ಚಿತ್ತಾಪುರ: ಕರ್ನಾಟಕ ಸಿಮೆಂಟ್ ಮಜೂದರ ಸಭಾ (ಕೆಸಿಎಲ್) ಸಂಘದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಡಾ.ಪ್ರಭುರಾಜ ಕಾಂತ ಪತ್ರಿಕೆ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಕೆಸಿಎಲ್ ಸಂಘದ ಅಧ್ಯಕ್ಷನಾಗಿದ್ದ ನಾನು ನನ್ನ ವೈಯಕ್ತಿಕ ಕೆಲಸಗಳ ಒತ್ತಡದ ಮಧ್ಯ ಸಂಘದ ಕಾರ್ಯಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಆಗುತ್ತಿಲ್ಲ. ಸದರಿ ಹುದ್ದೆಯಿಂದ ಕೂಡಲೇ ರಾಜೀನಾಮೆಯನ್ನು ಸಲ್ಲಿಸುತ್ತಿದ್ದೇನೆ ಎಂದು ಪತ್ರಿಕೆಯ ಪ್ರಕಟಣೆ ಮೂಲಕ ತಿಳಿಸಿದ್ದಾರೆ.