ಡಾ. ಫ.ಗು. ಹಳಕಟ್ಟಿ ಯವರ ಜಯಂತಿ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

0
50

ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ ಬಹು ದೊಡ್ಡ ಮಹತ್ವದ ಕಾರ್ಯವನ್ನು ಮಾಡುವ ಮೂಲಕ ಎತ್ತರದ ಸಾಧನೆ ಮಾಡಿದ್ದಾರೆ. ಅವರ ಪ್ರೇರಣೆಯಿಂದ ಅವರ ಕಾರ್ಯವನ್ನು ಸ್ಮರಿಸುವುದರ ಜತೆಗೆ ಆ ಕೆಲಸವನ್ನು ಇಂದು ನಾವುಗಳು ಮುಂದುವರೆಸಿಕೊಂಡು ಹೋಗಬೇಕಾಗಿದೆ. ಆ ಮೂಲಕ ವಚನ ಸಾಹಿತ್ಯದ ತಿರುಳನ್ನು ಇಂದಿನ ಹೊಸ ಪೀಳಿಗೆಗೆ ಮುಟ್ಟಿಸಬೇಕು ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹೇಳಿದರು.

ನಗರದ ಕನ್ನಡ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡ ಡಾ. ಫ.ಗು. ಹಳಕಟ್ಟಿ ಯವರ ಜಯಂತಿ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಸಲ್ಲಿಸಿ ಮಾತನಾಡಿದ ಅವರು, ನಶಿಸಿ ಹೋಗುತ್ತಿದ್ದ ವಚನ ಸಾಹಿತ್ಯದ ಮೂಲ ಪ್ರತಿಗಳಾದ ಅಮೂಲ್ಯವಾದ ತಾಳೆಗರಿಗಳನ್ನು ರಾಜ್ಯ ಹಾಗೂ ದೇಶದ ವಿವಿಧ ಭಾಗಗಳಿಗೆ ತೆರಳಿ, ಹುಡುಕಿ, ಸಂಗ್ರಹಿಸಿ, ಅವುಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಅವುಗಳನ್ನು ಗ್ರಂಥ ರೂಪದಲ್ಲಿ ಎಲ್ಲರೂ ಓದಲು ಅನುಕೂಲ ಮಾಡಿಕೊಟ್ಟ ಹಳಕಟ್ಟಿಯವರ ಶ್ರಮ ಅನುಕರಣಿಯವಾದುದು ಎಂದು ಹೇಳಿದರು.

Contact Your\'s Advertisement; 9902492681

ಪ್ರಾಧ್ಯಾಪಕ ಡಾ. ರವೀಂದ್ರ ಕುಂಬಾರ, ಜಿಲ್ಲಾ ಕಸಾಪ ದ ಗೌರವ ಕಾರ್ಯದರ್ಶಿ ಶಿವರಾಜ ಎಸ್ ಅಂಡಗಿ, ಪ್ರಮುಖರಾದ ಶಕುಂತಲಾ ಪಾಟೀಲ, ಜ್ಯೋತಿ ಪಾಟೀಲ, ಧರ್ಮರಾಜ ಜವಳಿ, ರಮೇಶ ಡಿ. ಬಡಿಗೇರ, ರಾಜೇಂದ್ರ ಮಾಡಬೂಳ, ಅಚಲರಾಜ ಅಂಡಗಿ, ಚಂದ್ರಕಾಂತ ಸೂರನ್, ಗಣೇಶ ಚಿನ್ನಾಕಾರ, ರೇವಣಸಿದ್ದಪ್ಪ ಜೀವಣಗಿ, ಸಂತೋಷ ಕುಡಳ್ಳಿ ಕಾಳಗಿ, ಶಾಮಸುಮದರ ಕುಲಕರ್ಣಿ, ಎಂ ಎನ್ ಸುಗಂಧಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ವಚನ ಪಿತಾಮಹ ಡಾ. ಫ.ಗು. ಹಳಕಟ್ಟಿ ಯವರ ಜೀವನ ಮತ್ತು ಸಾಧನೆಗಳನ್ನೊಳಗೊಂಡ ಸಣ್ಣ ಸಣ್ಣ ಪುಸ್ತಕಗಳನ್ನು ಮುದ್ರಿಸಿ ಶಾಲಾ ಮಕ್ಕಳಿಗೆ ವಿತರಿಸುವ ಕಾರ್ಯ ಮಾಡಲು ಪರಿಷತ್ತು ಸಿದ್ಧವಾಗಿದೆ. ಆ ಮೂಲಕ ಹಳಕಟ್ಟಿ ಶರಣರ ಜೀವನಚರಿತ್ರೆ ಇಂದಿನ ಮಕ್ಕಳಿಗೆ ಬಹು ದೊಡ್ಡ ಪ್ರೇರಣೆ ನೀಡುತ್ತದೆ. – ವಿಜಯಕುಮಾರ ಪಾಟೀಲ ತೇಗಲತಿಪ್ಪಿ, – ಅಧ್ಯಕ್ಷ, ಜಿಲ್ಲಾ ಕಸಾಪ  

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here