ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕಲಬುರಗಿ ನಗರದ ಜೇವರ್ಗಿ ಕಾಲೋನಿಯ ನಿವಾಸದಲ್ಲಿರುವ ಧರ್ಮಣ್ಣ ದೊಡ್ಡಮನಿ, ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರಾಗಿದ್ದರು.
ಇಂದು ಸಂಜೆ 5 ಗಂಟೆಗೆ ಸ್ವಗ್ರಾಮ ಜೇವರ್ಗಿ ತಾಲೂಕಿನ ಗಂವ್ಹಾರ್ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.