ಬಿಸಿ ಬಿಸಿ ಸುದ್ದಿ

ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿಕೆ ಖಂಡನಾರ್ಹ : ಪ್ರೀತಿ ಹೊನ್ನಗುಡಿ

ಬೆಂಗಳೂರು : ಹಿಂದುಗಳು ಹಿಂಸಾವಾದಿಗಳು, ದ್ವೇಷ ಹಬ್ಬಿಸುತ್ತಿರುವವರು ಎಂಬ ಕಾಂಗ್ರೆಸ್ ನಾಯಕ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿಕೆ ಇಡೀ ಹಿಂದು ಸಮಾಜಕ್ಕೆ ಮಾಡಿದ ಅವಮಾನ ಎಂದು ಬಿಜೆಪಿ ಅಸಂಘಟಿತ ಕಾರ್ಮಿಕ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯೆ ಪ್ರೀತಿ ಹೊನ್ನಗುಡಿ ಖಂಡಿಸಿದರು.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಬಿಜೆಪಿ, ಆರ್ಎಸ್ಎಸ್ನ್ನು ಟೀಕಿಸಲಿ, ಸಿದ್ಧಾಂತವನ್ನು ವಿಮರ್ಶೆ ಮಾಡಲಿ. ಆದರೆ ಇಡೀ ಹಿಂದು ಸಮಾಜಕ್ಕೆ ಕಳಂಕ ತರುವಂತ ಹೇಳಿಕೆ ನೀಡಿರುವುದು ಅವರ ಸ್ಥಾನಕ್ಕೆ ಗೌರವ ತರುವಂತದ್ದು ಅಲ್ಲ. ಕೂಡಲೇ ಅವರು ಹಿಂದು ಸಮಾಜದ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ದೇಶದಲ್ಲಿ ಮುಂಬೈ, ಸಂಸತ್, ವೈಷ್ಣದೇವಿ ಯಾತ್ರಿಕರ ಮೇಲೆ ಭಯೋತ್ಪಾದನಾ ದಾಳಿ ಮಾಡಿದವರು ಯಾರು ಎಂಬುದನ್ನು ಹಿಂಸೆ, ದ್ವೇಷ ಎನ್ನುವ ರಾಹುಲ್ ಗಾಂಧಿ ಹೇಳಿಕೆ ನೀಡಲಿ. 21 ತಿಂಗಳು ಸಂವಿಧಾನವನ್ನೇ ಅಮಾನತ್ತಿನಲ್ಲಿಟ್ಟಿದ್ದ ಬಗ್ಗೆ ಮಾತನಾಡಲಿ, 1984ರಲ್ಲಿ ಮೂರು ಸಾವಿರ ಸಿಬ್ಬರನ್ನು ಕೊಲೈಗೈದ ಬಗ್ಗೆ, ಕಾಶ್ಮೀರದ ಪಂಡಿತರ ಮಾರಣ ಹೋಮದ ಬಗ್ಗೆ ಬಾಯಿ ಬಿಚ್ಚಲಿ ಎಂದು ವಾಗ್ದಾಳಿ ನಡೆಸಿದರು.

ತಮಿಳುನಾಡಿನ ಸಿಎಂ ಪುತ್ರ ಸ್ಟಾಲಿನ್ ಸನಾತನ ಧರ್ಮ ಸರ್ವನಾಶ ಮಾಡುತ್ತೇವೆ ಎಂದ, ಕೇರಳದಲ್ಲಿ ಮುಸ್ಲಿಂ ಲೀಗ್ನವರು ಹಿಂದುಗಳ ರುಂಡ ಕತ್ತರಿಸುತ್ತೇವೆ ಎಂದವರ ಬಗ್ಗೆ ಮಾತನಾಡಲಿ. ಸಂವಿಧಾನದ ಮೂಲ ಆಶಯಕ್ಕೆ ಧಕ್ಕೆ ತಂದ ಬಗ್ಗೆ ಸ್ಪಷ್ಟನೆ ನೀಡಲಿ. ತುರ್ತು ಪರಿಸ್ಥಿತಿ ಹೇರಿ 1.40 ಲಕ್ಷ ಜನರನ್ನು ಜೈಲಿಗೆ ಅಟ್ಟಿದ್ದು, ದ್ವೇಷ, ಹಿಂಸಾ ರಾಜಕಾರಣ ಎಂದು ಹೇಳಿದರು.

emedialine

Recent Posts

ಕಲಾವಿದ ಕಲ್ಪನೆಗಳ ಅಭಿವ್ಯಕ್ತಿಯೇ ಚಿತ್ರಕಲೆ: ಸಂತೋಷ್ ಹೆಗಡೆ

ಬೆಂಗಳೂರು:ಕಲಾವಿದನ ಕಲ್ಪನೆ ಮತ್ತು ಭಾವನೆಗಳ ಅಭಿವ್ಯಕ್ತಿಯೆ ಚಿತ್ರಕಲೆ,ಹಾಗೂ ಸಾಮಾನ್ಯವಾಗಿ ಒಬ್ಬ ಕಲಾವಿದ ಕಲೆಯಲ್ಲಿ ತೊಡಗಿಕೊಳ್ಳುವುದರಿಂದ ಅವರ ಯೋಚನೆ ಮತ್ತು ಭಾವನೆಗಳು…

1 hour ago

ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹಿಸುವುದು ಶ್ಲಾಘನೀಯ

ಕಲಬುರಗಿ: ನಗರದ ಕಲಾಮಂಡಳದಲ್ಲಿ ಜಾÐನದೀಪ ನೃತ್ಯ ಕಲಾಸಂಸ್ಥೆ ರಿ ವತಿಯಿಂದ ಸಾಂಸ್ಕ್ರತಿಕ ಕಲಾಮಹೋತ್ಸ ಮತ್ತು ಎಸ್.ಎಸ್.ಎಲ್.ಸಿ ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ…

3 hours ago

ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷರಾಗಿ ನಾಗರಾಜ ಭಂಕಲಗಿ ಅವಿರೋಧ ಆಯ್ಕೆ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ: ಪಟ್ಟಣದ ಶರಣ ಬಸವೇಶ್ವರರ ದೇವಸ್ಥಾನದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಚಿತ್ತಾಪುರ ತಾಲೂಕು ಘಟಕದ…

4 hours ago

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

18 hours ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

18 hours ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

18 hours ago