ಬಿಸಿ ಬಿಸಿ ಸುದ್ದಿ

ಮಹಿಳೆಯರು ಅನ್ಯಾಯದ ವಿರುದ್ಧ ನಿಲ್ಲುವುದು ಅವಶ್ಯಕ: ಶೋಭಾ.ಎಸ್

ಶಹಾಬಾದ: ಮಹಿಳೆಯರು ಅನ್ಯಾಯದ ವಿರುದ್ಧ ಹೋರಾಟದ ಜತೆಗೆ ವೈಚಾರಿಕವಾಗಿ ಗಟ್ಟಿಯಾಗಿ ನಿಲ್ಲುವುದು ಬಹಳ ಅವಶ್ಯಕ ಎಂದು ಐಎಂಎಸ್‍ಎಸ್ ರಾಜ್ಯ ಕಾರ್ಯದರ್ಶಿ ಶೋಭಾ.ಎಸ್ ಹೇಳಿದರು.

ಅವರು ಸೋಮವಾರ ಹನುಮಾನ ನಗರದಲ್ಲಿ ಅಖಿಲ ಭಾರತ ಮಹಿಳಾ ಸಾಂಸ್ಕøತಿಕ ಸಂಘಟನೆ ಸ್ಥಳೀಯ ಸಮಿತಿಂ ಹಮ್ಮಿಕೊಂಡಿದ್ದ ಮಹಿಳಾ ಶಿಬಿರದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದರು.

ಮಹಿಳೆಯರ ಬದುಕೇ ಹೋರಾಟದ ಬದುಕಾಗಿದೆ. ಮಹಿಳೆಯರು ದುಡಿಮೆ ಸಂಸಾರ ಜತೆಯಲ್ಲಿ ಅನ್ಯಾಯ ಮತ್ತು ಮಹಿಳಾ ದೌರ್ಜನ್ಯದ ವಿರುದ್ಧ ಸಂಘಟಿತ ಹೋರಾಟ ಕಟ್ಟಬೇಕು. ಬಲಿಷ್ಠ ಹೋರಾಟ ಕಟ್ಟಲು ಮಹಿಳೆಯರು ವೈಚಾರಿಕವಾಗಿ ತಿಳಿದುಕೊಳ್ಳಲು ಬಹಳ ಅವಶ್ಯಕತೆ ಇದೆ. ಆದ್ದರಿಂದ ಮಹಿಳಾ ಸಂಘಟನೆಯಿಂದ ಹೋರಾಟದ ಜೊತೆ ಜೊತೆಯಲ್ಲಿ ಇತರೆ ವೈಚಾರಿಕ ಶಿಬಿರಗಳು ಹಾಗೂ ಮಹಾನ್ ವ್ಯಕ್ತಿಗಳ ಕುರಿತು ಸಂವಾದ ಕಾರ್ಯಕ್ರಮಗಳು ಹಮ್ಮಿಕೊಳ್ಳುತ್ತಾ ರಾಜ್ಯ ಸಮಿತಿ ಬಂದಿz.É ಪ್ರಸಕ್ತ ಭಾರತದಲ್ಲಿ ದಿನನಿತ್ಯ ಮಹಿಳೆಯರು ಹಲವಾರು ಸಮಸ್ಯೆ ಎದುರಿಸುತ್ತಿದ್ದಾರೆ.

ನಿರುದ್ಯೋಗ, ಬೆಲೆ ಏರಿಕೆ, ಮಹಿಳಾ ದೌರ್ಜನ್ಯ ಅಪರಾಧಗಳು ಹೆಚ್ಚಾಗುತ್ತಿದ್ದು ಎಲ್ಲಾ ಸಮಸ್ಯೆಗಳಿಗೆ ಮುಕ್ತಿ ಹೊಂದಲು ದೇಶದಲ್ಲಿ ಬಂಡವಾಳ ಶಾಹಿ ವಿರೋಧಿ ಸಮಾಜವಾದಿ ಕ್ರಾಂತಿಯಿಂದಲೇ ಪರಿಹಾರ ಸಾಧ್ಯ.ಆ ಕ್ರಾಂತಿಗೆ ಮಹಿಳೆಯರು ವೈಚಾರಿಕವಾಗಿ ಗಟ್ಟಿಯಾಗಿ ಸಂಘಟಿತ ಆಂದೋಲನ ಕಟ್ಟಬೇಕೆಂದರು.

