ಶಹಾಬಾದ: ಈ ದೇಶದ ಬಡ ವರ್ಗದ ಜನರ ಹಸಿವನ್ನು ನೀಗಿಸುವ ಮೂಲಕ ಈ ದೇಶದಲ್ಲಿ ನಿರಂತರ ಶಾಂತಿ ದೊರಕುವಂತೆ ಹೋರಾಟ ನಡೆಸಿದ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬುಜಗಜೀವನರಾಮ ಎಂದು ಬಿಜೆಪಿ ಮಂಡಲ ಅಧ್ಯಕ್ಷ ನಿಂಗಣ್ಣ ಹುಳಗೋಳಕರ್ ಹೇಳಿದರು.
ಅವರು ಶನಿವಾರ ಬಿಜೆಪಿ ಕಚೇರಿಯಲ್ಲಿ ಡಾ.ಶ್ಯಾಮ ಪ್ರಸಾದ ಮುಖರ್ಜಿ ಜಯಂತಿ ಹಾಗೂ ಡಾ.ಬಾಬುಜಗಜೀವನರಾಮ ಅವರ ಪುಣ್ಯ ಸ್ಮರಣೆ ನಿಮಿತ್ತ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ದೇಶದಲ್ಲಿ ಆಹಾರದ ಕೊರತೆ ಉಂಟಾದ ಸಮಯದಲ್ಲಿ ಕೃಷಿ ಸಚಿವರಾಗಿದ್ದ ಬಾಬು ಜಗಜೀವನರಾಮ ಅವರು ಜಾರಿಗೆ ತಂದ ಯೋಜನೆಗಳು ಹಸಿರು ಕ್ರಾಂತಿಗೆ ಕಾರಣವಾದವು. ಜಗಜೀವನರಾಮ ಅವರು ತಮ್ಮ ಜೀವನದಲ್ಲಿ ದೇಶದಲ್ಲಿರುವ ಬಡಜನರ ಏಳಿಗೆಗಾಗಿ ನಿರಂತರ ಹೋರಾಟ ನಡೆಸಿದರಲ್ಲದೇ, ಅಸ್ಪøಶ್ಯತೆಯನ್ನು ಹೋಗಲಾಡಿಸಲು ಗಾಂಧೀಜಿ ಜತೆ ಕೈಗೂಡಿಸಿ ಹೋರಾಟ ಮಾಡಿದ ಮಹಾನ್ ವ್ಯಕ್ತಿ. ಅವರ ತತ್ವ ಆದರ್ಶಗಳನ್ನು ಎಲ್ಲರೂ ಮೈಗೂಡಿಕೊಳ್ಳುವಂತಾಗಬೇಕೆಂದು ಹೇಳಿದರು.
ಕನಕಪ್ಪ ದಂಡಗುಲಕರ ಮಾತನಾಡಿ,ಸಮಾಜದ ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು. ಅವರು ದೇಶದ ಉಪಪ್ರಧಾನಿಗಳಾಗಿದ್ದ ಸದಂರ್ಭದಲ್ಲಿ ಜಾರಿಗೆ ತಂದ ಹಲವಾರು ಜನಪರ ಕಾರ್ಯಕ್ರಮಗಳು ಇಂದಿಗೂ ಮಾದರಿಯಾಗಿವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮುಖಂಡರಾದ ಮಹಾದೇವ ಗೊಬ್ಬೂರಕರ, ಶಶಿಕಲಾ ಸಜ್ಜನ, ಪಾರ್ವತಿ ಪವಾರ, ನಂದಾ ಗುಡೂರ, ದೇವದಾಸ ಜಾಧವ, ನಾರಾಯಣ ಕಂದಕೂರ, ಕನಕಪ್ಪ ದಂಡಗುಲಕರ, ಭೀಮರಾವ ಸಾಳುಂಕೆ, ಡಾ.ಅಶೋಕ ಜಿಂಗಾಡೆ, ಬಸವರಾಜ ಬಿರಾದಾರ, ಅನೀಲ ಬೊರಗಾಂಕರ, ಸೂರ್ಯಕಾಂತ ವಾರದ, ಯಲ್ಲಪ್ಪ ದಂಡಗುಲಕರ, ದತ್ತಾತ್ರೇಯ ಘಂಟಿ, ಸಂದೀಪ್ ಹದನೂರ, ರಾಮು ಕುಸಾಳೆ, ಶ್ರೀನೀವಾಸ ದೇವಕರ, ಅಂಬರೀಶ್ ಕಲ್ಯಾಣಿ ಉಪಸ್ಥಿತರಿದ್ದರು.
ದೇವದಾಸ ಜಾಧವ ಸ್ವಾಗತಿಸಿ, ನಿರೂಪಿಸಿದರು, ನಾರಾಯಣ ಕಂದಕೂರ ವಂದಿಸಿದರು.