ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ. ಇಲ್ಲವಾದರೆ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ ಎಂದು ಉಪವಲಯ ಅರಣ್ಯಾಧಿಕಾರಿ ಮಂಜುನಾಥ ಹಂದ್ರಾಳ ಹೇಳಿದರು.

ಅವರು ರವಿವಾರ ತಾಲೂಕಿನ ಮರತೂರ ಗ್ರಾಮದಲ್ಲಿ ಪ್ರಾದೇಶಿಕ ಅರಣ್ಯ ವಲಯದ ವತಿಯಿಂದ ಏರ್ಪಡಿಸಿದ್ದ ವನಮಹೋತ್ಸವ ಮತ್ತು ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಸಸಿಗೆ ನಿರುಣಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ನೂರಾರು ಗಿಡಗಳನ್ನು ನೆಟ್ಟು ಬೆಳೆಸುವುದೇ ವನಮಹೋತ್ಸವದ ಮುಖ್ಯ ಉದ್ದೇಶವಾಗಿದೆ. ಪ್ರತಿಯೊಬ್ಬರು ಪರಿಸರ ರಕ್ಷಣೆಗೆ ಜಾಗೃತಿ ವಹಿಸಬೇಕು. ನಿತ್ಯ ವಾಹನಗಳು ಹೆಚ್ಚಾಗುತ್ತಿವೆ. ಗಿಡ ಮರಗಳು ನಾಶವಾಗುತ್ತಿವೆ, ಪ್ಲಾಸ್ಟಿಕ್ ಬಳಕೆ ಜಾಸ್ತಿಯಾಗುತ್ತಿದ್ದು, ಇದರಿಂದ ವಾಯು ಮಾಲಿನ್ಯ, ಉμÁ್ಣಂಶ ಹೆಚ್ಚಾಗುತ್ತಿದೆ. ಮಳೆ ಬೆಳೆಗಳು ಕಡಿಮೆಯಾಗುತ್ತಿವೆ. ಕಾರಣ ಇದರ ಬಗ್ಗೆ ಸಮತೋಲನ ಕಾಪಾಡಲು ಜನರು ಹೆಚ್ಚಿನ ಜಾಗೃತಿ ವಹಿಸಬೇಕಾಗಿದೆ ಎಂದು ಹೇಳಿದರು.

ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಡಾ.ರವೀಂದ್ರ ನರೋಣಿ ಮಾತನಾಡಿ, ನಿರಂತರ ಪರಿಶ್ರಮ ಎಲ್ಲಿ ಇರುತ್ತದೆ ಅಲ್ಲಿ ಉತ್ತಮ ಫಲಿತಾಂಶ ಇದ್ದೆ ಇರುತ್ತದೆ. ಗ್ರಾಮದ ವಾತವರಣ ಮೊದಲು ಸರಿಯಾಗಿ ಇದ್ದರೆದಿಲ್ಲಿನ ಜನರ ಆರೋಗ್ಯವು ಚೆನ್ನಾಗಿರುತ್ತದೆ. ಗ್ರಾಮದ ಜನರು ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿರಿಸಿಕೊಳ್ಳುವ ಮೂಲಕ, ತಮ್ಮ ನೆರೆ ಹೊರೆಯರಿಗೆ ತಿಳಿ ಹೇಳಿ, ಶುದ್ಧ, ಸ್ವಚ್ಛ, ಆರೋಗ್ಯ ಸಮಾಜ ನಿರ್ಮಿಸಲು ಮುಂದಾಗಬೇಕಿದೆ ಎಂದರು.

ಅರಣ್ಯ ವೀಕ್ಷಕರಾದ ಮಾರುತಿ ಮಾತನಾಡಿ, ಈ ಹಿಂದೆ ಸೈಕಲ್ ಹೆಚ್ಚಾಗಿ ಬಳಸುತ್ತಿದ್ದರು. ಇದರಿಂದ ಉತ್ತಮ ಆರೋಗ್ಯದ ಜತೆಗೆ ವಾಯು ಮಾಲಿನ್ಯವಾಗುತ್ತಿರಲಿಲ್ಲ. ಇಂದು ಪ್ರತಿಯೊಬ್ಬರು ಪರಿಸರದ ಬಗ್ಗೆ ಅತ್ಮಾವಲೋಕನ ಮಾಡಿಕೊಳ್ಳಬೇಕಾದ ಅವಶ್ಯಕತೆ ಇದೆ ಎಂದರು.

ಮರತೂರ ಗ್ರಾಮದ ಮುಖಂಡ ಶೌಕತ್ ಅಲಿ,ಗುರುನಾಥ ಕಂಬಾ, ಗ್ರಾಪಂ ಸಿದ್ರಾಮಪ್ಪಗೌಡ ಮಾಲಿ ಪಾಟೀಲ,ಶ್ಯಾಮರಾವ ಸುಣಗಾರ,ಸಂಜುಕುಮಾರ ಗರ್, ರಮೇಶ ಸಾಹು, ಶರಣು ಪರಗುಂಡ, ಮಲ್ಲಿಕಾರ್ಜುನ ದೊಡ್ಡಿ, ವೆಂಕಟೇಶ, ಗೌತಮ ಪರತೂರಕರ್ ,ವೆಂಕಟೇಶ ಪವಾರ ಇತರರು ಇದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

6 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420