ಬಿಸಿ ಬಿಸಿ ಸುದ್ದಿ

ರಂಗಭೂಮಿಗೆ ಸಿ.ಜಿ.ಕೆ ಕೊಡುಗೆ ಅಪಾರ; ಸಿಜಿಕೆ ಪ್ರಶಸ್ತಿ ಪ್ರದಾನ ಸಮಾರಂಭ

ಸುರಪುರ:ಕರ್ನಾಟಕ ರಂಗಕ್ಷೇತ್ರಕ್ಕೆ ಹಿರಿಯ ನಾಟಕಕಾರರಾಗಿದ್ದ ಸಿ.ಜಿ.ಕೆ ಅವರ ಕೊಡುಗೆ ಅಪಾರವಾಗಿದೆ ಎಂದು ಸಗರನಾಡು ಸೇವಾ ಪ್ರತಿಷ್ಠಾನ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ ಹೇಳಿದರು.

ಪಟ್ಟಣದ ರಂಗಂಪೇಟೆಯ ಖಾದಿ ಕೇಂದ್ರ ಆವರಣದಲ್ಲಿ ಸಗರನಾಡು ಸೇವಾ ಪ್ರತಿಷ್ಠಾನ ಹಾಗೂ ಕರ್ನಾಟಕ ಬೀದಿ ನಾಟಕ ಅಕಾಡೆಮಿ ವತಿಯಿಂದ ಆಯೋಜಿಸಿದ್ದ ಬೀದಿ ರಂಗ ದಿನಾಚರಣೆ ಹಾಗೂ ಸಿ.ಜಿ.ಕೆ ಪ್ರಶಸ್ತಿ 2024 ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೀದಿ ನಾಟಕಗಳ ಮೂಲಕ ಜಾಗೃತಿ ಮೂಡಿಸುತ್ತ ರಂಗ ಸಂಘಟಕರನ್ನು ಒಂದುಗೂಡಿಸಿದ ಸಿ.ಜಿ.ಕೆ ಯವರು ಕರ್ನಾಟಕ ನಾಟಕ ಅಕಾಡೆಮಿ ಅದ್ಯಕ್ಷರಾಗಿ ಮಹತ್ತರ ಕಾರ್ಯಾನಿರ್ವಹಿಸಿದ್ದಾರೆ ಎಂದು ಹೇಳಿದರು.

ಪ್ರತಿ ವರ್ಷ ಸಗರನಾಡು ಸೇವಾ ಪ್ರತಿಷ್ಠಾನದ ಮೂಲಕ ಸಿ.ಜಿ.ಕೆ ಅವರ ಪ್ರಶಸ್ತಿ ಪ್ರಧಾನ ಸಮಾರಂಭ ಆಯೋಜಿಸುತ್ತಾ ಬರುತ್ತಿದ್ದು, ಇದುವರೆಗೂ ಒಟ್ಟು 8 ಜನ ನಾಟಕಕಾರರಿಗೆ ಪ್ರಶಸ್ತಿ ನೀಡಿದ್ದು, ಎಲ್.ಬಿ.ಕೆ ಆಲ್ದಾಳ, ಮಲ್ಲೇಶಿ ಕೋನ್ಹಾಳ, ಹೊನ್ನಪ್ಪ ಚನ್ನುರು, ಶರಣಪ್ಪ ಹಾಲಭಾವಿ, ಬಲಭೀಮ ನಾಯಕ ಬೈರಿಮಡ್ಡಿ, ಬಸವರಾಜ ಪಂಚಗಲ್ ಕೋಡೆಕಲ್, ಮಹಾಂತಯ್ಯ ಸ್ವಾಮಿ ಹಿರೇಮಠ ಅವರಿಗೆ ನೀಡಿದ್ದು ಈ ವರ್ಷದ ಪ್ರಶಸ್ತಿಯನ್ನು ರಂಗ ಸಂಘಟಕರು ಹಾಗೂ ಹಿರಿಯ ನಾಟಕಕಾರರಾದ ಲಿಂಗಣ್ಣ ಸಾಹುಕಾರ ತಡಿಬಿಡಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡುತ್ತಿದ್ದೆವೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಹಿರಿಯ ನಾಟಕಕಾರ ಲಿಂಗಣ್ಣ ಸಾಹುಕಾರ ತಡಿಬಿಡಿ ಅವರಿಗೆ ಸಿಜಿಕೆ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಿ ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಾಲೇಜಿನ ಪ್ರಾಚಾರ್ಯ ವಿರೇಶ ಹಳಿಮನಿ, ಉಪಪ್ರಾಚಾರ್ಯ ಬಲಭೀಮ ಪಾಟೀಲ, ಹಿರಿಯ ಮುಖಂಡರಾದ ಶಿವಶರಣಪ್ಪ ಹೆಡಿಗಿನಾಳ, ಸಂಘಟಕ ಶ್ರೀಕಾಂತ ರತ್ತಾಳ, ಕಲಾವಿಧರಾದ ಸಿದ್ಧಣ್ಣ ಹದನೂರ, ರುದ್ರಪ್ಪ ಕೆಂಭಾವಿ ವೇದಿಕೆಮೇಲಿದ್ದರು. ಕಾರ್ಯಕ್ರಮವನ್ನು ಹಣಮಂತ್ರಾಯ ದೇವತ್ಕಲ್ ನಿರೂಪಿಸಿದರು, ಅಮರೇಶ ಮುಷ್ಠಳ್ಳಿ ಸ್ವಾಗತಿಸಿದರು, ಮೇಘಾ ದಾಯಿಪುಲೆ ವಂದಿಸಿದರು.

