ಬಿಸಿ ಬಿಸಿ ಸುದ್ದಿ

ಕನ್ನಡ ಸಾಹಿತ್ಯ ಸಂಘ ಸಾಹಿತಿ ದಿ.ಡಾ.ಕಮಲಾ ಹಂಪನಾಗೆ ಶ್ರದ್ಧಾಂಜಲಿ

ಸುರಪುರ: ಮೇರು ಸಾಹಿತಿ ಡಾ.ಕಮಲಾಹಂಪನಾ ಅವರ ಕೃತಿಗಳನ್ನು ಓದುವದು ಹಾಗೂ ಆ ಕೃತಿಗಳು ಸಾಮಾನ್ಯ ಜನರಿಗೆ ಸಿಗುವಂತೆ ಮಾಡುವದು ಇಂದಿನ ಅಗತ್ಯವಾಗಿದೆ ಅಂದಾಗ ಮಾತ್ರ ಅವರಿಗೆ ನಾವು ಗೌರವ ಸಲ್ಲಿಸಿದಂತಾಗುತ್ತೆ ಎಂದು ಹೈಕೋರ್ಟ್ ಹಿರಿಯ ನ್ಯಾಯವಾದಿಗಳಾದ ಜೆ,ಅಗಸ್ಟಿನ್ ಅವರು ಹೇಳಿದರು.

ಸುರಪುರ ಕನ್ನಡ ಸಾಹಿತ್ಯ ಸಂಘದದಲ್ಲಿ ಇತ್ತೀಚೆಗೆ ನಮ್ಮನ್ನಗಲಿದ ಮೇರು ಸಾಹಿತಿ ಡಾ.ಕಮಲಾಹಂಪನಾ ಅವರ ಶೃದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕನಕಪ್ಪ ವಾಗನಗೇರಿಯವರು ಮಾತನಾಡುತ್ತ ಹಳಗನ್ಡಡ ಸಾಹಿತ್ಯದ ಮೇರು ಕೃತಿಯಾದ ಪರಮದೇವ ಕವಿಯ ತುರಂಗ ಭಾರತ ಕೃತಿಯನ್ನು ಸಂಪಾದಿಸಿ ಕನ್ನಡ ಸರಸ್ವತ ಲೋಕಕ್ಕೆ ಅಮೋಘ ಕೊಡಿಗೆಯನ್ನು ನೀಡಿದ್ದಾರೆ ಎಂದು ಹೇಳಿದರು.

ಕನ್ನಡ ಲೇಖಕಿಯರ ಸಾಲಿನಲ್ಲಿ ಕಮಲಾಹಂಪನಾ ಅವರು ಅಗ್ರಗಣ್ಯರಾಗಿ ನಿಲ್ಲುತ್ತಾರೆ ಎಂದು ಮಹಾಂತೇಶ ಗೋನಾಲ್ ಅವರು ಅಭಿಪ್ರಾಯಪಟ್ಟರು

.ಅಪಾರವಾದ ತಮ್ಮ ಜ್ಞಾನದ ಪರಿಧಿಯಲ್ಲಿ ಕನ್ನಡದ ಅತ್ಯಮೂಲ್ಯ ಕೃತಿಗಳನ್ನು ಸಂಪಾದಿಸಿ ಹಳಗನ್ನಡ ಕ್ಷೇತ್ರದ ಬೆಳವಣಿಗೆಗೆ ಅವರು ಮಹತ್ವವಾದ ಕೊಡುಗೆ ನೀಡಿದ್ದಾರೆ ಎಂದು ಸಾಹಿತಿ ಶ್ರೀನಿವಾಸ ಜಾಲವಾದಿ ಅವರು ಹೇಳಿದರು. ಕವಿ ಕನಕಪ್ಪ ವಾಗನಗೇರಿ ಕಮಲಾ ಹಂಪನಾ ದಂಪತಿಗಳ ಅನ್ಯೋನ್ಯ ದಾಂಪತ್ಯದ ಬಗ್ಗೆ ಹಾಗೂ ಅವರ ಮಹತ್ವದ ಕೃತಿಗಳ ಬಗ್ಗೆ ಮಾತನಾಡಿದರು.

ಕಮಲಾ ಹಂಪನಾ ಅವರ ಎಲ್ಲ ಕೃತಿಗಳನ್ನು ಸರ್ಕಾರ ಮರು ಮುದ್ರಿಸಿ ಕಡಿಮೆ ಬೆಲೆಗೆ ಸಾಹಿತ್ಯಾಸಕ್ತರಿಗೆ, ವಿದ್ಯಾರ್ಥಿಗಳಿಗೆ ದೊರೆಯುವಂತೆ ಮಾಡಬೇಕೆಂದು ಸಭೆಯಲ್ಲಿ ಒಕ್ಕೊರಿಲಿನಿಂದ ಸರಕಾರಕ್ಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಿಗೆ ಒತ್ತಾಯಿಸಲಾಯಿತು. ಸಭೆಯ ಆರಂಭದಲ್ಲಿ ಡಾ.ಕಮಲಾ ಹಂಪನಾ ಅವರ ಭಾವಿಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ,ಎರಡು ನಿಮಿಷಗಳ ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಅರ್ಪಿಸಿದರು.

