ಕಲಬುರಗಿ: ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮ-2007 ಕಾಯ್ದೆ ಉಲ್ಲಂಘನೆ ಹಿನ್ನೆಲೆಯಲ್ಲಿ ಜಿಲ್ಲೆಯ 55 ಕ್ಲಿನಿಕ್ ಮತ್ತು ವೈದ್ಯರಿಗೆ ಒಟ್ಟು 22.27 ಲಕ್ಷ ರೂ. ದಂಡ ವಿಧಿಸಲು ಮಂಗಳವಾರ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅಧ್ಯಕ್ಷತೆಯಲ್ಲಿ ನಡೆದ ಕೆ.ಪಿ.ಎಂ.ಇ ಜಿಲ್ಲಾ ಮಟ್ಟದ ನೋಂದಣಿ ಮತ್ತು ಕುಂದುಕೊರತೆ ಪ್ರಾಧಿಕಾರ ಸಭೆಯಲ್ಲಿ ನಿರ್ಧರಿಸಲಾಗಿದೆ.
ಕೆ.ಪಿ.ಎಂ.ಇ. ಕಾಯ್ದೆ ಉಲ್ಲಂಘನೆ ಹಿನ್ನೆಲೆಯಲ್ಲಿ 42 ಜನರಿಗೆ ತಲಾ 50 ಸಾವಿರ ರೂ., 5 ಜನರಿಗೆ ತಲಾ 20 ಸಾವಿರ ರೂ., 5 ಜನರಿಗೆ ತಲಾ 5 ಸಾವಿರ ರೂ., ಇಬ್ಬರಿಗೆ ತಲಾ 1ಸಾವಿರ ರೂ. ದಂಡ ವಿಧಿಸಿ ಕೂಡಲೆ ದಂಡ ಕಟ್ಟಲು ಆದೇಶಿಸಿಲಾಗಿದೆ. ಉಳಿದಂತೆ 6 ಜನ ವೈದ್ಯರಿಗೆ ಖಡಕ್ ಎಚ್ಚರಿಕೆ ನೀಡಲಾಗಿದೆ. ದಂಡ ಕಟ್ಟಲು ತಪ್ಪಿದಲ್ಲಿ ನ್ಯಾಯಾಲಯದಲ್ಲಿ ಮೊಕದೊಮ್ಮೆ ಹೂಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿ.ಸಿ. ಅವರು ಎಚ್ಚರಿಕೆ ನೀಡಿದ್ದಾರೆ.
ಕಳೆದ ಡಿಸೆಂಬರ್ ದಿಂದ ಜೂನ್ ಮಾಹೆ ವರೆಗೆ ಸಹಾಯಕ ಆಯುಕ್ತರ ನೇತೃತ್ವದ ತಪಾಸಣಾ ತಂಡ ನಿಯಮಿತ ದಾಳಿ ನಡೆಸಿ ಒಟ್ಟು 61 ಕ್ಲಿನಿಕ್ ಮತ್ತು ವೈದ್ಯರ ಮೇಲೆ ಕೆ.ಪಿ.ಎಂ.ಇ. ಕಾಯ್ದೆ ಉಲ್ಲಂಘನೆ ಹಿನ್ನೆಲೆಯಲ್ಲಿ ಇಲಾಖಾ ಎಫ್.ಐ.ಆರ್. ದಾಖಲಿಸಿ ಡಿ.ಸಿ. ಅಧ್ಯಕ್ಷತೆಯ ಕುಂದುಕೊರತೆ ಪ್ರಾಧಿಕಾರದ ಮುಂದೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಅದರಂತೆ ಮಂಗಳವಾರ ಸಭೆಗೆ ಅಗಮಿಸಿದ ವೈದ್ಯರ ಅಹವಾಲು ಆಲಿಸಿ ಡಿ.ಸಿ. ದಂಡ ವಿಧಿಸಿದ್ದಾರೆ.
ಸಭೆಯಲ್ಲಿ ಡಿ.ಎಚ್.ಓ. ಡಾ.ರತಿಕಾಂತ ಸ್ವಾಮಿ, ಆಳಂದ ತಹಶೀಲ್ದಾರ ಯಲ್ಲಪ್ಪ ಸುಬೇದಾರ, ಜಿಲ್ಲಾ ಆಯೂಷ್ ಅಧಿಕಾರಿ ಡಾ.ಗಿರಿಜಾ ನಿಗ್ಗುಡಗಿ ಸೇರಿದಂತೆ ಇನ್ನಿತರ ಇದ್ದರು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…