ಎಐಎಂಎಸ್‍ಎಸ್ ಜಿಲ್ಲಾಧ್ಯಕ್ಷ ಗುಂಡಮ್ಮ ಮಡಿವಾಳ ಮಾತನಾಡಿ, ಜಿಲ್ಲೆಯಲ್ಲಿ ಮಹಿಳಾ ಸಮಸ್ಯೆಗಳನ್ನು ತೆಗೆದುಕೊಂಡು ಹಲವಾರು ಯಶಸ್ವಿ ಚಳುವಳಿಗಳನ್ನು ಕಟ್ಟುತ್ತಾ ಬಂದಿದೆ. ಹಾಗೂ ಉನ್ನತ ಸಂಸ್ಕೃತಿ ಮೌಲ್ಯಗಳ ಬೆಳೆಸಲು ಭಗತ್ ಸಿಂಗ್, ನೇತಾಜಿ ಅವರ ಕುರಿತು ಸಂವಾದ ಕಾರ್ಯಕ್ರಮ ಕೂಡ ಮಾಡುತ್ತಾ ಬಂದಿದೆ.ಈ ಎಲ್ಲಾ ಹೋರಾಟಗಳು ಕೇವಲ ಅನ್ಯಾಯದ ವಿರುದ್ಧ ಮತ್ತು ಜನಸಾಮನ್ಯರ ಸಮಸ್ಯೆಗಳ ಪರವಾಗಿವೆ ಎಂದರು.

ಇದೇ ಸಂದರ್ಭದಲ್ಲಿ ಎಂಎಸ್‍ಎಸ್ ರಾಜ್ಯನಾಯಕಿ ಡಾ. ಸೀಮಾ ದೇಶಪಾಂಡೆ ವೇದಿಕೆ ಮೇಲೆ ಉಪಸ್ಥಿತರಿದ್ದರು.
ಸ್ಥಳೀಯ ಐಎಂಎಸ್‍ಎಸ್ ಅಧ್ಯಕ್ಷೆ ಮಹದೇವಿ ಮಾನೆ ಅಧ್ಯಕ್ಷತೆಯನ್ನು ವಹಿಸಿದ್ದರು. ಅಂಬಿಕಾ.ಆರ್ ನಿರೂಪಿಸಿದರು. ಶಿಬಿರದಲ್ಲಿ ಸಾಬಮ್ಮ ಕಾಳಗಿ ರಾಧಿಕಾ ಚೌಧರಿ, ರೇಣುಕಾ ಮಾನೆ, ಸವಿತಾ, ಮಹಾದೇವಿ ಅಥನೂರ್ ಇತರರು ಭಾಗವಹಿಸಿದ್ದರು.

emedialine

Recent Posts

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

9 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

10 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

11 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

11 hours ago

ಮಹಿಳಾ ಘಟಕದ ನೂತನ ಪದಾಧಿಕಾರಿಗಳ ನೇಮಕ

ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…

11 hours ago

ಮಜರ್ ಆಲಂ ಖಾನ್ ಅಧ್ಯಕತೆಯಲ್ಲಿ ನಗರದ ವಿನ್ಯಾಸ ಮಾಲೀಕರು, ಡೆವಲಪರ್ಸ್, ಬಿಲ್ಡರ್ಸ್ ಅವರೊಂದಿಗೆ ಸಭೆ

ಕಲಬುರಗಿ: ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ್ ಆಲಂ ಖಾನ್ ಇವರ ಅಧ್ಯಕ್ಷತೆಯಲ್ಲಿ ನಗರದ ಬಿಲ್ಡರ್ಸ್ ಡೆವಲಪರ್ಸ್ ಮತ್ತು ವಿನ್ಯಾಸದ ಮಾಲೀಕರವರೊಂದಿಗೆ…

11 hours ago