ಬಿಸಿ ಬಿಸಿ ಸುದ್ದಿ

ಈಡಿಗ ನಿಗಮ ಅನುದಾನಕ್ಕೆ ವಿಧಾನಸಭೆಯಲ್ಲಿ ಧ್ವನಿಯಾಗುವೆ: ಶಾಸಕ ಗವಿಯಪ್ಪ

ಕಲಬುರಗಿ : ರಾಜ್ಯದ ಈಡಿಗ ಬಿಲ್ಲವ ಸೇರಿದಂತೆ 26 ಪಂಗಡಗಳ ಅಭಿವೃದ್ಧಿಗಾಗಿ ರಾಜ್ಯ ಸರಕಾರವು ಘೋಷಣೆ ಮಾಡಿದ ಬ್ರಹ್ಮಶ್ರೀ ನಾರಾಯಣ ಗುರು ಈಡಿಗ ನಿಗಮಕ್ಕೆ ಅನುದಾನ ಒದಗಿಸಲು ಮುಖ್ಯಮಂತ್ರಿಗಳಲ್ಲಿ ಒತ್ತಾಯಿಸುವುದಲ್ಲದೆ ಮುಂದಿನ ವಿಧಾನಸಭಾ ಅಧಿವೇಶನದಲ್ಲಿ ಗಮನ ಸೆಳೆದು ಧ್ವನಿಯಾಗುವೆ ಎಂದು ವಿಜಯನಗರ ಕ್ಷೇತ್ರದ ಶಾಸಕರು ಹಾಗೂ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಸದಸ್ಯರಾದ ಎಚ್. ಆರ್ ಗವಿಯಪ್ಪ ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ ಎಚ್ ಆರ್ ಗವಿಯಪ್ಪ ಅವರು ಮಂಗಳವಾರ (ಜುಲೈ ಎರಡರಂದು) ಕಲ್ಬುರ್ಗಿ ಜಿಲ್ಲೆ ಈಡಿಗ- ಬಿಲ್ಲವ ನಾಯಕರ ಸಭೆಯಲ್ಲಿ ಮಾತನಾಡಿ ಶೀಘ್ರದಲ್ಲೇ ನಡೆಯುವ ವಿಧಾನಸಭಾ ಅಧಿವೇಶನದಲ್ಲಿ ಸಮುದಾಯದ ಹಿತ ದೃಷ್ಟಿಯಿಂದ ನಿಗಮಕ್ಕೆ ಅನುದಾನ ಹಾಗೂ ನಿರ್ದೇಶಕರನ್ನು ನೇಮಕ ಮಾಡುವಂತೆ ಮನವಿ ಮಾಡಲಾಗುವುದು ಎಂದರು.

ಸಮಾಜದ ಹಿರಿಯ ಮುಖಂಡರಾದ ಮಾಲಿಕಯ್ಯ ವಿ ಗುತ್ತೇದಾರ್ ಎಚ್. ಆರ್ ಶ್ರೀನಾಥ್ ಜಗದೇವ ಗುತ್ತೇದಾರ್ ಕಾಳಗಿ, ಮಂಗಳೂರಿನ ಪದ್ಮರಾಜ್ ಆರ್ ಮುಂತಾದ ನಾಯಕರ ಸಲಹೆ ಮಾರ್ಗದರ್ಶನದೊಂದಿಗೆ ಸಮಾಜದ ಶ್ರೇಯೋಭಿವೃದ್ಧಿಗಾಗಿ ಚರ್ಚಿಸುವುದಲ್ಲದೆ ಬೆಂಗಳೂರಿನಲ್ಲಿ ಸಭೆ ನಡೆಸಲಾಗುವುದು ಸಮಾಜದ ಬಡಬಗ್ಗರ ಹಾಗೂ ವಿದ್ಯಾರ್ಥಿಗಳ ಕಲ್ಯಾಣಕ್ಕಾಗಿ ನಿಗಮದ ಮೂಲಕ ನೆರವಾಗಲು ಸರಕಾರವು ಕೂಡಲೇ ಅನುದಾನ ಮಂಜೂರು ಮಾಡಬೇಕು ಈ ಅಧಿವೇಶನದಲ್ಲಿ ಮುಖ್ಯಮಂತ್ರಿಗಳಿಂದ ಇದಕ್ಕೆ ಭರವಸೆ ಪಡೆಯಲಾಗುವುದು ಎಂದು ಗವಿಯಪ್ಪ ಹೇಳಿದರು.

