ಕಲಬುರಗಿ: ಜಿಲ್ಲೆಯ ಶಹಾಬಾದ ತಾಲೂಕಿನ ರಾವೂರ ಗ್ರಾಮದ ಶ್ರೀ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ಚುನಾವಣಾ ಸಾಕ್ಷರತ ಕ್ಲಬ್ ವತಿಯಿಂದ ತರಗತಿ ನಾಯಕತ್ವಕ್ಕಾಗಿ ಮಕ್ಕಳ ಚುನಾವಣೆ ನಡೆಯಿತು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಹೇಗೆ ನಡೆಯುತ್ತವೆ ಎನ್ನುವುದನ್ನು ಶಾಲಾ ಹಂತದಲ್ಲೇ ತಿಳಿಸಲು ಮತ್ತು ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಸಲು ಪ್ರತಿ ವರ್ಷ ಇಂತಹ ಪ್ರಯೋಗವನ್ನ ಮಾಡಲಾಗುತ್ತಿದೆ. ಈ ವರ್ಷ ಇವಿಎಂ ಬಳಸಿ ಚುನಾವಣೆ ಮಾಡಲಾಯಿತು. ಒಟ್ಟು 537 ಮತಗಳಲ್ಲಿ 515 ಮತಗಳು ಚಲಾವಣೆಯದವು. 96 ಪ್ರತಿಶತ ಮತದಾನವಾಯಿತು.
ಮತದಾನದ ನಂತರ ಗೆದ್ದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ನೀಡಿ ಅಭಿನಂದಿಸಲಾಯಿತು. ಪ್ರಮಾಣ ವಚನ ಬೊಧಿಸಿ ಕರ್ತವ್ಯ ನಿರ್ವಹಣೆ ಹೇಗೆ ಮಾಡಬೇಕೆಂದು ಹೇಳಲಾಯಿತು.
ಸಂಸ್ಥೆಯ ಅಧ್ಯಕ್ಷ ಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು, ಕಾರ್ಯದರ್ಶಿ ಡಾ. ಗುಂಡಣ್ಣ ಬಾಳಿ ಚುನಾವಣೆಯ ಎಲ್ಲಾ ಪ್ರಕ್ರಿಯೆಗಳನ್ನು ವೀಕ್ಷಿಸಿ ಶಿಕ್ಷಕ ಶ್ರಮಕ್ಕೆ ಮೆಚ್ಚುಗೆ ಸೂಚಿಸಿದರು. ನಂತರ ಮಾತನಾಡಿ ಪೂಜ್ಯರು ಇಂತಹ ಚುನಾವಣೆಗಳ ಮೂಲಕ ಮಕ್ಕಳಲ್ಲಿ ಕಲಿಕೆಯ ಆಸಕ್ತಿಯನ್ನು ಬೆಳೆಸುವ ಜೊತೆಗೆ ಚುನಾವಣೆ ಅರಿವು ಬೆಳೆಸಿಕೊಳ್ಳಲು ಅಗತ್ಯ. ಮಕ್ಕಳು ಮತದಾನದ ಮಹತ್ವ ಅರ್ಥಮಾಡಿಕೊಳ್ಳಬೇಕು. ಪ್ರತಿಯೊಬ್ಬರೂ ಮತ ಚಲಾಯಿಸಬೇಕೆಂಬ ಜ್ಞಾನ ಹೊಂದಬೇಕು ಎಂದು ಹೇಳಿದರು.
ಶಿಕ್ಷಕ ಸಿದ್ದಲಿಂಗ ಬಾಳಿ ಚುನಾವಣೆ ಪ್ರಕ್ರಿಯೆ ನಡೆಸಿಕೊಟ್ಟರು. ಶಿಕ್ಷಕರಾದ ವಿದ್ಯಾಧರ ಖಂಡಳ, ಈಶ್ವರಗೌಡ ಪಾಟೀಲ್, ಶಿವಕುಮಾರ್ ಸರಡಗಿ, ಅನಿಲ್, ಬಸವರಾಜ್, ರವಿ, ಸುಗುಣಾ, ಭುವನೇಶ್ವರಿ, ರಾಧಾ, ಗೀತಾ, ಮಂಜಳಾ, ಭಾರತಿ ಸೇರಿದಂತೆ ಶಿಕ್ಷಕರು ಮಕ್ಕಳು ಪಾಲ್ಗೊಂಡಿದ್ದರು.
ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…
ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…
ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…
ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…
ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…