ಜುಲೈ 30ಕ್ಕೆ ಕಲಬುರಗಿ ಪಾಲಿಕೆಯ ಮೇಯರ್, ಉಪ ಮೇಯರ್ ಸ್ಥಾನಕ್ಕೆ ಚುನಾವಣೆ

ಕಲಬುರಗಿ: 55 ವಾರ್ಡಗಳು ಹೊಂದಿರುವ ಕಲಬುರಗಿ ಮಹಾನಗರ ಪಾಲಿಕೆಯ 22ನೇ ಅವಧಿಯ ಮೇಯರ್ ಮತ್ತು ಉಪಮೇಯರ್ ಸೇರಿ ನಾಲ್ಕು ಸ್ಥಾಯಿ ಸಮಿತಿಗಳ ಆಯ್ಕೆಗೆ ಜುಲೈ 30 ರಂದು ಚುನಾವಣೆ ಘೋಷಣೆ ಮಾಡಿ ಕಲಬುರಗಿ ಪ್ರದೇಶಿಕ ಆಯುಕ್ತರು ತಿಳುವಳಿಕೆ ಪತ್ರ ಹೊರಡಿಸಿದ್ದಾರೆ.

ಮೇಯರ್ ಹುದ್ದೆ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದು, ಉಪಮೇಯರ್ ಹುದ್ದೆ ಬಿಸಿಎ ವರ್ಗಕ್ಕೆ ಮೀಸಲಾಗಿದೆ. ಜುಲೈ 30 ರಂದು ಬೆಳಿಗ್ಗೆ 10:30ರೊಳಗೆ ಅಪಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಅಂದು 12 ಗಂಟೆಗೆ ನಗರದ ಟೌನ್ ಹಾಲ್ ನಲ್ಲಿ ಸದಸ್ಯರ ಹಾಜರಾತಿ ಪಡೆದು 12;30ರ ನಂತರ ನಾಮಪತ್ರ ಪರಿಶೀಲನೆ, ನಾಮಪತ್ರ ಮರಳಿ ಪಡೆಯಲು ಕಾಲಾವಕಾಶ ಹಾಗೂ ಅವಶ್ಯವಿದಲ್ಲಿ ಮತದಾನದ ಬಳಿಕ 6 ಸ್ಥಾನಗಳ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್ ಗೆ ಸಂಖ್ಯೆ ಬಲ: ಬಿಜೆಪಿಯ 22 ಪಾಲಿಕೆ ಸದಸ್ಯರು ಮತ್ತು ವಿಧಾನ ಪರಿಷತ್ ಸದಸ್ಯರು ಒಳಗೊಂಡಂತೆ 4 ಜನಪ್ರತಿನಿಧಿಗಳು ಮತ್ತು ಬಿಜೆಪಿಯ ಮಿತ್ರಪಕ್ಷ ಜೆಡಿಎಸ್ 4 ಪಾಲಿಕೆ ಸದಸ್ಯರ ಸಂಖ್ಯೆ ಸೇರಿ 30 ಸಂಖ್ಯೆ ಬಲ ಇದೆ. ಕಾಂಗ್ರೆಸ್ ನ 27 ಸದಸ್ಯರು ಮತ್ತು ಶಾಸಕರು, ಸಂಸದರು, ಹಾಗೂ ವಿಧಾನ ಪರಿಷತ ಸದಸ್ಯರು ಮತ್ತು ರಾಜ್ಯಸಭಾ ಸದಸ್ಯರು ಒಳಗೊಂಡಂತೆ 6 ಜನಪ್ರತಿನಿಧಿಗಳು ಸೇರಿ 33 ಸಂಖ್ಯೆ ಬಲ ಹೊಂದಿದೆ.

