ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

0
13

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ ದೇವಸ್ಥಾನ, ವಿದ್ಯಾನಗರ ಕಲಬುರ್ಗಿಯಲ್ಲಿ ಪಲಿಮಾರು ಮಠದ ಹಿರಿಯ ಶ್ರೀಗಳಾದ ಶ್ರೀ ಶ್ರೀ 1008 ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಹಾಗೂ ಕಿರಿಯ ಶ್ರೀಗಳಾದ ಶ್ರೀ ಶ್ರೀ 1008 ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರಿಗೆ ಸ್ವಾಗತ ಮಾಡಲಾಯಿತು.

ತದನಂತರ ಶ್ರೀಗಳವರಿಂದ ಸಂಸ್ಥಾನ ಪೂಜೆ ಹಾಗೂ ತೀರ್ಥ ಪ್ರಸಾದ ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಸದಸ್ಯರಾದ ಶ್ರೀ ಕೃಷ್ಣಾಜಿ ಕುಲಕರ್ಣಿ, ಶ್ರೀ ರಂಗನಾಥ ದೇಸಾಯಿ, ಕಿಶೋರ ದೇಶಪಾಂಡೆ, ನಾರಾಯಣ ದೇಸಾಯಿ, ವಿದ್ಯಾಸಾಗರ ಕುಲಕರ್ಣಿ ರೇವೂರ, ರಾಮ ದಾಸ, ವಿದ್ಯಾರ್ಥಿಗಳು, ಭಜನಾ ಮಂಡಳಿ ಸದಸ್ಯರು ಹಾಗೂ ಭಗವದ್ಭಕ್ತರು ಉಪಸ್ಥಿತರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here