ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ ಅಂಗವಾಗಿ ಭವ್ಯ ಮೆರವಣಿಗೆ ನಡೆಸಲಾಯಿತು.
ದೇವಸ್ಥಾನದ ಪ್ರಧಾನ ಅರ್ಚಕರಾದ ಮನೋಹರ ಬಿ.ಕಂಚಗಾರ ಅವರ ಮನೆಯಿಂದ ಪ್ರಭಾವಳಿಯೊಂದಿಗೆ ನಿರ್ಮಾಣಗೊಂಡ ಮರಗಮ್ಮ ದೇವಿಯ ಮೂರ್ತಿಯನ್ನು ಹಾಗೂ ಮೌನೇಶ ಬಿ.ನಾಲವಾರ ಅವರ ಮನೆಯಿಂದ ದೇವಸ್ಥಾನದ ಮತ್ತು ಘಂಟೆಗಳನ್ನು ತೆಗೆದುಕೊಂಡು ಸುಮಂಗಲೆಯರ ಕುಂಭ ಕಳಸಗಳೊಂದಿಗೆ ದೊಡ್ಡಬಾವಿಗೆ ಗಂಗಾಸ್ನಾನಕ್ಕೆ ಕರೆದುಕೊಂಡು ಹೋಗಲಾಯಿತು.
ದೊಡ್ಡ ಬಾವಿಯಲ್ಲಿ ಶಹಾಪುರದ ವಿಶ್ವಕರ್ಮ ಏಕದಂಡಗಿ ಮಠದ ಪೂಜ್ಯ ಶ್ರೀ ಕಾಳಹಸ್ತೇಂದ್ರ ಮಹಾಸ್ವಾಮಿಯವರ ದಿವ್ಯ ಸಾನಿಧ್ಯದಲ್ಲಿ ಗಂಗಾಸ್ನಾನ ಮುಗಿಸಿ ನಂತರ ದೇವಿಯ ತವರು ಮನೆಯಾದ ನರಸಿಂಗ ಮಾರುತಿರಾವ್ ಪತಂಗೆ ಇವರ ಮನೆಗೆ ಹೋಗಿ ವಿರಮಿಸಿ ನಂತರ ಡೊಳ್ಳು,ವಾದ್ಯಗಳೊಂದಿಗೆ ದೇವಿಯ ಮೂರ್ತಿಯ ಭವ್ಯ ಮೆರವಣಿಗೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಸಾವಿರಾರು ಜನರು ಭಾಗವಹಿಸಿ ಮರಗಮ್ಮ ದೇವಿಯ ಜಯಘೋಷ ದೊಂದಿಗೆ ಭಂಡಾರವನ್ನು ಎರಚುತ್ತಾ ಜನರು ಹರ್ಷದಿಂದ ಪಾಲ್ಗೊಂಡರು. ಮಧ್ಹ್ಯಾನ ದಿಂದ ಆರಂಭಗೊಂಡ ಮೆರವಣಿಗೆ ರಾತ್ರಿ ಎಂಟು ಗಂಟೆಯ ವರೆಗೆ ನಡೆಯಿತು.ನಂತರ ದೇವಿಯ ಮೂರ್ತಿಯನ್ನು ನೂತನವಾಗಿ ನಿರ್ಮಿಸಲಾಗಿರುವ ದೇವಸ್ಥಾನದ ಆವರಣದಲ್ಲಿ ಕಂಬಳಿಯ ಮೇಲೆ ಮೂರ್ತಿಯನ್ನು ವಿರಾಜಮಾನಗೊಳಿಸಲಾಯಿತು.
ಈ ಸಂದರ್ಭದಲ್ಲಿ ಕಾಳಹಸ್ತೇಂದ್ರ ಮಹಾಸ್ವಾಮೀಜಿ, ದೇವಸ್ತಾನದ ಅರ್ಚಕರು ಸೇರಿದಂತೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಸಾವಿರಾರು ಜನ ಭಕ್ತರು ಭಾಗವಹಿಸಿದ್ದರು.ಗಂಗಾಸ್ನಾನದ ಅಂಗವಾಗಿ ಭಾಗವಹಿಸಿದ್ದ ಎಲ್ಲಾ ಸಾವಿರಾರು ಜನ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ರಂಗಂಪೇಟೆ,ತಿಮ್ಮಾಪುರ,ಸುರಪುರ,ದೀವಳಗುಡ್ಡ,ಹಸನಾಪುರ,ಸತ್ಯಂಪೇಟೆ,ಲಕ್ಷ್ಮೀಪುರ ಸೇರಿದಂತೆ ಅನೇಕ ಕಡೆಗಳಿಂದ ಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…