ಎಲ್ಲ ಜಿಲ್ಲೆಗಳ ಈಡಿಗ ಬಿಲ್ಲವ ಸೇರಿದಂತೆ 26 ಪಂಗಡಗಳು ಒಟ್ಟಾಗಿ ಸಮುದಾಯದ ಅಭಿವೃದ್ಧಿ ಸಾಧಿಸಲು ಮುಂದಿನ ದಿನಗಳಲ್ಲಿ ಸಮಾಜ ಮುಖಂಡರ ನೇತೃತ್ವದಲ್ಲಿ ಸಭೆ ನಡೆಸಿ ಚರ್ಚಿಸಲು ಪ್ರಯತ್ನಿಸಲಾಗುವುದು ಎಚ್ . ಜಿ.ರಾಮಲು, ಎಸ್. ಬಂಗಾರಪ್ಪ, ಜನಾರ್ಧನ ಪೂಜಾರಿ, ಎಸ್ ಆರ್ ಜಾಲಪ್ಪರಂತಹ ನಾಯಕರ ಆದರ್ಶ ಈ ಸಮಾಜಕ್ಕೆ ಇರುವುದರಿಂದ ಎಲ್ಲರೂ ಒಗ್ಗಟ್ಟಾಗಿ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು.

ವಿಜಯನಗರ ಕ್ಷೇತ್ರದ ಶಾಸಕರಾಗಿ ಆಯ್ಕೆ ಹೊಂದಿದ ನಂತರ ಮೊದಲ ಬಾರಿಗೆ ಕಲ್ಬುರ್ಗಿಗೆ ಆಗಮಿಸಿದ ಎಚ್. ಆರ್ . ಗವಿಯಪ್ಪ ಅವರಿಗೆ ಕಲ್ಬುರ್ಗಿಯ ಬ್ರಹ್ಮಶ್ರೀ ನಾರಾಯಣ ಗುರು ಟ್ರಸ್ಟ್ ನ ಅಧ್ಯಕ್ಷರಾದ ವೆಂಕಟೇಶ ಕಡೇಚೂರ್ ಶಾಲು ಮತ್ತು ಹಾರ ತೊಡಿಸಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ತಿಮ್ಮಪ್ಪ ಗಂಗಾವತಿ, ಸುರೇಶ್ ಗುತ್ತೇದಾರ್ ಮಟ್ಟೂರ್, ಸಾಯಿ ಗುತ್ತೇದಾರ್ ಗಂಗಾವತಿ, ಡಾ. ಸದಾನಂದ ಪೆರ್ಲ, ಹರ್ಷ ಗಂಗಾವತಿ ರಾಜೇಶ್ ಡಿ. ಗುತ್ತೇದಾರ, ಪ್ರವೀಣ್ ಜತ್ತನ್, ಸಂತೋಷ್ ಚೌಧರಿ ಅಭಿಷೇಕ್ ಗುತ್ತೇದಾರ್ ಮತ್ತು ಅಶೋಕ ಸಂಕಲಾಪುರ ನಿಂಗಯ್ಯ ಈಳಿಗೆರ್ ಯಾದಗಿರಿ ಹಾಗೂ ಅಂಜಿನಪ್ಪ ಗಂಗಾವತಿ ಮತ್ತಿತರರು ಉಪಸ್ಥಿತರಿದ್ದರು.

emedialine

Recent Posts

ಶಹಾಪುರ: ಪಹಣಿಗೆ ಆಧಾರ್ ಜೋಡಣೆ ಕಡ್ಡಾಯ

ಶಹಾಪುರ ತಾಲೂಕಿನ ಸಗರ ಗ್ರಾಮ ಆಡಳಿತ ಅಧಿಕಾರಿ ರಮೇಶ್ ರಾಠೋಡ್ ಶಹಾಪುರ : ರೈತರು ಬೆಳೆವಿಮೆ, ಪರಿಹಾರ,ಸಾಲ ಮನ್ನಾ,ಇತರೆ ಸೇರಿದಂತೆ…

5 mins ago

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ದೊಡ್ಡಮನಿ ನಿಧನ

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…

6 hours ago

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

18 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

19 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

20 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

20 hours ago