emedialine

Recent Posts

ಪಠ್ಯಕ್ರಮ ರಚನೆ ಗುಣಾತ್ಮಕ ಅಂಶಗಳಿಂದ ಕೂಡಿರಲಿ

ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…

30 mins ago

ಪತ್ರಕರ್ತ ಸಿದ್ರಾಮ್ ನಾಡಗೇರಿ ಪುತ್ರಿ ಸ್ಪಂದನಾ ಎಸ್. ನಡಗೇರಿಗೆ ಪತ್ರಕರ್ತರ ಸಂಘದಿಂದ ಸನ್ಮಾನ

ಹಾವೇರಿ: SSLC,PUC ಯಲ್ಲಿ 90% ಕಿಂತ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು,…

44 mins ago

ಸೇವಾ ಮನೋಭಾವದ ಮನಸ್ಸು ಹೆಚ್ಚಾಗಲಿ: ಜ್ಯೋತಿ ಪಾಟೀಲ್

ಕಲಬುರಗಿ: ನೌಕರಿ ಕಾಯಕವಾದರೆ ತೃಪ್ತಿ ಜೀವನ, ವೃತ್ತಿಯಲ್ಲಿ ಸೇವಾ ಮನೋಭಾವ ಹೊಂದಿದರೆ ಆತ್ಮಶುದ್ಧಿಯಾಗಿ ಸಂತೃಪ್ತ ಜೀವನ ನಮ್ಮದಾಗುತ್ತದೆ ಎಂದು ಉಪಳಾಂವ…

48 mins ago

ಕಲಬುರಗಿ: ಕಾರ್ಮಿಕ ಸಚಿವರ ಅಧ್ಯಕ್ಷತೆಯಲ್ಲಿ ಜುಲೈ 5 ರಿಂದ 6 ವರೆಗೆ ಪ್ರಗತಿ ಪರಿಶೀಲನಾ ಸಭೆ

ಕಲಬುರಗಿ: ಕಾರ್ಮಿಕ ಸಚಿವರ ಅಧ್ಯಕ್ಷತೆಯಲ್ಲಿ ಕಲಬುರಗಿ ಮತ್ತು ಬೀದರ್ ಕಂದಾಯ ವಿಭಾಗದ ಜಿಲ್ಲೆಗಳ ಕಾರ್ಮಿಕ ಆಯುಕ್ತಾಲಯ ಹಾಗೂ ಇಲಾಖೆಗೆ ಸಂಬಂಧಿಸಿದ…

2 hours ago

ಪ್ರತಿಭೆಗೆ ಸೂಕ್ತ ಪುರಸ್ಕಾರ ಸಿಕ್ಕಾಗ ಸಾಧನೆ ಸಾಧ್ಯ

ವಾಡಿ: ಪ್ರತಿಯೊಬ್ಬರಿಗೂ ಗುರಿ ಇರಬೇಕು. ಆ ಗುರಿ ಸಾಧನೆಗೆ ಸಮರ್ಥ ಗುರುಗಳು ಬೇಕು ಅಂದಾಗ ಮಾತ್ರ ನಮ್ಮ ಗುರಿ ಈಡೇರಲು…

2 hours ago

ಡಿಸಿಸಿ ಅಧ್ಯಕ್ಷರನ್ನಾಗಿ ಮುಕ್ತಾರ್ ಪಟೇಲ್ ನೇಮಕಕ್ಕೆ ವಸೀಂ ಖಾನ್ ಒತ್ತಾಯ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ: ಕಾಂಗ್ರೆಸ್‌ ಪಕ್ಷದ ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಕಾಂಗ್ರೆಸ್ ಪಕ್ಷದ…

2 hours ago