ಡೆಂಗ್ಯೂಜ್ವರ ಹಾಗೂ ಚಿಕನ್ ಗುನ್ಯ್ ಜ್ವರ ನಿಯಂತ್ರಣಕ್ಕೆ ಸಹಕರಿಸಲು ಶಾಸಕ ಅಲ್ಲಪ್ರಭು ಪಾಟೀಲ ಸಲಹೆ

ಕಲಬುರಗಿ: ಇತ್ತಿಚಿನ ದಿನಗಲ್ಲಿ ಡೆಂಗ್ಯೂಜ್ವರ ಹಾಗೂ ಚಿಕನ್ ಗುನ್ಯ್ ಜ್ವರ ನಿಯಂತ್ರಣಕ್ಕೆ ಸಾರ್ವಜನಿಕರು ಸಹಕರಿಸಲು ಹಾಗೂ ಅಧಿಕಾರಿಗಳಿಗೆ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಪ್ರಭು ಪಾಟೀಲ ಅವರು ಸಲಹೆ ಸೂಚನೆಗಳನ್ನು ನೀಡಿದರು.

ಸೋಮವಾರದಂದು ನಗರದ ಟೌನ್ ಹಾಲ್‍ನಲ್ಲಿ ಡೆಂಗ್ಯೂ ನಿಯಂತ್ರಣ ಕುರಿತು ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದ ಅವರು ಸಾರ್ವಜನಿಕರು ಹಾಗೂ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಹಿಸಬೇಕೆಂದರು.
ಮಹಾನಗರ ಪಾಲಿಕೆಯಿಂದ ಸರಿಯಾದ ರೀತಿಯಲ್ಲಿ ಯು.ಜಿ.ಡಿ. ಪೈಪ್ ಲೈನ್ ಕ್ಲೀಯರ್ ಮಾಡಬೇಕು. ಮತ್ತು ಕಲಬುರಗಿಯಲ್ಲಿ ಎಲ್ಲಾ ವಾರ್ಡಗಳಲ್ಲಿ ಆಶಾಕಾರ್ಯಕರ್ತರು ಹಾಗೂ ಅಂಗನವಾಡಿ ಶಿಕ್ಷಕರಿಂದ ಜಾಗೃತಿ ಮೂಡಿಸುವಂತ ಕೆಲಸ ಆಗಬೇಕು ಎಂದು ಸಭೆಯಲ್ಲಿ ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಸೂಚಸಲಾಯಿತು.

ಮಹಾನಗರ ಪಾಲಿಕೆವತಿಯಿಂದ ಪ್ರತಿದಿನ ಮಷೀನ್‍ನಿಂದ ಫಾಗಿಂಗ್ ಮಾಡುವುದರಿಂದ ಸೂಳ್ಳೆಗಳ ನಿಯಂತ್ರಣ ಕಡಿಮೆ ಮಾಡಲು ಅನುಕೂಲವಾಗುತ್ತದೆ ಎಂದರು.

ಡೆಂಗ್ಯೂ ಮತ್ತು ಚೆಕನ್ ಗುನ್ಯ ರೋಗದ ಹತ್ತೋಟೆಗೆ ಮುಖ್ಯ ವಿಧಾನ ಈ ಸೊಳ್ಳೆಗಳು ನೀರನ್ನು ಶೇಖರಿಸಿಡುವ ಸಿಮೆಂಟ್ ತೊಟ್ಟಿ ಕಲ್ಲು ಚಪ್ಪಡಿಯಿಂದ ನಿರ್ಮಿಸಿದ ತೊಟ್ಟಿ ಡ್ರಮ್, ಬ್ಯಾರಲ್ ಮಡಿಕೆ ಉಪಯೋಗಿಸು ಒರಳುಕಲ್ಲು ಮುಂತಾದ ಶೇಖರವಾಗುವ ನೀರಿನಲಿ ಉತ್ಪತ್ತಿಯಾಗುವುದರಿಂದ ಈ ರೀತಿ ನೀರು ನಿಲ್ಲದಂತೆ ಎಚ್ಚರಿಕೆವಹಿಸಬೇಕು ಎಂದರು.

ಬಹಳಷ್ಟು ಏರಿಯಾದಲ್ಲಿ ಸರಿಯಾಗಿ ಕ್ಲೀನ್ ಇರುವುದಿಲ್ಲ ಕಸಕಟ್ಟಿಗಳನ್ನು ಒಂದೆಡೆ ಸೇರಿ ಅಲ್ಲಿಯೇ ನೀರು ನಿಲ್ಲುತ್ತವೆ ಮಹಾನಗರ ಪಾಲಿಕೆಯವರು ಎಚ್ಚೆತ್ತುಗೊಂಡು ಕೆಲಸ ಕಾರ್ಯಗಳನ್ನು ಸರಿಯಾದ ರೀತಿಯ ನಿರ್ವಹಿಸಬೇಕು ಯಾವುದೇ ಸಾರ್ವಜನಿಕರ ತೊಂದರೆಯಾಗಬಾರದು ಎಂದರು.

