ಕಲಬುರಗಿ; ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ನಿಯಂತ್ರಣ ನಿಟ್ಟಿನಲ್ಲಿ ಜುಲೈ 13 ಶನಿವಾರ ಬೆಳಿಗ್ಗೆ 8 ಗಂಟೆಗೆ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ಸೊಳ್ಳೆಗಳ ಮೂಲ ತಾಣಗಳನ್ನು ಸಂಪೂರ್ಣವಾಗಿ ನಾಶಪಡಿಸುವ ಅಭಿಯಾನದಲ್ಲಿ ಎಲ್ಲರು ಭಾಗಿಯಾಗಬೇಕು ಎಂದು ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಕರೆ ನೀಡಿದರು.
ಶುಕ್ರವಾರ ವಿಡಿಯೋ ಕಾನ್ಫೆರೆನ್ಸ್ ಮೂಲಕ ಆರೋಗ್ಯ ಇಲಾಖೆ ಸೇರಿದಂತೆ ಜಿಲ್ಲಾ ಪಂಚಾಯತ್ ಅಧೀನದ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಸಾಮಾನ್ಯವಾಗಿ ಈಡಿಸ್ ಸೊಳ್ಳೆಗಳು ದಿನದಲ್ಲಿ ಕಚ್ಚುತ್ತವೆ. ದಿನದಲ್ಲಿ ಬಹುತೇಕರು ತಮ್ಮ ತಮ್ಮ ಕಚೇರಿ, ಕಾರ್ಖಾನೆ, ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಾರೆ. ಮಕ್ಕಳು ಶಾಲಾ-ಕಾಲೇಜುಗಳಲ್ಲಿ ಇರುವುದರಿಂದ ಇಲ್ಲಿಯೆ ಡೆಂಗ್ಯೂ ಹರಡುವ ಸಾಧ್ಯತೆ ಹೆಚ್ಚಿದ್ದು, ಹೀಗಾಗಿ ಇಲ್ಲಿಂದ ಸೊಳ್ಳೆಗಳ ತಾಣ ನಿರ್ಮೂಲನೆಗೆ ಸರ್ವರು ಕೈ ಜೋಡಿಸಬೇಕೆಂದರು.
ಸಭೆಯಲ್ಲಿ ಡಿ.ಎಚ್.ಓ ಡಾ.ರತಿಕಾಂತ ಸ್ವಾಮಿ ಸೇರಿದಂತೆ ತಾಲೂಕಾ ಪಂಚಾಯತ್ ಇ.ಓ ಗಳು, ಟಿ.ಎಚ್.ಓ ಗಳು ಹಾಗೂ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳಿದ್ದರು.
ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನ ರುದ್ರವಾಡಿ ಗ್ರಾಮದ ಬೆಂಗಳೂರಿನ ವಿಜಯನಗರ ನಿವಾಸಿ ಆಯುಶ್ ಡಿಗ್ಗಿ ರಾಜ್ಯ ಮಟ್ಟದ ಅಥ್ಲೇಟಿಕ್ಸನಲ್ಲಿ ಚಿನ್ನದ…
ಕಲಬುರಗಿ: ಶ್ರಾವಣ ಮಾಸದಲ್ಲಿ ಸತ್ಪುರುಷರ ಚರಿತ್ರೆ ಆಲಿಸುವುದರಿಂದ ಮನದ ಮೈಲಿಗೆ ದೂರವಾಗುತ್ತದೆ ಎಂದು ಶರಣಬಸವೇಶ್ವರ ಕಲಾ ಮಹಾವಿದ್ಯಾಲಯದ ಹಿರಿಯ ಪ್ರಾಧ್ಯಾಪಕ…
ಕಲಬುರಗಿ: ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಎಸ್ ನಿಜಲಿಂಗಪ್ಪ ದಂತ ಮಹಾವಿದ್ಯಾಲಯ ಸಂಯುಕ್ತ ಆಶ್ರಯದಲ್ಲಿ.…
ಸೇಡಂ: ಯಾದಗಿರ ನಗರ ಠಾಣೆ ಪಿಎಸ್ಐ ಸಾವಿನ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಸಾಮಾಜಿಕ ಕಾರ್ಯಕರ್ತರಾದ ಸಂತೋಷ ಜಾಬೀನ್ ಅವರು…
ಕಲಬುರಗಿ: ಶರಣರಂತೆ ನೈಜತೆಯನ್ನು ಪ್ರತಿಯೋಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ನೆಮ್ಮದಿ ಸಾಧ್ಯ.ಶರಣರ ಚಿಂತನೆಗಳು ಇಂದಿಗೂ ಪ್ರಸ್ತುತ ಎಂದು ಶಾಸಕ ಅಲ್ಲಮಪ್ರಭು…
ಶಹಾಬಾದ: ಬಂಡವಾಳಶಾಹಿ ವಿರೋಧಿ ಸಮಾಜವಾದಿ ಕ್ರಾಂತಿಯಿಂದಲೇ ಮಾತ್ರ ಜನಸಾಮಾನ್ಯರ ಸಮಸ್ಯೆಗಳಿಗೆ ವಿಮುಕ್ತಿ ಕಾಣಬಹುದು ಎಂದುಎಸ್ಯುಸಿಐ (ಸಿ) ಪಕ್ಷದ ರಾಜ್ಯ ಸಮಿತಿಯ…