ಬಿಸಿ ಬಿಸಿ ಸುದ್ದಿ

ಫ.ಗು. ಹಳಕಟ್ಟಿ ವಚನ ತವನಿಧಿಯ ಸಂರಕ್ಷಕ: ಬಿ.ಆರ್. ಪಾಟೀಲ

ಕಲಬುರಗಿ: ಮನೆ, ಮಠ, ಜಗುಲಿಗಳಲ್ಲಿ ಪೂಜಿಸುತ್ತಿದ್ದ ತಾಡೋಲೆಗಳನ್ನು ಹೆಕ್ಕಿ ತೆಗೆದ ಫ.ಗು. ಹಳಕಟ್ಟಿಯವರು ವಚನ ಸಾಹಿತ್ಯದ ಪಿತಾಮಹ ಎಂದು ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಹಾಗೂ ಆಳಂದ ಶಾಸಕ ಬಿ.ಆರ್. ಪಾಟೀಲ ಹೇಳಿದರು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯಿತಿ ಇವುಗಳ ಆಶ್ರಯದಲ್ಲಿ ನಗರದ ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಮಂಗಳವಾರ ಹಮ್ಮಿಕೊಂಡ ಡಾ. ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ವಚನ ಸಾಹಿತ್ಯವೆಂಬ ತವನಿಧಿಯನ್ನು ತೆಗೆದುಕೊಟ್ಟ ಹಳಕಟ್ಟಿಯವರು ಕೇವಲ ನೇಕಾರ ಸಮುದಾಯಕ್ಕೆ ಸೀಮಿತವಾಗಿಲ್ಲ. ಇಡೀ ಮನುಕುಲಕ್ಕೆ ಸೀಮಿತವಾಗಿರುವ ವ್ಯಕ್ತಿ ಎಂದು ಅವರು ಬಣ್ಣಿಸದರು.

ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಪ್ರಗತಿಪರ ಚಿಂತಕಿ ಡಾ. ಮೀನಾಕ್ಷಿ ಬಾಳಿ, ಎಲ್ಲವನ್ನು, ಎಲ್ಲರನ್ನೂ ವೈದಿಕೀಕರಣಗೊಳಿಸಿದ ಪುರೋಹಿತಶಾಹಿ ವ್ಯವಸ್ಥೆ, ಬಸವಣ್ಣನವರನ್ನು ಅವತಾರ ಪುರುಷನನ್ನಾಗಿ ಮಾಡಲಾಗಿಲ್ಲ. ವಚನ ಸಾಹಿತ್ಯವನ್ನು ಕುರಿತು ಕೇವಲ ಮಾತನಾಡಿದರೆ ಸಾಲದು ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳುತ್ತಿದ್ದ ಹಳಕಟ್ಟಿಯವರು, ಸುಮಾರು 12, 000 ವಚನಗಳನ್ನು ಸಂಗ್ರಹಿಸಿದ ಯುಗ ಪುರುಷ ಎಂದರು.

ಹಳಕಟ್ಟಿಯವರ ವಚನಧರ್ಮ ಶಾಸ್ತ್ರ ಎರಡು ಭಾಗಗಳನ್ನು ಪ್ರಕಟ ಮಾಡಲು ಹರ್ಡೆಕರ ಮಂಜಪ್ಪನವರು ಚಂದಾ ಎತ್ತಿ ಹಣ ಸಂಗ್ರಹಿಸಿಕೊಟ್ಟರು. ಮನೆ, ಪ್ರಿಂಟಿಂಗ್ ಪ್ರೆಸ್ ಮಾರಿ ವಚನ ಸಾಹಿತ್ಯ ಸಂಗ್ರಹ ಮಾಡಿದ ಹಳಕಟ್ಟಿಯವರ ಜೀವನದ ಪರಿಚಯ ಇಂದಿನ ಮಕ್ಕಳಿಗೆ ಮಾಡಿಕೊಡಬೇಕು ಎಂದು ಸಲಹೆ ನೀಡಿದರು.