ಡೆಂಗ್ಯೂಜ್ವರ್ ಚಿಕನ್ ಗುನ್ಯ ರೋಗ ನಿಯಂತ್ರಣಕ್ಕೆ ವೈದ್ಯಾಧಿಕಾರಿಗಳು ಮತ್ತು ಮಹಾನಗರಪಾಲಿಕೆ ಅಧಿಕಾರಿಗಳು ಸಮನ್ವಯದಿಂದ ಕೆಲಸ ನಿರ್ವಹಿಸಬೇಕು ಒಂದು ತಂಡಗಳನ್ನು ರೂಪಿಸಿ ತಂಗು, ಗುಂಡಿಗಳನ್ನು ಮುಚ್ಚಬೇಕು ಎಲ್ಲಿಯೂ ನೀರು ನಿಲ್ಲದೆ ಹಾಗೆ ನೋಡಿಕೊಳ್ಳಬೇಕು, ಇತ್ತೀಚಿನ ದಿನಗಳ ರಸ್ತೆಗಳ ಬದಿಯಲ್ಲಿ ಕಂಟ್ಟಿಗಳು ಬೆಳೆದಿರುತ್ತವೆ ಮಹಾನಗರ ಪಾಲಿಕೆಯವರ ಕ್ರಮಕೈಗೊಳ್ಳಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ. ರತಿಕಾಂತ ಸ್ವಾಮಿ ಮಾತನಾಡಿ, ಡೆಂಗ್ಯೂಜ್ವರ ವೈರಸ್‍ನಿಂದ ಉಂಟಾಗುವ ಕಾಯಿಲೆ ಇದ್ದು ಸೊಂಕು ಹೊಂದಿದ ಈಡಿಸ್ ಇಜಿಪ್ಟ್ ಸೋಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಈ ಸೊಳ್ಳೆಗಳು ಸಾಮಾನ್ಯವಾಗಿ ಸ್ವಚ್ಪ ನೀರಿನಲ್ಲಿ ಸಂತಾನಭಿವೃದ್ಧಿ ಮಾಡುತ್ತದೆ ಹಾಗೂ ಹಗಲೊ ಹೊತ್ತಿನಲ್ಲಿ ಮನುಷ್ಯರನ್ನು ಕಚ್ಚುತ್ತದೆ ಎಂದರು.

ಮಹಾನಗರ ಪಾಲಿಕೆಯ ಆಯುಕ್ತ ಭುವನೇಶ್ ದೇವಿದಾಸ ಪಾಟೀಲ್ ಮಾತನಾಡಿ, ಜಿಲ್ಲೆಯಾದ್ಯಂತ ಯು.ಜಿ.ಡಿ. ಡ್ರ್ಯಾನೇಜ್ ಪೈಪ್ ಲೈನ್ ಕನೆಕ್ಷನ್ ಇರುವುದಿಲ್ಲ ಕೆಲವೊಂದು ಪೈಪುಗಳು ರಸ್ತೆ ಬದಿಯಲ್ಲಿ ಬಿದ್ದು ಹಾಳಾಗಿರುತ್ತವೆ ಅಧಿಕಾರಿಗಳು ಪ್ರತಿಯೊಂದು ವಾರ್ಡ್‍ಗಳಿಗೆ ಹೋಗಿ ಪರಿಶೀಲಿಸಿ ಕ್ರಮಕೈಗೊಳ್ಳಬೇಕೆಂದರು.

ಈಗಾಗಲೇ ಯುಜಿಡಿಗೆ ಪೈಪ್‍ಲೈನ್ ಬಗ್ಗೆ ಪ್ರಸ್ತಾವನೆ ಸಲ್ಲಿಸಿ ಅಂದಾಗ ಕಾರ್ಯನಿರ್ವಾಹ ಅಭಿಯಂತರು 540 ಕೋಟಿ ಅಂದಾಜು ಮೊತ್ತ ಆಗಬಹುದು ಎಂದು ಅಧಿಕಾರಿಗಳು ಸಭೆಯ ಗಮನಕ್ಕ ತಂದರು.

ಇನ್ನೂ ಒಂದು ವಾರದೊಳಗೆ ನಿಮ್ಮ ನಿಮ್ಮ ಕೆಲಸಗಳನ್ನು ಸರಿಯಾಗಿ ಮಾಡಬೇಕು ಸಾರ್ವಜನಿಕರಿಂದ ದೂರುಗಳು ಬಂದರೆ ನಿಮ್ಮ ಮೇಲೆ ಶಿಸ್ತಿನ ಕ್ರಮ ಜರುಗಿಸುತ್ತೇನೆ ಎಂದು ಆಯುಕ್ತರು ಎಚ್ಚರಿಸಿದರು.

ಇದೇ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ (ಆಡಳಿತ) ಉಪ ಆಯುಕ್ತರಾದ ಆರ್.ಪಿ. ಜಾಧವ, ಕಾರ್ಯನಿರ್ವಾಹಕ ಅಭಿಯಂತರು ಶಿವನಗೌಡ ಪಾಟೀಲ, ವಲಯ ಆಯುಕ್ತರಾದ ಮುಜಾಮಿಲ್, ರಮೇಶ ಪಟ್ಟೇದಾರ, ಉಮೇಶ ಚವ್ಹಾಣ, ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ಡಾ. ವಿವೇಕನಾಂದ ಟೆಂಗೆ, ಕಾರ್ಯನಿರ್ವಾಹಕ ಅಭಿಯಂತರ ಜವೇರಿಯಾ, ಪುರುಷೋತ್ತಮ, ಕೆ.ಎಸ್. ಪಾಟೀಲ, ಪ್ರದೀಪ,ಸೇರಿದಂತೆ ಮಹಾನಗರ ಪಾಲಿಕೆ ಆರೋಗ್ಯ ಇನ್ಸಪೆಕ್ಟರ್, ಜೂನಿಯರ್ ಇಂಜಿನಿಯರುಗಳು ಪಾಲಿಕೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

emedialine

Recent Posts

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

1 hour ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

6 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

6 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

8 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

20 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420