ಯೋನೊ ಯಾಪ್ ಬಳಸುವಂತೆ ಎಸ್‌ಬಿಐ ವ್ಯವಸ್ಥಾಪಕರ ಕರೆ

ಸುರಪುರ: ಶ್ರೀ ಪ್ರಭು ಕಲಾ ವಿಜ್ಞಾನ ಹಾಗೂ ಜೆ. ಎಮ್. ಬೊಹ್ರಾ ವಾಣಿಜ್ಯ ಪದವಿ ಮಹಾವಿದ್ಯಾಲಯ ಹಾಗೂ ಸ್ಟೆಟ್ ಬ್ಯಾಂಕ್ ಆಫ್ ಇಂಡಿಯಾದ ಸುರಪುರ ಶಾಖೆಯ ಸಂಯುಕ್ತಾಶ್ರಯದಲ್ಲಿ ಯೋನೊ ಯಾಪ್ ಕುರಿತಾದ ವಿಶೇಷ ಉಪನ್ಯಾಸ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸುರಪುರ ಎಸ್.ಬಿ.ಐ ಶಾಖೆಯ ವ್ಯವಸ್ಥಾಪ ವಿನಾಯಕರವರು ಮಾತನಾಡಿ,ಆಧುನಿಕ ಜಂಜಾಟದ ಇಂತಹ ದಿನಗಳಲ್ಲಿ ಹಣಕಾಸಿನ ವ್ಯವಹಾರ ವಹಿವಾಟು ಜಟೀಲವಾದ ಸಮಸ್ಯೆಯಾಗಿ ಮಾರ್ಪಟಿದ್ದು ಹಣಕಾಸಿನ ವಹಿವಾಟುಗಳಿಗಾಗಿ ಬ್ಯಾಂಕುಗಳಿಗೆ ತೆರಳಿ ಸರತಿ ಸಾಲಿನಲ್ಲಿ ನಿಂತು ತಮ್ಮ ವ್ಯವಹಾರಗಳನ್ನು ಮುಗಿಸಿಕೊಳ್ಳುವುದು ಒಂದು ತ್ರಾಸದಾಯಕ ಕೆಲಸವಾಗಿದೆ. ಇದನ್ನು ತಪ್ಪಿಸಲು ತಮ್ಮ ತಮ್ಮ ಮೊಬೈಲ ಫೋನ್ ಗಳಲ್ಲಿ ಯೋನೊ ಯಾಪ್ ಅಡವಳಿಸಿಕೊಳ್ಳುವುದರ ಮೂಲಕ ಸುಲಭ ಹಣಕಾಸಿನ ವಹಿವಾಟು ನಡೆಸಬಹುದಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯರಾದ ಡಾ. ಎಸ್.ಎಚ್. ಹೊಸಮನಿ ಮಾತನಾಡಿ, ಬ್ಯಾಂಕಿನ ವಿವಿಧ ಯೋಜನೆಗಳನ್ನು, ಸವಲತ್ತುಗಳನ್ನು ಕುರಿತು ವಿದ್ಯರ್ಥಿಗಳಿಗೆ ಜಾಗೃತಿ ಮೂಡಿಸಲು ಮಹಾವಿದ್ಯಾಲಯಕ್ಕೆ ತಾವು ಆಗಮಿಸಿರುವುದು ಸಂತೋಷದ ವಿಚಾರವಾಗಿದೆ. ಇದರ ಭಾಗವಾಗಿ ವಿದ್ಯಾರ್ಥಿಗಳಿಗೆ ವಿಶೇಷವಾಗಿ ಯೋನೊ ಯಾಪ್ ಕುರಿತಾದ ತಿಳುವಳಿಕೆ ಮಹತ್ವದಾಗಿದ್ದು, ವಿದ್ಯಾರ್ಥಿಗಳು ಈ ಯಾಪ್ ತಮ್ಮ ಮೊಬೈಲ್ ಗಳಲ್ಲಿ ಅಳವಡಿಸುವದರ ಮೂಲಕ ಸುಗಮ ಮತ್ತು ಸುರಕ್ಷಿತ ಹಣಕಾಸು ವ್ಯವಹಾರ ನಡೆಸಬಹುದಾಗಿದೆ. ಮತ್ತು ತಮ್ಮ ದೈನಂದಿನ ವ್ಯವಹಾರಗಳನ್ನು ಪೂರೈಸಲು ಈ ಯಾಪ್ ವಿಶೇಷವಾಗಿ ನೇರವಾಗುತ್ತದೆ ಎಂದರು.

ಕಾಲೇಜಿನ ಉಪಪ್ರಾಚಾರ್ಯರಾದ ಪ್ರೊ. ವೇಣುಗೋಪಾಲ ನಾಯಕ ಜೇವರ್ಗಿ ಹಾಗೂ ಬ್ಯಾಂಕಿನ ಅಧಿಕಾರಿಗಳಾದ ನಿತೀಶ ಹಾಗೂ ನಾರಾಯಣ ಮತ್ತು ಮಹಾವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ಸಾಯಿಬಣ್ಣ ಮುಡಬೂಳ ವೇದಿಕೆಯಲ್ಲಿದ್ದರು.ಕಾರ್ಯಕ್ರಮದಲ್ಲಿ ಪ್ರೋ. ಎಮ್.ಡಿ ವಾರಿಸ್, ಪ್ರೊ. ರಾಜಶೇಖರ ಬಬನೂರ, ಪ್ರೊ. ಎಸ್.ಡಿ. ಭರ್ಧಿ, ಪ್ರೊ. ಸಿ.ಎಮ್. ಸುತಾರ, ಡಾ. ಶರಣಗೌಡ ಪಾಟಿಲ್,ಎಸ್.ಎಮ್. ಸಜ್ಜನ,ಶ್ರೀಶೈಲ,ಮಲ್ಹಾರಾವ ಕುಲ್ಕರ್ಣಿ,ಈರಣ್ಣ ಜಾಕಾ,ಯಲ್ಲಪ್ಪ,ಸಂತೋಷ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಡಾ. ಸಾಯಿಬಣ್ಣ ಎಮ್. ನಿರೂಪಿಸಿದರು, ಡಾ. ಸಿ.ಎಮ್. ಸುತಾರ ಸ್ವಾಗತಿಸದರು,ಶ್ರೀಶೈಲ ವಂದಿಸಿದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

3 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

19 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

21 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

21 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420