ಶಾಂತಿ-ಸುವ್ಯವಸ್ಥೆಗೆ ಧಕ್ಕೆ ಕಠಿಣ ಕ್ರಮ:ಡಿವೈಎಸ್.ಪಿ ಎಚ್ಚರಿಕೆ

ವಾಡಿ; ಮೊಹರಂ ಹಬ್ಬವು ಅಸಂಖ್ಯಾತ ಹಿಂದೂ–ಮುಸ್ಲಿಮ್‌ ರ ಸೌಹಾರ್ದತೆಯ ಸಂಕೇತವಾಗಿದೆ. ಯಾವುದೇ ಕ್ಷುಲ್ಲಕ ವಿಷಯ, ಹಳೆವೈಷಮ್ಯದ ಕಾರಣದಿಂದ ಹಿಂಸಾಚಾರಕ್ಕೆ ಉತ್ತೇಜನ ನೀಡಿದರೆ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮಜರುಗಿಸಲಾಗುವುದು. ಎಂದು ಶಹಾಬಾದ್ ಪೊಲೀಸ್ ವಿಭಾಗದ ಡಿವೈಎಸ್.ಪಿ ಶಂಕರಗೌಡ ಪಾಟೀಲ ಹೇಳಿದರು.

ಪಟ್ಟಣ ಸಮೀಪದ ಇಂಗಳಗಿ ಗ್ರಾಮದಲ್ಲಿ ಮೊಹರಂ ಹಬ್ಬದ ಪ್ರಯುಕ್ತ ಆಯೋಜಿಸಿದ ಕಾನೂನು ಅರಿವು ಮತ್ತು ಸಾರ್ವಜನಿಕ ಜನ ಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು. ನಮ್ಮ ದೇಶದಲ್ಲಿ ಹಬ್ಬಗಳು ಭಾವೈಕ್ಯತೆಯ ಸಂಕೇತವಾಗಿವೆ. ಯಾವುದೇ ಜಾತಿ, ಧರ್ಮ ಎನ್ನದೇ ಎಲ್ಲರೂ ಸೇರಿ ಸಮಸ್ಯೆಯಾಗದಂತೆ ಹಬ್ಬ ಆಚರಿಸಬೇಕು. ಕೋಮು ಗಲಾಭೆಗೆ ಅವಕಾಶ ನೀಡಬಾರದು ಎಂದು ಗ್ರಾಮಸ್ಥರಿಗೆ ಸಲಹೆ ನೀಡಿದರು.

ಅಕ್ರಮ ಗಾಂಜಾ ದಂಧೆಗೆ ತಡೆ; ಶಾಲೆ ಕಾಲೇಜು ಬಳಿ ಹುಡುಗಿಯರನ್ನು ರೇಗಿಸುವ ಕಿಡಿಗೇಡಿಗಳ ಮತ್ತು ಗಾಂಜಾ ಮಾರಾಟಕ್ಕೆ ಕಡಿವಾಣ ಹಾಗೂ ಗ್ರಾಮೀಣ ಭಾಗದ ಸಾಕು ಪ್ರಾಣಿಗಳ ಕಳವು ನಿಯಂತ್ರಣಕ್ಕೆ ಗಸ್ತು ವ್ಯವಸ್ಥೆ ಹೆಚ್ಚಿಸಲಾಗಿದೆ. ತುರ್ತು ಸಂದರ್ಭದಲ್ಲಿ ಸಹಾಯವಾಣಿ 112 ಸಂಖ್ಯೆಗೆ ಕರೆಮಾಡಿದರೆ ಪೊಲೀಸ್‌ ಸಿಬ್ಬಂದಿ ಸ್ಪಂದಿ ತಕ್ಷಣ ಸ್ಪಂದಿಸುತ್ತಾರೆ. ಅನೈತಿಕ ಮತ್ತು ಅಕ್ರಮ ಚಟುವಟಿಕೆಗಳ ಮಾಹಿತಿ ನೀಡಿ ಗೋಪ್ಯತೆ ಇರಲಿದೆ. ಸಿಸಿಟಿವಿ ಕ್ಯಾಮೆರಾ ಅಳವಡಿಕೆಗೆ ಸ್ಥಳೀಯ ಆಡಳಿತ ಹಾಗೂ ಸಾರ್ವಜನಿಕರೇ ಮುಂದಾಗಬೇಕು ಎಂದು ಸರ್ಕಲ್ ಇನ್ಸ್.ಪೆಕ್ಟರ್ ಚಂದ್ರಶೇಖರ ತಿಗಡಿ ಹೇಳಿದರು.

