ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ ಕಾರ್ಯದರ್ಶಿ ನಾಗಪ್ಪ ರಾಯಚೂರಕರ್ ಹೇಳಿದರು.
ಅವರು ಶನಿವಾರ ಮಾದಿಗ ಸಮಾಜದ ವತಿಯಿಂದ ಡಾ.ಬಾಬುಜಗಜೀವನರಾಮ ಅವರ ಪುಣ್ಯ ಸ್ಮರಣೆ ನಿಮಿತ್ತ ನಗರಸಭೆಯ ಆವರಣದ ಡಾ.ಬಾಬುಜಗಜೀವನರಾಮ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.
ದೇಶದ ಉಪಪ್ರಧಾನಿಗಳಾಗಿದ್ದ ಸಂದರ್ಭದಲ್ಲಿ ಜಾರಿಗೆ ತಂದ ಹಲವಾರು ಜನಪರ ಕಾರ್ಯಕ್ರಮಗಳು ಇಂದಿಗೂ ಮಾದರಿಯಾಗಿವೆ ಎಂದು ಹೇಳಿದರು.
ಮಾದಿಗ ಸಮಾಜ ಹಿರಿಯ ಮುಖಂಡ ಶ್ರೀ ಶಿವರಾಜ ಕೋರೆ ಶ್ರೀ ರವಿ ಬೆಳ ಮಗಿ ಲೋಹಿತ್ ಕಟ್ಟಿ ಶರಣಗೌಡ ಪಾಟೀಲ್ ಶರಣು ಬಿ ಪಗ ಲಾ ಪುರ್ ಮುಂತಾದವರು ಉಪಸ್ಥಿತರಿದ್ದರು ‘
ಮಾದಿಗ ಸಮಾಜ ಹಿರಿಯ ಮುಖಂಡ ಶಿವರಾಜ ಕೋರೆ ಹಾಗೂ ಶರಣು ಪಗಲಾಪೂರ ಮಾತನಾಡಿ, ಬಾಬುಜಿ’ ಎಂದೇ ಕರೆಯಲ್ಪಡುವ ಜಗಜೀವನ ರಾಮ್ ಧೀಮಂತ ರಾಷ್ಟ್ರೀಯ ನಾಯಕ, ಸ್ವಾತಂತ್ರ್ಯ ಮತ್ತು ಸಾಮಾಜಿಕ ನ್ಯಾಯ ಹೋರಾಟಗಾರ ಹಾಗೂ ಅತ್ಯುತ್ತ್ತಮ ಸಂಸದೀಯ ಪಟುವಾಗಿದ್ದರು. ಬಾಬು ಜಗಜೀವನ ರಾಮ್ ಅವರು ಸ್ವಾತಂತ್ರ್ಯ ಹೋರಾಟಗಾರರಾಗಿ, ಸಂವಿಧಾನ ರಚನಾ ಸಭೆಯ ಸದಸ್ಯರಾಗಿ ಮತ್ತು ಮೊದಲ ಉಪ ಪ್ರಧಾನಿಯಾಗಿ ನಮ್ಮ ದೇಶಕ್ಕೆ ಮಹತ್ತರ ಕೊಡುಗೆ ನೀಡಿದ್ದಾರೆ.
ಭಾರತದಲ್ಲಿ ದೀರ್ಘ ಕಾಲದಿಂದ ಬೆಳೆದುಕೊಂಡು ಬಂದಿದ್ದ ಮೇಲು-ಕೀಳು ತಾರತಮ್ಯ, ಜಾತಿ ಪದ್ಧತಿ, ಅಸ್ಪೃಶ್ಯ ಎಂಬ ಮನೋಭಾವಗಳನ್ನು ತೊಡೆದು ಹಾಕಲು ಸಾಮಾಜಿಕ ನೆಲೆಗಟ್ಟಿನಲ್ಲಿ ಹೋರಾಡಿದವರು ಅನೇಕರು. ಆದರೆ ಅವರ ಏಳಿಗೆಗೆ ಹೆಚ್ಚಿನ ಚುರುಕು ನೀಡಿ ಒಂದು ಸ್ಪಷ್ಟ ರೂಪ ಕೊಟ್ಟ ಕೆಲವೇ ಕೆಲವು ನಾಯಕರಲ್ಲಿ ಬಾಬು ಜಗಜೀವನ ರಾಮ್ ಒಬ್ಬರು ಎಂದರು.
ಮುಖಂಡ ರವಿ ಬೆಳಮಗಿ ಹಾಗೂ ಕಸಾಪ ಕಲಬುರಗಿ ಗ್ರಾಮೀಣ ಮಾಜಿ ಅಧ್ಯಕ್ಷ ಶರಣಗೌಡ ಪಾಟೀಲ ಮಾತನಾಡಿ,ಬಾಬು ಜಗಜೀವನರಾಮ ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಾವೆಲ್ಲರೂ ನಡೆಯಬೇಕಾಗಿದೆ ಎಂದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…