಂತೆ ಆರೋಗ್ಯದ ಮೇಲೆ ಪರಿಣಾಮ ಬೀರುವಂತ ತ್ಯಾಜ್ಯಗಳು ನೀರಿನಲ್ಲಿ ಬೆರೆಯುತ್ತಿರುವುದರಿಂದ, ಜನಸಾಮಾನ್ಯರು ಹೊಟ್ಟೆ ಜಾಡಿಸುವುದು, ಗಂಟಲು ಕೆರೆತ, ಕೆಮ್ಮು, ಚರ್ಮದ ತುರಿಕೆಯಂತಹ ಅನೇಕ ಆರೋಗ್ಯ ಸಮಸ್ಯೆಗಳನ್ನು ಎದುರಿಸುವಂತಾಗುತ್ತಿದೆ.

ಸರಿಯಾಗಿ ಫಿಲ್ಟರ್‌ ಮಾಡದ ರಾಡಿ ನೀರಿಗೆ ಹೆದರಿದ ಬಹುಸಂಖ್ಯಾತರು ಶುದ್ಧ ಕುಡಿವ ನೀರಿನ ಘಟಕದಿಂದ ನೀರು ಪಡೆಯಲು ಪರದಾಡುತ್ತಿದ್ದಾರೆ. ಕೆಲವು ಬಡಾವಣೆಗಳಲ್ಲಿ ಕುಡಿಯುವ ನೀರಿನ ಪೈಪ್‌ ಒಡೆದು ಅದರ ಮೂಲಕ ನದಿಯ ನದಿ ನೀರಿನ ಜತೆಗೆ ಚರಂಡಿಯ ನೀರು ಸೇರ್ಪಡೆಗೊಂಡು ನಳಗಳ ಮೂಲಕ ಮನೆಗಳಿಗೆ ಪೂರೈಕೆಯಾಗುತ್ತಿದೆ. ಕುಡಿಯಲು ಕೊಡಗಳಲ್ಲಿ, ಟ್ಯಾಂಕ್‌ಗಳಲ್ಲಿ ತುಂಬಿದ ನೀರು ಗಬ್ಬು ವಾಸನೆಯಿಂದ ಕೂಡಿ,ಮಣ್ಣು ಶೇಖರಣೆ ಯಾಗುತ್ತಿದೆ ಮತ್ತು ನಾಲ್ಕಾರು ದಿನಗಳಲ್ಲಿ ತುಂಬಿದ ನೀರಿನಲ್ಲಿ ಹುಳಗಳಾಗುತ್ತಿವೆ.

ಸುಮಾರು 50ಸಾವಿರ ಜನಸಂಖ್ಯೆ ಹೊಂದಿದ ಪಟ್ಟಣದಲ್ಲಿ ಪುರಸಭೆ ಅಧಿಕಾರಿಗಳು ಜನರಿಗೆ ಕುಡಿಯಲು ಯೊಗ್ಯವಲ್ಲದ ರಾಡಿ ನೀರನ್ನು ಸಹ ನಾಲ್ಕು ದಿನಗಳಿಗೊಮ್ಮೆ
ಪೂರೈಸುತ್ತಿದ್ದು,ಇದರಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ,

ಈ ಮಳೆಗಾಲ ಸಂಧರ್ಭದಲ್ಲಿ ಅಶುದ್ಧ ನೀರನ್ನು ಕುಡಿಯುವುದು ಆರೋಗ್ಯದ ದೃಷ್ಟಿಯಿಂದ ತುಂಬಾ ಅಪಾಯಕಾರಿ,ಆದ್ದರಿಂದ ಅಧಿಕಾರಿಗಳು ನಾಗರಿಕರಿಗೆ ಫಿಲ್ಟರ್‌ ಮಾಡಿದ ಶುದ್ಧ ನೀರನ್ನು ಸಮರ್ಪಕವಾಗಿ ಪೂರೈಸಬೇಕು ಎಂದು ಸುಮಾರು ವರ್ಷಗಳಿಂದ ಜಿಲ್ಲಾಧಿಕಾರಿಗಳಿಗೆ ಮತ್ತು ಇಲ್ಲಿನ ಮುಖ್ಯಾಧಿಕಾರಿ ಗಳಿಗೆ ಮನವಿ ಸಲ್ಲಿಸಿದರು ಪ್ರಯೋಜನ ಆಗುತ್ತಿಲ್ಲ.