ಸಾರ್ವಜನಿಕರ ಹಿತದೃಷ್ಟಿಯಿಂದ ಅತಿ ಸೂಕ್ಷ್ಮ ಇರುವ ಗ್ರಾಮಗಳಲ್ಲಿ ವಿವಿಧ ರೀತಿಯ ಅಪರಾಧಗಳ ಕುರಿತು ಜನಸಾಮಾನ್ಯರಿಗೆ ಕಾನೂನು ಅರಿವು ಮೂಡಿಸಲು, ಸಾರ್ವಜನಿಕ ಜನ ಸಂಪರ್ಕ ಸಭೆ ನಡೆಸಲಾಗುತ್ತಿದೆ. ಇದರಲ್ಲಿ ಡಿವೈಎಸ್.ಪಿ ಸೇರಿದಂತೆ ಇಡೀ ಆಯಾ ಭಾಗದ ಪೊಲೀಸ್ ಇಲಾಖೆ ಸಿಬ್ಬಂದಿ ಭಾಗವಹಿಸುತ್ತಾರೆ. ಯಾವುದೇ ಸಮಸ್ಯೆ ಇದ್ದರೇ ಸ್ಥಳದಲ್ಲೇ ಬಗೆಹರಿಸಲಾಗುತ್ತದೆ ಎಂದು ಶಂಕರಗೌಡ ಪಾಟೀಲ ತಿಳಿಸಿದರು.

ಅಗತ್ಯಕ್ಕಿಂತ ಹೆಚ್ಚು ಚಿನ್ನಾಭರಣ, ಹಣ ಇದ್ದರೇ ಯಾವುದೇ ಕಾರಣಕ್ಕೆ ಮನೆಯಲ್ಲಿ ಇಡಬಾರದು. ಬ್ಯಾಂಕ್ ಸೇಫರ್ ಲಾಕರ್ ನಲ್ಲಿ ಇಡಬೇಕು. ಬಹುತೇಕ ಅಪಘಾತಗಳಿಗೆ ದ್ವಿಚಕ್ರ ವಾಹನಗಳೇ ಕಾರಣವಾಗುತ್ತಿವೆ. ವಾಹನ ಖರೀದಿಸುವಾಗ ಮಾಲೀಕರು ಅಗತ್ಯ ದಾಖಲೆಗಳನ್ನು ಪರಿಶೀಲನೆ ಮಾಡಿ, ಖರೀದಿ ಮಾಡಬೇಕು ಹಾಗೆ ಪ್ರಭುತ್ವ ಹೊಂದದ ಮಕ್ಕಳಿಗೆ ವಾಹನ ನೀಡಿದರೇ ಪಾಲಕರ ವಿರುದ್ಧವೇ ಪ್ರಕರಣ ದಾಖಲಿಸಲಾಗುತ್ತದೆ. ಎಂದು ಎಚ್ಚರಿಕೆ ನೀಡಿದರು.

ವಾಡಿ ಪೊಲೀಸ್ ಠಾಣೆ ಸಬ್.ಇನ್ಸ್.ಪೆಕ್ಟರ್ ಕೆ.ತಿರುಮಲೇಶ ಮಾತನಾಡಿದರು. ಗ್ರಾಮದ ಮುಖಂಡರಾದ ಅಣ್ಣರಾಣ ಪಾಟೀಲ, ಬಸವರಾಜ ಸ್ಥಾವರಮಠ, ಗ್ರಾಂ.ಪಂಚಾಯಿತಿ ಅಧ್ಯಕ್ಷೆ ಅನಿತಾ ನಾಟೀಕಾರ, ಕಾರ್ಯದರ್ಶಿ ಸಂಗಮೇಶ ಹೀರೆಮಠ, ಗೌಸ್ ದುದ್ದನಿ, ಮಲ್ಲಿಕಾರ್ಜುನ ಸಿಮಿ, ಮಲ್ಲಪ್ಪ ನಾಟೀಕಾರ, ಸಮದ್, ಬಬಲು ಮುಲ್ಲಾ, ಕಲ್ಲಪ್ಪ ನಾಟೀಕಾರ, ಸಾಬಣ್ಣಾ ಪೂಜಾರಿ, ಶ್ರೀಶೈಲ ನಾಟೀಕಾರ ನಿರೂಪಿಸಿ ವಂದಿಸಿದರು.

emedialine

Recent Posts

ಬಂದಾ ನವಾಜ್ ದರ್ಗಾಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಸಚಿವ ಜಮೀರ್ ಅಹ್ಮದ್ ಖಾನ್

ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…

1 hour ago

ಕಣ್ಣುಗಳನ್ನು ದಾನ ಮಾಡಿ ಅಂಧರ ಬಾಳಿಗೆ ಬೆಳಕಾಗಲು ಜಿ. ಪಂ. ಮಾಜಿ ಸದಸ್ಯೆ ಅನಿತಾ ವಳಕೇರಿ ಕರೆ

ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…

1 hour ago

ಲಿಂಗರಾಜ ಶಾಸ್ತ್ರಿ ಪುಣ್ಯಸ್ಮರಣೋತ್ಸವ: ಬಹುಮುಖ ವ್ಯಕ್ತಿತ್ವದ ಶಾಸ್ತ್ರಿ

ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್‌ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…

1 hour ago

ಕಲಬುರಗಿ: ನಕಲಿ ವೈದ್ಯರ ಹಾವಳಿ ತಡೆಯಲು ಆರೋಗ್ಯಧಿಕಾರಿಗೆ‌ ಮನವಿ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…

2 hours ago

ವೀ.ಲಿಂ.ಸಂಘಟನಾ ವೇದಿಕೆ ವಿದ್ಯಾರ್ಥಿ ಘಟಕದ ಅಧ್ಯಕ್ಷ ಬಸವರಾಜ ಶೆಳ್ಳಗಿ

ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…

2 hours ago

ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯ ವಿಶ್ವ ಓಜೋನ್ ದಿನ

ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420