ಬಿಸಿ ಬಿಸಿ ಸುದ್ದಿ

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ

ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು ಕರ್ನಾಟಕ ರಾಜ್ಯದಲ್ಲಿ ಜಿಲ್ಲಾ ಮತ್ತು ತಾಲೂಕು ಘಟಕಗಳಿಗೆ ಚುನಾವಣೆ ಹಿನ್ನೆಲೆಯಲ್ಲಿ  ಚಿಂಚೋಳಿ ತಾಲೂಕ ಘಟಕದ ಅಧ್ಯಕ್ಷ ಸ್ಥಾನಕ್ಕೆ ಶರಣು ಶರಣು ಮೋತಕಪಲ್ಲಿ ಗುರುವಾರ ನಾಮಪತ್ರ ಸಲ್ಲಿಸಿದರು.

ಪಟ್ಟಣದ ಪ್ರೊಫೆಷನಲ್ ಕೊರಿಯರ್ ಕಚೇರಿ ಮುಖ್ಯ ರಸ್ತೆಯಲ್ಲಿ ಇರುವ ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸಿ ತಾಲೂಕಿನ ಎಲ್ಲ ಆತ್ಮೀಯ ಶರಣ ಬಂಧುಗಳು, ಹಿತೈಷಿಗಳು ಸಮಾಜದ ಗಣ್ಯರು ಹಾಗೂ ಮತದಾರರು ಆಶೀರ್ವದಿಸಲು ಮನವಿ ಮಾಡಿದರು.

ಪರಿಚಯ: ಚಿಂಚೋಳಿ ತಾಲೂಕಿನ ಶಿಕಾರ ಮೋತಕಪಲ್ಲಿ ಎನ್ನುವ ಚಿಕ್ಕ ಗ್ರಾಮದ ಸಾಮಾನ್ಯ ರೈತರ ಮನೆಯಲ್ಲಿ ಜನಿಸಿದ ಅವರು, ವೃತ್ತಿಯಲ್ಲಿ ವಕೀಲನಾಗಿ ಜವಾಬ್ದಾರಿಯಲ್ಲಿ ರಾಜಕೀಯ ಪಕ್ಷದ ಕಾರ್ಯಕರ್ತನಾಗಿ ಸಮಾಜದ ಬಾಂಧವರಿಗೆ ಉಪಯುಕ್ತವಾಗಿ ಸೇವೆ ಸಲ್ಲಿಸಿದ್ದಾರೆ.

ದೇಶದಲ್ಲಿ ನಮ್ಮ ವೀರಶೈವ ಲಿಂಗಾಯತ ಸಮಾಜದ ಅಧಿಕೃತ ಸಂಘಟನೆಯಾದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಜೊತೆಗೆ ಸದಾಕಾಲ ಗುರುತಿಸಿಕೊಂಡು ಸಂಘಟನೆಯಲ್ಲಿ ಕೊಟ್ಟಂತಹ ಜವಾಬ್ದಾರಿಗೆ ಚ್ಯುತಿ ಬಾರದಂತೆ ಕಾರ್ಯ ನಿರ್ವಹಿಸಿದ ತೃಪ್ತಿ ಹೊಂದಿರುತ್ತೇನೆ ಎಂದು ತಿಳಿಸಿದ ಅವರು, ಸಂಘಟನೆಯ ರಾಷ್ಟೀಯ, ರಾಜ್ಯದ ಹಾಗು ಜಿಲ್ಲಾ ಪದಾಧಿಕಾರಿಗಳೊಂದಿಗೆ ನಿಕಟ ಸಂಪರ್ಕ ಇಟ್ಟುಕೊಂಡಿರುವ ನಾನು ಸದಾ ಸಮಾಜದ ಪರ ಕೆಲಸ ಮಾಡುವ ಯೋಚನೆ ಹೊಂದಿರುತ್ತೇನೆ.

ಚಿಂಚೋಳಿ ತಾಲೂಕು ಘಟಕದ ಅಧ್ಯಕ್ಷನಾಗಿ ಸೇವೆ ಸಲ್ಲಿಸಲು ಆಸಕ್ತಿ ಹೊಂದಿದ್ದು, ಚಿಂಚೋಳಿಯ ಸಮಾಜದ ಪ್ರಮುಖರಾದ ತಮ್ಮೆಲ್ಲರ ಆಶೀರ್ವಾದ ಹಾಗು ಸಹಕಾರ ಇದೆ ಎನ್ನುವ ಪ್ರಬಲ ನಂಬಿಕೆಯೊಂದಿಗೆ ನನ್ನ ನಾಮಪತ್ರವನ್ನು ಸಲ್ಲಿಸುತ್ತಿದ್ದೇನೆ. ಸಮಾಜ, ಧರ್ಮ ಎನ್ನುವ ವಿಚಾರ ಬಂದಾಗ ಎಲ್ಲವನ್ನೂ ಮೀರಿ ಕೇವಲ ಸಮಾಜದ ಹಿತದಿಂದ ಯೋಚನೆ ಮಾಡಿ ಸೂಕ್ತ ವ್ಯಕ್ತಿಗೆ ತಾವು ಮನ್ನಣೆ ಕೊಡುತ್ತೀರಿ ಅನ್ನುವ ಆಶಾಭಾವನೆಯನ್ನು ಇಟ್ಟುಕೊಂಡು, ತಮ್ಮ ನಂಬಿಕೆ ಹಾಗು ವಿಶ್ವಾಸಕ್ಕೆ ಬದ್ಧನಾಗಿರುತ್ತೇನೆ ಎಂದು ಮತದಾರರಲ್ಲಿ ಆಶಾಭಾವನೆಯನ್ನು ಶರಣು ಪಾಟೀಲ ಮೋತಕಪಲ್ಲಿ ವ್ಯಕ್ತಪಡಿಸಿದ್ದಾರೆ.

emedialine

Recent Posts

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

49 mins ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

2 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

15 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

15 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

17 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

17 hours ago