ಇದನ್ನು ತಕ್ಷಣ ಪರಿಹರಿಸದೇ ಹೋದರೆ ಕೆಲವೇ ದಿನಗಳಲ್ಲಿ ಪುರಸಭೆ ಎದುರು ಧರಣಿ ಮಾಡಲಾಗುವುದು ಎಂದು ಹೇಳಿದರು.

emedialine

Recent Posts

ಅಧ್ಯಾತ್ಮದ ಜ್ಞಾನ ಬದುಕಿಗೆ ಬೆಳಕು ನೀಡುತ್ತದೆ

ಕಲಬುರಗಿ:ಮಾನವನ ಬದುಕಿಗೆ ಅಧ್ಯಾತ್ಮದ ಜ್ಞಾನವು ಅರಿವು ಮೂಡಿಸುವುದಲ್ಲದೆ,ಬೆಳಕು ನೀಡುತ್ತದೆ ಎಂದು ಪುರಾಣ ಪಂಡಿತ ಮಲ್ಲಿಕಾರ್ಜುನ ಶಾಸ್ತ್ರಿ ಅಭಿಪ್ರಾಯ ಪಟ್ಟಿದ್ದಾರೆ. ಜಯನಗರ…

3 hours ago

ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆ ಸಮೀಕ್ಷೆ : ಡಾ. ಶಾಲಿನಿ ರಜನೀಶ್

ಬೆಂಗಳೂರು: ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆಹಚ್ಚಲು ಜುಲೈ 15 ರಿಂದ 30 ರವರೆಗೆ ಸಮೀಕ್ಷೆ ನಡೆಸಲಾಗುವುದು…

6 hours ago

ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ: ಸಿಎಂ ಸಿದ್ದು

ಬೆಂಗಳೂರು: ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ…

6 hours ago

ಕನ್ನಡದ ನೆಲದಲ್ಲಿ ಕನ್ನಡಿಗರ ಮಕ್ಕಳೇ ಉದ್ಯೋಗ ಮಿಸಲಾತಿ ಕೇಳುವಂತಹ ಪರಸ್ಥಿತಿ ಆಘಾತಕಾರಿ

ಕಲಬುರಗಿ: ಡಾ.ಸರೋಜನಿ ಮಹಿಷಿ ವರದಿ ಅನುಷ್ಠಾನಕ್ಕೆ ನಡೆದ, ನಡೆಯುತ್ತಿರುವ ಹೋರಾಟಗಳಿಗೆ ಲೆಕ್ಕವೇ ಇಲ್ಲ. ಮಹಿಷಿ ವರದಿಯ ಹೆಸರು ಹೇಳಿ ಆಳಿದ…

6 hours ago

ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹೇಶ್ ರೆಡ್ಡಿ ನಾಮಪತ್ರ ಸಲ್ಲಿಕೆ

ಕಲಬುರಗಿ: ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹಾಸಭಾದ ಅಧ್ಯಕ್ಷ ಶರಣಕುಮಾರ ಮೋದಿ ಹಾಗೂ ಸಮಾಜದ…

6 hours ago

ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲ: ರಾಜ್ಯ ಸರಕಾರದ ವಿರುದ್ಧ ಸಾಂಕೇತಿಕ ಧರಣಿ ಸತ್ಯಾಗೃಹ

ಕಲಬುರಗಿ: ಕರ್ನಾಟಕ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲವಾದ ರಾಜ್ಯ ಸರ್ಕಾರ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪುನೀತರಾಜ…

6 hours ago