ವೈದಿಕಶಾಹಿ ಆಕ್ರಮಣದಿಂದಾಗಿ ವಚನ ಸಾಹಿತ್ಯ ಮರೆ ಮಾಚಿ ಹೋಗಿದೆ. ಲಿಂಗ ಅನ್ನುವುದು ಕೇವಲ ಧಾರ್ಮಿಕ ಲಾಂಛನವಲ್ಲ. ಅದೊಂದು ತತ್ವ. ಚಾರಿತ್ರಿಕ, ವೈಜ್ಞಾನಿಕ, ಪವಿತ್ರವಾದ ವಚನ ಸಾಹಿತ್ಯ ವೈದಿಕಶಾಹಿ ವ್ಯವಸ್ಥೆಯಿಂದ ಹೊರ ಬರಬೇಕು. ಅಂದಾಗ ಮಾತ್ರ ವಚನ ಸಾಹಿತ್ಯ ಉಳಿದು ಬೆಳೆಯಲು ಸಾಧ್ಯ ಎಂದರು.

ಜಗತ್ತಿನ ಎಲ್ಲ ಕ್ರಾಂತಿಗಳನ್ನು ತೆಗೆದು ನೋಡಿದರೆ, ವೈಯಕ್ತಿಕ ಜವಾಬ್ದಾರಿ, ಸಾಮೂಹಿಕ ಸಂಘರ್ಷದಿಂದ ಜಗತ್ತಿನ ಎಲ್ಲ ಕ್ರಾಂತಿಗಳು ಉಂಟಾಗಿವೆ. ಅದರಂತೆ ಲಿಂಗಾಯತ ಚಳವಳಿ ಕೂಡ ಜನ ಸಂಘರ್ಷ, ಜನ ಚಳವಳಿ ಮೇಲೆದ್ದು ಬರಲಿದೆ ಎಂದು ಹೇಳಿದರು. ಫ.ಗು. ಹಳಕಟ್ಟಿಯವರು ಅನುಭಾವ ಪರಂಪರೆಗೆ ಬಹು ದೊಡ್ಡ ಅಸ್ತಿಭಾರ ಹಾಕಿದವರು. ಹಳಕಟ್ಟಿಯವರು ಇರದಿದ್ದರೆ ವಚನ ಸಾಹಿತ್ಯ ಉಳಿಯುತ್ತಿರಲಿಲ್ಲ ಎಂದರು.

ಶಾಸಕ ಅಲ್ಲಮಪ್ರಭು ಪಾಟೀಲ, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ದತ್ತಪ್ಪ ಸಾಗನೂರ ವೇದಿಕೆಯಲ್ಲಿ ಇದ್ದರು. ಉತ್ಸವ ಸಮಿತಿ ಅಧ್ಯಕ್ಷ ಶರಣಪ್ಪ ಜನೇವೇರಿ ಅಧ್ಯಕ್ಷತೆ ವಹಿಸಿದ್ದರು. ಶಿವಾನಂದ ಅಣಜಗಿ ನಿರೂಪಿಸಿದರು.

emedialine

Recent Posts

ಶಹಾಪುರ: ಪಹಣಿಗೆ ಆಧಾರ್ ಜೋಡಣೆ ಕಡ್ಡಾಯ

ಶಹಾಪುರ ತಾಲೂಕಿನ ಸಗರ ಗ್ರಾಮ ಆಡಳಿತ ಅಧಿಕಾರಿ ರಮೇಶ್ ರಾಠೋಡ್ ಶಹಾಪುರ : ರೈತರು ಬೆಳೆವಿಮೆ, ಪರಿಹಾರ,ಸಾಲ ಮನ್ನಾ,ಇತರೆ ಸೇರಿದಂತೆ…

20 mins ago

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ದೊಡ್ಡಮನಿ ನಿಧನ

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…

6 hours ago

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

18 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

20 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

20 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

20 hours ago