ಸುರಪುರ: ಅಖಿಲ ಭಾರತ ವೀರಶೈವ ಲಿಂಗಾಯತ ವiಬಾಸಭಾ ಸುರಪುರ ತಾಲೂಕು ಘಟಕಕ್ಕೆ ಅಧ್ಯಕ್ಷ ಮತ್ತು ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು,ಒಟ್ಟು 22 ಜನ ಆಕಾಂಕ್ಷಿಗಳು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ ಎಂದು ಸಹಾಯಕ ಚುನಾವಣಾಧಿಕಾರಿ ಶಿವಕುಮಾರ ಮಸ್ಕಿ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿ,ಜುಲೈ 4ರ ಬುಧವಾರ ಮಧ್ಯಾನ 3 ಗಂಟೆವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿತ್ತು,ಅದರಲ್ಲಿ ಅಧ್ಯಕ್ಷಸ್ಥಾನಕ್ಕೆ 5 ಜನ ಹಾಲಿ ಅಧ್ಯಕ್ಷ ಮಂಜುನಾಥ ಜಾಲಹಳ್ಳಿ ಎರಡನೇ ಬಾರಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿ ನಾಮಪತ್ರ ಸಲ್ಲಿಸಿದರೆ,ಇನ್ನುಳಿದಂತೆ ಜಗದೀಶ ಪಾಟೀಲ್ ಸೂಗೂರ,ಪ್ರಕಾಶ ಅಂಗಡಿ ಕನ್ನೆಳ್ಳಿ,ವಿರೇಶ ಪಂಚಾಂಗಮಠ ಹಾಗೂ ಶಿವರಾಜ ಸಾಹು ಸೂಗೂರ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.ನಿರ್ದೇಶಕ ಸ್ಥಾನಕ್ಕೆ 14 ಜನ ಪುರುಷರು ಹಾಗೂ 3 ಜನ ಮಹಿಳೆಯರು ನಾಮಪತ್ರ ಸಲ್ಲಿಸಿದ್ದಾರೆ.ಇಂದು (ಗುರುವಾರ) ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು ಜುಲೈ 21 ರಂದು ಚುನಾವಣೆ ನಡೆಯಲಿದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಚನ್ನಬಸಯ್ಯ ಸ್ವಾಮಿ ಜೇಟಗಿಮಠ ಅವರು ಕೂಡ ಉಪಸ್ಥಿತರಿದ್ದರು.
ಹಾಲಿ ಅಧ್ಯಕ್ಷ ಮಂಜುನಾಥ ಜಾಲಹಳ್ಳಿ ಎರಡನೇ ಬಾರಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿ ಸಹಾಯಕ ಚುನಾವಣಾಧಿಕಾರಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಸೂಚಕ ಸೋಮಶೇಖರ ಶಾಬಾದಿ,ಸಿದ್ದಯ್ಯಸ್ವಾಮಿ ಕಡ್ಲೆಪ್ಪನವರಮಠ,ವಿರೇಶ ನಿಷ್ಠಿ ದೇಶಮುಖ,ಶಿವರುದ್ರ ಉಳ್ಳಿ,ರವಿಗೌಡ ಹೆಮನೂರ,ಚಂದ್ರಶೇಖರ ಡೊಣೂರ,ಪ್ರಕಾಶ ಅಂಗಡಿ ಹೆಮ್ಮಡಗಿ ಇತರರು ಉಸ್ಥಿತರಿದ್ದರು.