ಕಲಬುರಗಿ: ನಗರದ ಸಬರ್ಬನ್ ಪೆÇಲೀಸ್ ಠಾಣೆಯ ಬಡಾವಣೆಯ ವ್ಯಾಪ್ತಿಯಲ್ಲಿ ನಡೆದ 13 ವರ್ಷದ ಅಮಾಯಕ ಬಾಲಕಿಯ ಮೇಲೆ ಅತ್ಯಾಚಾರ ವ್ಯಸಗಿದ ಆರೋಪಿಗೆ ಕಠಿಣ ಶಿಕ್ಷೆ ಒದಗಿಸಬೇಕೆಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಪದ್ಮಿನಿ ಕಿರಣಗಿ ಅವರು ಒತ್ತಾಯಿಸಿದ್ದಾರೆ.
13 ವರ್ಷದ ಪುಟ್ಟ ಬಾಲಕಿಯ ಮೇಲೆ ಫುಸಲಾಯಿಸಿ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿ ಮಾಡಿ ಸಾವಿಗೆ ಕಾರಣೀಭೂತನಾದ ಯುವಕನಿಗೆ ಮಕ್ಕಳ ರಕ್ಷಣಾ ಪೆÇೀಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಆತನಿಗೆ ಕಠಿಣ ಶಿಕ್ಷೆ ಒದಗಿಸಬೇಕು. ಬಡತನದ ಬೇಗೆಯಿಂದ ಬಳಲುತ್ತಿದ್ದ ಮಹಿಳೆಯು ಮಗಳನ್ನು ಬದುಕಿಸಲು ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಕುಟುಂಬಕ್ಕೆ ನ್ಯಾಯ ಒದಗಿಸಬೇಕು.
ತಾಯಿ ಮನೆಯಲ್ಲಿ ಇಲ್ಲದ ಸಮಯದಲ್ಲಿ ಬಾಲಕಿಯನ್ನು ನಂಬಿಸಿ ಅತ್ಯಾಚಾರ ಮಾಡಿ ಸಾವಿಗೆ ಕಾರಣನಾಗಿದ್ದಾನೆ.ಕುಟುಂಬಸ್ಥರ ಹೇಳಿಕೆ ಪ್ರಕಾರ ಬಾಲಕಿಯು ಹೊಟ್ಟೆ ನೋವೆಂದು ಬಳಲುತ್ತಿರುವಾಗ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿಯ ವೈದ್ಯರು ಆಕೆಯು ಎಂಟು ತಿಂಗಳ ಗರ್ಭಿಣಿ ಎಂದು ತಿಳಿಸಿರುವರು.
ಅತ್ಯಾಚಾರ ಎಸಗಿದ ಸರ್ಪರಾಜ್ ಮಿರ್ಜಾ ಆರೋಪಿಗೆ ಪೆÇೀಕ್ಸೋ ಕಾಯ್ದೆ ಅಡಿಯಲ್ಲಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಒತ್ತಾಯಿಸುತ್ತದೆ. ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.