ಕಲಬುರಗಿ: ಜಿಲ್ಲೆಯ ಜೀವನಾಡಿ ಭೀಮಾ ನದಿಯ ಉಪ ನದಿಯಾಗಿರುವ ಬೋರಿ ನದಿಯಿಂದ 1 ಟಿ.ಎಂ.ಸಿ ನೀರೆತ್ತಿ ಅಫಜಲಪೂರ ತಾಲೂಕಿನ 10, ಆಳಂದ ತಾಲೂಕಿನ 3 ಕೆರೆ ಹಾಗೂ ಅಮರ್ಜಾ ಜಲಾಶಯ ಭರ್ತಿ ಮಾಡುವ ಕಾಮಗಾರಿ ತೀವ್ರಗೊಳಿಸಬೇಕು ಎಂದು ಮುಖ್ಯಮಂತ್ರಿಯವರ ನೀತಿ ಮತ್ತು ಕಾರ್ಯಕ್ರಮ ಸಲಹೆಗಾರರಾಗಿರುವ ಆಳಂದ ಶಾಸಕ ಬಿ.ಆರ್.ಪಾಟೀಲ ಅವರು ನೀರಾವರಿ ಅಧಿಕಾರಿಗಳಿಗೆ ಸೂಚಿಸಿದರು.
ಮಂಗಳವಾರ ಕಲಬುರಗಿ ನಗರದ ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ಭೀಮಾ ಮತ್ತು ಅಮರ್ಜಾ ನೀರಾವರಿ ವಲಯದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಇತ್ತೀಚಿನ ವರ್ಷದಲ್ಲಿ ಮಳೆ ಕೊರತೆಯಿಂದ ಅಂತರ್ಜಲ ಬತ್ತಿ ಕುಡಿಯುವ ನೀರಿಗೆ ತೊಂದರೆಯಾಗುತ್ತಿದೆ. 318 ಕೋಟಿ ರೂ. ಮೊತ್ತದ ಈ ಯೋಜನೆ ಸಾಕಾರಗೊಂಡಲ್ಲಿ ಅಂತರ್ಜಲ ಹೆಚ್ಚಲಿದ್ದು, ತಕ್ಕಮಟ್ಟಿಗೆ ಜನ-ಜಾನುವಾರಗಳಿಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ. ಹೀಗಾಗಿ ಕಾಮಗಾರಿಗೆ ಚುರುಕು ನೀಡಿ ಬೇಗ ಮುಗಿಸಬೇಕೆಂದರು.
ಅಫಜಲಪೂರ ತಾಲೂಕಿನ ಅರ್ಜುಣಗಿ ಹತ್ತಿರ ರೈಲ್ವೆ ಕ್ರಾಸಿಂಗ್ ಕಾಮಗಾರಿ ಸಹ ಶೀಘ್ರ ಪೂರ್ಣಗೊಳಿಸುವಂತೆ ರೈಲ್ವೆ ಅಧಿಕಾರಿಗಳಿಗೂ ಬಿ.ಆರ್.ಪಾಟೀಲ ಸೂಚನೆ ನೀಡಿದ ಅವರು, ಇನ್ನು ತಾಲೂಕಿನ ವಿವಿಧ ಕಾಮಗಾರಿಗಳಿಗೆ ಭೂಸ್ವಾಧೀನ ಕಾರ್ಯ ವಿಳಂಬವಾಗದಂತೆ ನೋಡಿಕೊಳ್ಳಬೇಕೆಂದು ಸಬೆಯಲ್ಲಿದ್ದ ಎಸ್.ಎಲ್.ಎ.ಓ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಕೆ.ಎನ್.ಎನ್.ಎಲ್ ಮುಖ್ಯ ಅಭಿಯಂತ ವಿಜಯದಶರಥ ಸಂಘನ್, ಅಧೀಕ್ಷಕ ಇಂಜಿನೀಯರ್ ಸೂರ್ಯಕಾಂತ ಮಾಲೆ, ಕಾರ್ಯನಿರ್ವಾಹಕ ಇಂಜಿನೀಯರ್ ಸಂತೋಷ ಸಜ್ಜನ್ ಸೇರಿದಂತೆ ಇನ್ನಿತರ ಅಧಿಕಾರಿಗಳಿದ್ದರು.
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…