ಬಿಸಿ ಬಿಸಿ ಸುದ್ದಿ

ಹೊಸ ವಸತಿ ನಿಲಯ ಕಟ್ಟಡ ನಿರ್ಮಾಣಕ್ಕೆ ಸರ್ವೆ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

ಜಿಲ್ಲಾಧಿಕಾರಿಗಳಿಂದ ಕ್ರೀಡಾ ವಸತಿ ನಿಲಯಕ್ಕೆ ಭೇಟಿ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಮಂಗಳವಾರ ಕಲಬುರಗಿ ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿರುವ ಕ್ರೀಡಾ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ವಸತಿ ನಿಲಯ ಹಳೇಯದಾಗಿದ್ದು, ಪ್ರಸ್ತುತ 35 ನಿಲಯಾರ್ಥಿಗಳಿದ್ದಾರೆ. ಇದನ್ನು ಕೆಡವಿ ಇಲ್ಲಿ ತಲಾ 50 ಬಾಲಕ-ಬಾಲಕೀಯರ ಪ್ರತ್ಯೇಕ ವಾಸಕ್ಕೆ ಅನುಕೂಲವಾಗುವಂತೆ ಸುಸಜ್ಜಿತ ವಸತಿ ನಿಲಯ ನಿರ್ಮಿಸಬೇಕಿದೆ. ಅಕ್ಕಪಕ್ಕದ ಕ್ರೀಡಾಂಗಣದ ಸ್ಥಳ ಬಳಸಿಕೊಂಡು ಸಕಲ‌ ಸೌಕರ್ಯ ಒಳಗೊಂಡ ಕಟ್ಟಡ‌ ನಿರ್ಮಿಸಬೇಕಿದ್ದು, ನಿವೇಶನದ ಸರ್ವೆ ಕಾರ್ಯ ಬುಧವಾರದಿಂದಲೆ ಆರಂಭಿಸುವಂತೆ ಕೆ.ಆರ್.ಐ.ಡಿ.ಎಲ್ ಕಾರ್ಯನಿರ್ವಾಹಕ ಅಭಿಯಂತ ಸೌರಭ್ ಅವರಿಗೆ ಡಿ.ಸಿ. ಅವರು ಸೂಚನೆ ನೀಡಿದರು.

ವಸತಿ ನಿಲಯದಲ್ಲಿ ಅಡುಗೆ ಕೋಣೆ, ಊಟದ ಕೋಣೆ, ವಾಸ ಸ್ಥಾನ, ಕ್ರೀಡಾ ಸಾಮಗ್ರಿ ಇಟ್ಟುಕೊಳ್ಳಲು ಪ್ರತ್ಯೇಕ ಸ್ಥಳ, ಶೌಚಾಲಯ ಹೀಗೆ ಸಕಲ ಸೌಕರ್ಯ ಒಳಗೊಂಡ ಕಟ್ಟಡ ನಿರ್ಮಾಣಕ್ಕೆ ನೀಲಿ ನಕ್ಷೆ ಸಲ್ಲಿಸುವಂತೆ ಡಿ.ಸಿ. ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಂತರ ಐವಾನ್-ಎ-ಶಾಹಿ ಅತಿಥಿಗೃಹಕ್ಕೆ‌ ಭೇಟಿ‌ ನೀಡಿದ ಡಿ.ಸಿ. ಅವರು, ಆವರಣದಲ್ಲಿನ ನೂತನ ಅತಿಥಿಗೃಹಗಳ ಕಟ್ಟಡ ದುರಸ್ತಿ, ಅನೆಕ್ಸ್ ಕಟ್ಟಡದಲ್ಲಿ ಎರಡನೇ ಮಹಡಿ ನಿರ್ಮಾಣ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಇದಕ್ಕು ಮುನ್ನ ಜಗತ್ ವೃತ್ತದಲ್ಲಿರುವ ನಗರ ಕೇಂದ್ರ ಗ್ರಂಥಾಲಯಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು, ಪೀಠೋಪಕರಣಗಳನ್ನು ಬದಲಾಯಿಸುವಂತೆ ಸೂಚಿಸಿದರು.

