ಬಿಸಿ ಬಿಸಿ ಸುದ್ದಿ

ಮುಸ್ಲಿಮರಿಗೆ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಸ್ಥಾನ ನೀಡಿ: ಅಬ್ದುಲ್ ರಹೀಮಾನ್ ಪಟೇಲ್

ಕಲಬುರಗಿ: ‘ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮುದಾಯಕ್ಕೆ ನೀಡಬೇಕು. ಮುಂಬರುವ ದಿನಗಳಲ್ಲಿ ಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯದವರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಟಿಕೆಟ್‌ ನೀಡಬೇಕು’ ಎಂದು ಕಾಂಗ್ರೆಸ್‌ನ ಅಲ್ಪಸಂಖ್ಯಾತರ ಸಮುದಾಯದ ಮುಖಂಡ ಅಬ್ದುಲ್ ರಹೀಮಾನ್ ಪಟೇಲ್ ಆಗ್ರಹಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮುಸ್ಲಿಮರು 50 ವರ್ಷಗಳಿಂದ ಜೇವರ್ಗಿಯಲ್ಲಿ ಧರ್ಮಸಿಂಗ್, ನಂತರ ಅವರ ಪುತ್ರ ಡಾ.ಅಜಯಸಿಂಗ್ ಅವರನ್ನು ಬೆಂಬಲಿಸುತ್ತಲೇ ಬಂದಿದೆ. ಇದೇ ರೀತಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಇದೀಗ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರನ್ನು ಬೆಂಬಲಿಸಿದೆ. ಆದ್ದರಿಂದ ಸಮುದಾಯಕ್ಕೆ ಉತ್ತಮ ಸ್ಥಾನ ನೀಡಬೇಕು’ ಎಂದು ಕಾಂಗ್ರೆಸ್ ಹೈ ಕಮಾಂಡ್‌ ಅನ್ನು ಒತ್ತಾಯಿಸಿದರು.

‘ರಾಜ್ಯಮಟ್ಟದಲ್ಲೂ ಮುಸ್ಲಿಮರಿಗೆ ಅಧಿಕಾರ ನೀಡುವಲ್ಲಿ ಕಾಂಗ್ರೆಸ್ ನಿರ್ಲಕ್ಷ್ಯ ಮಾಡಿದೆ. ಕಲ್ಯಾಣ ಕರ್ನಾಟಕ ಭಾಗದವರನ್ನು ವಿವಿಧ ನಿಗಮ, ಆಯೋಗ, ಮಂಡಳಿಗಳಿಗೆ ನೇಮಕ ಮಾಡದೆ ಅನ್ಯಾಯ ಮಾಡಲಾಗುತ್ತಿದೆ. ಕೆಪಿಸಿಸಿಯಲ್ಲೂ ಮುಸ್ಲಿಮರಿಗೆ ಅವಕಾಶ ನೀಡಿಲ್ಲ’ ಎಂದು ದೂರಿದರು.

ಮುಖಂಡ ಅಮೀನ್‌ ಪಟೇಲ್ ಚಿಂಚೋಳಿ ಮಾತನಾಡಿ, ‘ಜೇವರ್ಗಿ ತಾಲ್ಲೂಕಿನಲ್ಲಿ ಏಳು ಜಿಲ್ಲಾ ಪಂಚಾಯಿತಿ, 17 ತಾಲ್ಲೂಕು ಪಂಚಾಯಿತಿಗಳಿವೆ. ಕೆಲವು ಕಡೆ ಮುಸ್ಲಿಂ ಸಮಾಜದ ಮತಗಳು ನಿರ್ಣಾಯಕವಾಗಿದ್ದು, ಈ ಬಾರಿ ಎರಡು ಜಿಲ್ಲಾ ಪಂಚಾಯಿತಿ, 6 ತಾಲ್ಲೂಕು ಪಂಚಾಯಿತಿಗೆ ಸ್ಪರ್ಧೆ ಮಾಡಲು ಮುಸ್ಲಿಂ ಸಮಾಜಕ್ಕೆ ಅವಕಾಶ ನೀಡಬೇಕು. ಇಲ್ಲವಾದರೆ ಮುಂಬರುವ ದಿನಗಳಲ್ಲಿ ಸಮಾಜ ತಕ್ಕ ಪಾಠ ಕಲಿಸಲಿದೆ’ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ರಜಾಕ್‌ಸಾಬ್ ಮನಿಯಾರ, ಮಹಿಬೂಬ್‌ಸಾಬ್ ಮನಿಯಾರ, ಶೇಖಚಾಂದ ವಡಗೇರಾ, ಮೋಹಿಯುದ್ದೀನ್ ಇನಾಂದಾರ, ಇಬ್ರಾಹಿಂ ಶೇಖ ಮಿರ್ಚಿ ಇತರರಿದ್ದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

2 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

2 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

3 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

3 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

4 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

4 hours ago