ಕಲಬುರಗಿ: ಡಾ.ಸರೋಜನಿ ಮಹಿಷಿ ವರದಿ ಅನುಷ್ಠಾನಕ್ಕೆ ನಡೆದ, ನಡೆಯುತ್ತಿರುವ ಹೋರಾಟಗಳಿಗೆ ಲೆಕ್ಕವೇ ಇಲ್ಲ. ಮಹಿಷಿ ವರದಿಯ ಹೆಸರು ಹೇಳಿ ಆಳಿದ ಪ್ರತಿಯೊಂದು ಸರಕಾರಗಳು ಬಹುರಾಷ್ಟ್ರೀಯ ಕಂಪನಿಗಳಿಂದ ಕಿಕ್ ಬ್ಯಾಕ್ ಪಡೆಯುತ್ತಾ ಬಂದಿವೆ.ಕಾನೂನಿನ ನೆಪದಲ್ಲಿ ಸರಕಾರವೇ ಬೆಲಿಯೇ ಎದ್ದು ಹೊಲ ಮೇಯುವ ಕೆಲಸ ಮಾಡಿದರೆ ನಾಡ ಜನರ ಬದಕು ರಕ್ಷಣೆ ಮಾಡುವವರು ಯಾರು ? ಸರಕಾರಗಳು ಬಹುರಾಷ್ಟ್ರೀಯ ಕಂಪನಿಗಳ ಸೂಟಕೇಸ್ ಮೋಹಕ್ಕೆ ಕನ್ನಡಿಗರಿಗೆ ಮೋಸ ಮಾಡಬಾರದು ಎಂದು ಕರ್ನಾಟಕ ನವನಿರ್ಮಾಣ ಸೇನೆ ಜಿಲ್ಲಾಧ್ಯಕ್ಷ ರವಿ ದೇಗಾಂವ ಒತ್ತಾಯಿಸಿದ್ದಾರೆ.
ನಾಡಿನ ಉದ್ಯೋಗಗಳು ಈ ನಾಡ ಮಕ್ಕಳಿಗೆ ಸಿಗಬೇಕು, ರಾಷ್ಟ್ರ ಕವಿ ಕುವೇಂಪು ರವರ ವೀರವಾಣಿ ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ ಎನ್ನುವದು ಆಳುವ ಸರಕಾರಗಳ ಅಮರವಾಣಿ ಯಾಗಬೇಕು. ಕರ್ನಾಟಕ ಸರಕಾರ ಕೇಂದ್ರದ ‘ರಾಷ್ಟ್ರೀಯ ಉದ್ಯೋಗ ನೀತಿಯ’ ಹಾಗೆ ‘ರಾಜ್ಯ ಉದ್ಯೋಗ ನೀತಿ’ ಯನ್ನು ಜಾರಿಗೆ ತರುವ ಗಟ್ಟಿ ನಿರ್ಧಾರ ಕೈಗೊಳ್ಳಬೇಕು ಇದು ಕಾನೂನು ಆಗಿ ರೂಪಗೊಳ್ಳಬೇಕು. ಅಂದಾಗ ಮಾತ್ರ ಕನ್ನಡದ ಮಕ್ಕಳು ಉದ್ಯೋಗ ರಂಗದಲ್ಲಿ ಸಾರ್ವಭೌಮರಾಗಿ ಮೆರೆಯಲು ಸಾಧ್ಯ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…
ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…
ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…
ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…
ಕಲಬುರಗಿ: ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ್ ಆಲಂ ಖಾನ್ ಇವರ ಅಧ್ಯಕ್ಷತೆಯಲ್ಲಿ ನಗರದ ಬಿಲ್ಡರ್ಸ್ ಡೆವಲಪರ್ಸ್ ಮತ್ತು ವಿನ್ಯಾಸದ ಮಾಲೀಕರವರೊಂದಿಗೆ…