ಕಾಂಗ್ರೆಸ್ ನ 27 ಪಾಲಿಕೆ ಸದಸ್ಯರು ಮತ್ತು ಪಕ್ಷದ ಜನಪ್ರತಿನಿಧಿಗಳಾದ ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಧಾಕೃಷ್ಣ ದೊಡ್ಡಮನಿ, ಶಾಸಕರಾದ, ಕನೀಜ್ ಫಾತಿಮಾ, ಅಲ್ಲಮಪ್ರಭು ಪಾಟೀಲ್, ತಿಪ್ಪಣ್ಣಪ್ಪ ಕಮಕನೂರ ಹಾಗೂ ಡಾ. ಚಂದ್ರಶೇಖರ್ ಪಾಟೀಲ್ ಹುಮನಾಬಾದ್ ಮತದಾನ ಮಾಡಬಹುದಾಗಿದ್ದು, ಬಿಜೆಪಿಯ 22 ಪಾಲಿಕೆಯ ಸದಸ್ಯರು ಮತ್ತು ಪಕ್ಷದ ಶಾಸಕ ಬಸವರಾಜ ಮತ್ತಿಮುಡ್, ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ.ನಮೋಶಿ, ಸುನೀಲ್ ವಲ್ಲ್ಯಾಪುರೆ, ಬಿ.ಜಿ. ಪಾಟೀಲ ಮತದಾನದ ಅಧಿಕಾರ ಹೊಂದಿದ್ದಾರೆ.

ಸದಸ್ಯತ್ವವಿದ್ದರೂ ವಾರ್ಡ್ ಸದಸ್ಯ ಶಂಬುಲಿಂಗ ಬಳಬಟ್ಟಿಗೆ ಮತದಾನದ ಹಕ್ಕು ಇಲ್ಲ. 24ನೇ ವಾರ್ಡ್‌ನ ಪ್ರಿಯಾಂಕಾ ಭೋವಿ ಸದಸ್ಯತ್ವಕ್ಕೆ ತಡೆಯಾಜ್ಞೆ ಇರುವುದರಿಂದ ಮತದಾನ ಮಾಡುವಂತಿಲ್ಲ ಎಂದು ತಿಳಿದುಬಂದಿದೆ.

ಮೇಯರ್ ವಿಶಾಲ ದರ್ಗಿ ಮತ್ತು ಉಪಮೇಯರ್ ಶಿವಾನಂದ ಪಿಸ್ತಿ ಅವರ ಅಧಿಕಾರಾವಧಿಯು ಮಾರ್ಚ್ 23, 2023 ರಂದು ಕೊನೆಗೊಂಡಿದ್ದು, ನಗರದ ‘ಪ್ರಥಮ ಪ್ರಜೆ’ ಚುನಾವಣೆಗೆ ‘ಕಾಂಗ್ರೆಸ್’ ಮತ್ತು ‘ಬಿಜೆಪಿ’ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿ ನಡೆಯುತ್ತಿವೆ.

emedialine

Recent Posts

ಬಂದಾ ನವಾಜ್ ದರ್ಗಾಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಸಚಿವ ಜಮೀರ್ ಅಹ್ಮದ್ ಖಾನ್

ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…

14 hours ago

ಕಣ್ಣುಗಳನ್ನು ದಾನ ಮಾಡಿ ಅಂಧರ ಬಾಳಿಗೆ ಬೆಳಕಾಗಲು ಜಿ. ಪಂ. ಮಾಜಿ ಸದಸ್ಯೆ ಅನಿತಾ ವಳಕೇರಿ ಕರೆ

ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…

14 hours ago

ಲಿಂಗರಾಜ ಶಾಸ್ತ್ರಿ ಪುಣ್ಯಸ್ಮರಣೋತ್ಸವ: ಬಹುಮುಖ ವ್ಯಕ್ತಿತ್ವದ ಶಾಸ್ತ್ರಿ

ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್‌ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…

14 hours ago

ಕಲಬುರಗಿ: ನಕಲಿ ವೈದ್ಯರ ಹಾವಳಿ ತಡೆಯಲು ಆರೋಗ್ಯಧಿಕಾರಿಗೆ‌ ಮನವಿ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…

15 hours ago

ವೀ.ಲಿಂ.ಸಂಘಟನಾ ವೇದಿಕೆ ವಿದ್ಯಾರ್ಥಿ ಘಟಕದ ಅಧ್ಯಕ್ಷ ಬಸವರಾಜ ಶೆಳ್ಳಗಿ

ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…

15 hours ago

ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯ ವಿಶ್ವ ಓಜೋನ್ ದಿನ

ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…

15 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420