ಕಲಬುರಗಿ: ಕರ್ನಾಟಕ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲವಾದ ರಾಜ್ಯ ಸರ್ಕಾರ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪುನೀತರಾಜ ಸಿ.ಕವಡೆ ನೇತೃತ್ವದಲ್ಲಿ ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗೃಹವನ್ನು ನಗರದ ಜಿಲ್ಲಾಧಿಕಾರಿಗಳ ಕಛೇರಿ ಎದುರುಗಡೆ ಹಮ್ಮಿಕೋಳ್ಳಲಾಯಿತು.
ಕಾರಣ ತಾವು ಕೂಡಲೇ ಕರ್ನಾಟಕ ಸರ್ಕಾರದ ಅಧಿನದ ಎಲ್ಲಾ ಸರ್ಕಾರಿ ಹುದ್ದೆಗಳಲ್ಲಿ ಸಿ ಮತ್ತು ಡಿ ದರ್ಜೆಯಲ್ಲಿ ಕನ್ನಡಿಗರಿಗೆ ಶೇಕಡಾ 100% ಪ್ರತಿಷತ ಉದ್ಯೋಗ ನೀಡಬೇಕು ಮತ್ತು ಖಾಸಗಿ ಸಂಸ್ಥೆಗಳು ನಡೆಸುತ್ತಿರುವ ದೊಡ್ಡ ದೊಡ್ಡ ಕಾರ್ಖಾನೆಗಳಲ್ಲಿ ಈ ಮಣ್ಣಿನ ಮಕ್ಕಳಿಗೆ ಉದ್ಯೋಗವಿಲ್ಲದಂತಾಗಿದೆ. ಹಾಗೂ ಕೇಂದ್ರ ಸರ್ಕಾರದ ಘಟಕಗಳಲ್ಲಿ ಕನ್ನಡಿಗರನ್ನು ಉದ್ಯೋಗ ನೀಡುತ್ತಿಲ್ಲ.
ಕೂಡಲೇ ಡಾ. ಸರೋಜನಿ ಮಹಿಸಿ ವರದಿಯನ್ನು ಯತಾವಥಾಗಿ ಶಿಫಾರಸ್ಸು ಮಾಡಿ ಈ ರಾಜ್ಯದಲ್ಲಿ ಉದ್ಯೋಗ ಮೀಸಲಾತಿಗೆ ಸಂಬಂಧಿಸಿದ ಮಾನದಂಡಗಳನ್ನು ಶಿಫಾರಸ್ಸು ಮಾಡಿ ಕರ್ನಾಟಕದಲ್ಲಿ ಕನ್ನಡಿಗನೆ ಸಾರ್ವಭೌಮ್ಮನೆಂದು ತಾವು ಎತ್ತಿ ಹಿಡಿತ್ತಿರಿ ಎಂದು ನಂಬಿದ್ದೇನೆ. ಒಂದು ವೇಳೆ ಸದರಿ ವಿಷಯದ ಕುರಿತು ನಿರ್ಲಕ್ಷ್ಯ ವಹಿಸಿದಲ್ಲಿ ಬೀದಿಗಿಳಿದು ಹಂತ ಹಂತವಾಗಿ ಹೋರಾಟ ಮಾಡಲು ಅನಿವಾರ್ಯವಾಗುತ್ತದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಮಹೇಶ ಎಸ್.ಕಾಶಿ, ನಿಲಕಂಠರಾವ ಪಾಟೀಲ, ಈರಣ್ಣ ಆಳಂದ, ದೇವಿಂದ್ರ ಮಯೂರ, ದೇವಿಂದ್ರಪ್ಪಗೌಡ ಪಾಟೀಲಮ ಚಂದರ ಚವ್ಹಾಣ, ಕಾಫ್ ಕಾಳಗಿ, ಯಲ್ಲಾಲಿಂಗ ಹಯ್ಯಾಳಕರ್, ಸಂಗಮೇ ಬೋರೊಟಿ, ಯಲ್ಲಪ್ಪ ಬಂಕಲಗಿ, ನಿರ್ಮಲ ತಳವಾರ, ನಿಸಾರ ಅಹ್ಮದ್ ಖಾನ್, ಕಲ್ಯಾಣಿ ತಳವಾರ, ಶಂಕರಗೌಡ ಯಡ್ರಾಮಿ, ಶಬ್ಬಿರ್ ಸಾಬ್, ಸುರೇಶ ಹೋಸಮನಿ, ನಂದಕುಮಾರ ಸೇಡಂ, ಪ್ರಭುಲಿಂಗ ಯಳವಂತಗಿ ಸೇರಿದಂತೆ ಇತರರು ಇದ್ದರು.
ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…
ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…
ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…
ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…
ಕಲಬುರಗಿ: ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ್ ಆಲಂ ಖಾನ್ ಇವರ ಅಧ್ಯಕ್ಷತೆಯಲ್ಲಿ ನಗರದ ಬಿಲ್ಡರ್ಸ್ ಡೆವಲಪರ್ಸ್ ಮತ್ತು ವಿನ್ಯಾಸದ ಮಾಲೀಕರವರೊಂದಿಗೆ…