ಸಭೆಯ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಸಂಘದ ಅಧ್ಯಕ್ಷರಾದ ಬಸವರಾಜ ಜಮದರಖಾನಿ ಅವರು ವಹಿಸಿದ್ದರು, ಕಾರ್ಯಕ್ರಮದಲ್ಲಿ ವೆಂಕಟೇಶ್ ಗೌಡ ಪಾಟೀಲ,ಸಿದ್ದಯ್ಯ ಮಠ,ದೇವು ಹೆಬ್ಬಾಳ,ಕಸಾಪ ಅಧ್ಯಕ್ಷರಾದ ಶರಣಬಸವ ಯಳವಾರ,ಅವರು ಕಮಲಾ ಹಂಪನಾರ ಕುರಿತಾಗಿ ಮಾತನಾಡಿದರು,.ಪ್ರಕಾಶ್ ಚಂದ್ ಜೈನ್, ರಾಘವೇಂದ್ರ ಬಾಡಿಯಾಳ ಗಾಯಕರಾದ ನರಸಿಂಹ ಬಾಡಿಯಾಳ, ಶ್ರೀಪಾದ ಗಡ್ಡದ, ರಾಘವೇಂದ್ರ ಭಕ್ರಿ, ಪ್ರಕಾಶ ಬಣಗಾರ, ಕವಿ ನಬಿಲಾಲ ಮಕಾನದಾರ ಮುಂತಾದವರು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಸಾಹಿತಿ ಶ್ರೀನಿವಾಸ ಜಾಲವಾದಿ ಅವರು ನಿರ್ವಹಿಸಿದರು, ಹೇಮಲು ರಾಠೋಡ ಅವರು ವಂದಿಸಿದರು.

emedialine

Recent Posts

ಪಠ್ಯಕ್ರಮ ರಚನೆ ಗುಣಾತ್ಮಕ ಅಂಶಗಳಿಂದ ಕೂಡಿರಲಿ

ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…

2 mins ago

ಪತ್ರಕರ್ತ ಸಿದ್ರಾಮ್ ನಾಡಗೇರಿ ಪುತ್ರಿ ಸ್ಪಂದನಾ ಎಸ್. ನಡಗೇರಿಗೆ ಪತ್ರಕರ್ತರ ಸಂಘದಿಂದ ಸನ್ಮಾನ

ಹಾವೇರಿ: SSLC,PUC ಯಲ್ಲಿ 90% ಕಿಂತ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು,…

16 mins ago

ಸೇವಾ ಮನೋಭಾವದ ಮನಸ್ಸು ಹೆಚ್ಚಾಗಲಿ: ಜ್ಯೋತಿ ಪಾಟೀಲ್

ಕಲಬುರಗಿ: ನೌಕರಿ ಕಾಯಕವಾದರೆ ತೃಪ್ತಿ ಜೀವನ, ವೃತ್ತಿಯಲ್ಲಿ ಸೇವಾ ಮನೋಭಾವ ಹೊಂದಿದರೆ ಆತ್ಮಶುದ್ಧಿಯಾಗಿ ಸಂತೃಪ್ತ ಜೀವನ ನಮ್ಮದಾಗುತ್ತದೆ ಎಂದು ಉಪಳಾಂವ…

21 mins ago

ಕಲಬುರಗಿ: ಕಾರ್ಮಿಕ ಸಚಿವರ ಅಧ್ಯಕ್ಷತೆಯಲ್ಲಿ ಜುಲೈ 5 ರಿಂದ 6 ವರೆಗೆ ಪ್ರಗತಿ ಪರಿಶೀಲನಾ ಸಭೆ

ಕಲಬುರಗಿ: ಕಾರ್ಮಿಕ ಸಚಿವರ ಅಧ್ಯಕ್ಷತೆಯಲ್ಲಿ ಕಲಬುರಗಿ ಮತ್ತು ಬೀದರ್ ಕಂದಾಯ ವಿಭಾಗದ ಜಿಲ್ಲೆಗಳ ಕಾರ್ಮಿಕ ಆಯುಕ್ತಾಲಯ ಹಾಗೂ ಇಲಾಖೆಗೆ ಸಂಬಂಧಿಸಿದ…

1 hour ago

ಪ್ರತಿಭೆಗೆ ಸೂಕ್ತ ಪುರಸ್ಕಾರ ಸಿಕ್ಕಾಗ ಸಾಧನೆ ಸಾಧ್ಯ

ವಾಡಿ: ಪ್ರತಿಯೊಬ್ಬರಿಗೂ ಗುರಿ ಇರಬೇಕು. ಆ ಗುರಿ ಸಾಧನೆಗೆ ಸಮರ್ಥ ಗುರುಗಳು ಬೇಕು ಅಂದಾಗ ಮಾತ್ರ ನಮ್ಮ ಗುರಿ ಈಡೇರಲು…

2 hours ago

ಡಿಸಿಸಿ ಅಧ್ಯಕ್ಷರನ್ನಾಗಿ ಮುಕ್ತಾರ್ ಪಟೇಲ್ ನೇಮಕಕ್ಕೆ ವಸೀಂ ಖಾನ್ ಒತ್ತಾಯ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ: ಕಾಂಗ್ರೆಸ್‌ ಪಕ್ಷದ ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಕಾಂಗ್ರೆಸ್ ಪಕ್ಷದ…

2 hours ago