ಬಿಸಿ ಬಿಸಿ ಸುದ್ದಿ

ಸರಕಾರಿ ಪದವಿಪೂರ್ವ ಕಾಲೇಜಿಗೆ ಮೂಲಸೌಲಭ್ಯ ಒದಗಿಸಬೇಕೆಂದು ಪ್ರತಿಭಟನೆ

ಶಹಾಬಾದ: ನಗರದ ಸರಕಾರಿ ಪದವಿಪೂರ್ವ ಕಾಲೇಜಿಗೆ ಖಾಯಂ ಉಪನ್ಯಾಸಕರನ್ನು ನೇಮಿಸಬೇಕು ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಸೋಮವಾರ ಎಐಡಿಎಸ್‍ಓ ವತಿಯಿಂದ ನಗರದ ನೆಹರು ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಎಐಡಿಎಸ್‍ಓ ಜಿಲ್ಲಾ ಕಾರ್ಯದರ್ಶಿ ತುಳಜರಾಮ.ಎನ್.ಕೆ ಮಾತನಾಡಿ, ಶಹಾಬಾದ ನಗರದ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಸುತ್ತಮುತ್ತಲಿನ ಹಳ್ಳಿಗಳಿಂದ ಬಡ ರೈತ-ಕಾರ್ಮಿಕರ ನೂರಾರು ಪ್ರತಿಭಾವಂತ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಬರುತ್ತಾರೆ. ಈ ವರ್ಷ ಪಿಯು ಫಲಿತಾಂಶದಲ್ಲಿ ತಾಲೂಕಿನಲ್ಲೇ ಪ್ರಥಮ ಸ್ಥಾನ ಹಾಗೂ 08 ಜನ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದಾರೆ. ಈ ಕಾಲೇಜಿನಲ್ಲಿ 205ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ಆದರೆ ದುರದೃಷ್ಟಾವೆನೆಂದರೆ ಈ ಕಾಲೇಜಿನಲ್ಲಿ ವಿಜ್ಞಾನ ವಿಭಾಗಕ್ಕೆ ಒಬ್ಬರೆ ಒಬ್ಬರು ಖಾಯಂ ಉಪನ್ಯಾಸಕರೇ ಇಲ್ಲ. ದೂರದ ಟೆಂಗಳಿ, ಹೆಬ್ಬಾಳ, ರೇವಗಿ ಮತ್ತು ನರೋಣಿ ಸರಕಾರಿ ಪಿಯು ಕಾಲೇಜುಗಳ ನಿಯೋಜಿತ ಉಪನ್ಯಾಸಕರೇ ಇವರಿಗೆ ಪಾಠ ಹೇಳುವಂತಾಗಿದೆ. ಕಲಾ ವಾಣಿಜ್ಯ ವಿಭಾಗದ ಅರ್ಥಶಾಸ್ತ್ರ ಮತ್ತು ಸಮಾಜಶಾಸ್ತ್ರ ವಿಷಯಕ್ಕೆ ಖಾಯಂ ಉಪನ್ಯಾಸಕರೇ ಇ¯್ಲ. ಕನಿಷ್ಠ ಶುದ್ಧ ಕುಡಿಯುವ ನೀರು, ವಿಜ್ಞಾನದ ವಿಭಾಗಕ್ಕೆ ಪ್ರಯೋಗಾಲಯ ಮತ್ತು ಗ್ರಂಥಾಲಯದಲ್ಲಿ ಅವಶ್ಯಕತೆಗೆ ತಕ್ಕಷ್ಟು ಪುಸ್ತಕಗಳಿಲ್ಲದೆ ಇರುವುದು ವಿದ್ಯಾರ್ಥಿಗಳ ಸಮಗ್ರ ಜ್ಞಾನಕ್ಕೆ ಅಡ್ಡಿ ಉಂಟು ಮಾಡುತ್ತಿವೆ.