ರಂಗಮಂದಿರ ದುರಸ್ತಿಗೆ ಪಟ್ಟಿ ಕೊಡಿ: ನಂತರ ಡಾ.ಎಸ್.ಎಂ.ಪಂಡಿತ್ ರಂಗಮಂದಿರಕ್ಕೆ ಡಿ.ಸಿ. ಅವರು ಭೇಟಿ ನೀಡಿ ಕಟ್ಟಡ ವೀಕ್ಷಿಸಿದರು. ಅಲ್ಲಿದ್ದ ಮಾಜಿ ರಂಗಾಯಣ ನಿರ್ದೇಶಕ ಪ್ರೊ.ಆರ್.ಕೆ.ಹುಡಗಿ, ರವೀಂದ್ರ ಶಾಬಾದಿ ಅವರು ರಂಗಮಂದಿರದಲ್ಲಿ ಪ್ರತಿನಿತ್ಯ ಸರ್ಕಾರಿ-ಖಾಸಗಿ ಕಾರ್ಯಕ್ರಮ ನಡೆಯುತ್ತವೆ, ಆದರೆ ಸೌಂಡ್ ಸಿಸ್ಟಮ್ ವ್ಯವಸ್ಥೆ ಇಲ್ಲದ ಕಾರಣ ಹೊರಗಿನಿಂದ ಬಾಡಿಗೆ ಪಡೆದು ತರಬೇಕಾಗಿದೆ.‌ ಎ.ಸಿ. ಕಾರ್ಯನಿರ್ವಹಿಸುತ್ತಿಲ್ಲ, ಕಿಟಕಿ ಗಾಜು ಒಡೆದಿವೆ, ಸೀಟ್ ಹರಿದಿವೆ, ದುರಸ್ತಿ ಕಂಡಿಲ್ಲ ಎಂಬಿತ್ಯಾದಿ ವಿಷಯಗಳನ್ನು ಡಿ.ಸಿ ಅವರ ಗಮನಕ್ಕೆ ತಂದರು.

ಏನೇನು ದುರಸ್ತಿ ಮಾಡಬೇಕು ಅದೆಲ್ಲದರ ಬಗ್ಗೆ ಇಂದೇ ಪಟ್ಟಿ ಕೊಡಿ ದುರಸ್ತಿ ಮಾಡಲಾಗುವುದು ಎಂದು ರಂಗಮಂದಿರ ನಿರ್ವಹಣಾ ಸಮಿತಿಯ ಅಧ್ಯಕ್ಷೆಯಾಗಿರುವ ಡಿ.ಸಿ. ಅವರು ತಿಳಿಸಿದರು. ಡಾ. ಫ.ಗು. ಹಳಕಟ್ಟಿಯವರ ಜಯಂತಿ ಕಾರ್ಯಕ್ರಮಕ್ಕೆ ಆಗಮಿಸಿದ ಮುಖ್ಯಮಂತ್ರಿಗಳ ಸಲಹೆಗಾರರಾಗಿರುವ ಆಳಂದ ಶಾಸಕ ಬಿ.ಆರ್.ಪಾಟೀಲ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೆಶಕ ದತ್ತಪ್ಪ ಸಾಗನೂರ ಇದಕ್ಕೆ ಸಾಕ್ಷಿಯಾದರು.

emedialine

Recent Posts

ಶಹಾಪುರ: ಪಹಣಿಗೆ ಆಧಾರ್ ಜೋಡಣೆ ಕಡ್ಡಾಯ

ಶಹಾಪುರ ತಾಲೂಕಿನ ಸಗರ ಗ್ರಾಮ ಆಡಳಿತ ಅಧಿಕಾರಿ ರಮೇಶ್ ರಾಠೋಡ್ ಶಹಾಪುರ : ರೈತರು ಬೆಳೆವಿಮೆ, ಪರಿಹಾರ,ಸಾಲ ಮನ್ನಾ,ಇತರೆ ಸೇರಿದಂತೆ…

34 mins ago

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ದೊಡ್ಡಮನಿ ನಿಧನ

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…

6 hours ago

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

19 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

20 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

21 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

21 hours ago