ಕಾಲೇಜು ಮುಗಿದ ಬಳಿಕ ಸ್ಥಳೀಯ ಕಿಡಿಗೇಡಿಗಳು, ಕುಡುಕರು ಬಂದು ಮದ್ಯಪಾನ ಮಾಡುವುದು, ಬಾಟಲಿಗಳನ್ನು ಒಡೆದು ಕಾಲೇಜಿನ ಪರಿಸರವನ್ನು ಹಾಳು ಮಾಡುತ್ತಿದ್ದಾರೆ. ಆದರೂ ಇಲ್ಲಿಯವರೆಗೂ ಸಂಬಂಧ ಪಟ್ಟ ಅಧಿಕಾರಿಗಳು ಗಮನ ಹಾಕದೆ ಇರುವುದು ವಿದ್ಯಾರ್ಥಿಗಳ ಆತಂಕಕ್ಕೆ ಕಾರಣವಾಗಿದೆ. ಆದ್ದರಿಂದ ಈ ಕೂಡಲೇ ವಿದ್ಯಾರ್ಥಿಗಳ ಶಿಕ್ಷಣದ ಹಿತದೃಷ್ಟಿಯಿಂದ ಸಂಬಂಧಪಟ್ಟ ಅಧಿಕಾರಿಗಳು ಈ ಸಮಸ್ಯೆಗಳ ಬಗ್ಗೆ ಗಮನ ಹರಿಸಿ ಬಗೆಹರಿಸಬೇಕಾಗಿ ಎಐಡಿಎಸ್‍ಓ ವಿದ್ಯಾರ್ಥಿ ಸಂಘಟನೆಯು ಆಗ್ರಹಿಸುತ್ತಿದೆ. ಕೂಡಲೇ ಸಮಸ್ಯೆಗಳು ಬಗೆಹರಿಸದಿದ್ದಲ್ಲಿ ಉನ್ನತ ಹಂತದ ಹೋರಾಟ ಮಾಡಬೇಕಾಗುತ್ತದೆ ಎಂದು ಹೇಳಿದರು.

ಈ ಪ್ರತಿಭಟನೆಯಲ್ಲಿ ಉಪಾಧ್ಯಕ್ಷರಾದ ದೇವರಾಜ ಹೊನಗುಂಟ, ಕಾರ್ಯದರ್ಶಿ ಅಜಯ್ ಗುರಜಲ್ಕರ್, ಜಿಲ್ಲಾ ಸಮಿತಿ ಸದಸ್ಯರಾದ ಸ್ಪೂರ್ತಿ ಗುರಜಲ್ಕರ್, ಬಾಬೂ ಪವರ್, ರಂಗನಾಥ ಮಾನೆ, ಸೃಷ್ಠಿ ಗುರಜಲ್ಕರ್ ಸೇರಿ ಹಲವಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

emedialine

Recent Posts

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

9 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

10 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

11 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

11 hours ago

ಮಹಿಳಾ ಘಟಕದ ನೂತನ ಪದಾಧಿಕಾರಿಗಳ ನೇಮಕ

ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…

12 hours ago

ಮಜರ್ ಆಲಂ ಖಾನ್ ಅಧ್ಯಕತೆಯಲ್ಲಿ ನಗರದ ವಿನ್ಯಾಸ ಮಾಲೀಕರು, ಡೆವಲಪರ್ಸ್, ಬಿಲ್ಡರ್ಸ್ ಅವರೊಂದಿಗೆ ಸಭೆ

ಕಲಬುರಗಿ: ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ್ ಆಲಂ ಖಾನ್ ಇವರ ಅಧ್ಯಕ್ಷತೆಯಲ್ಲಿ ನಗರದ ಬಿಲ್ಡರ್ಸ್ ಡೆವಲಪರ್ಸ್ ಮತ್ತು ವಿನ್ಯಾಸದ ಮಾಲೀಕರವರೊಂದಿಗೆ…

12 hours ago