ದಲಿತ ವಿಮೋಚನಾ ಸೇನೆ ತಾಲೂಕ ಅಧ್ಯಕ್ಷರಾಗಿ ಶರಣು ಅನಸೂರ ನೇಮಕ

ಸುರಪುರ: ನಗರದ ದೀವಳಗುಡ್ಡದಲ್ಲಿಯ ದಲಿತ ವಿಮೋಚನಾ ಸೇನೆ ಸಂಘಟನೆಯ ಜಿಲ್ಲಾ ಕಾರ್ಯಾಲಯದಲ್ಲಿ ಜಿಲ್ಲಾಧ್ಯಕ್ಷ ಚಂದ್ರಶೇಖರ ಕವಡಿಮಟ್ಟಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಸಂಘಟನೆಯ ತಾಲೂಕ ಅಧ್ಯಕ್ಷರನ್ನಾಗಿ ನ್ಯಾಯವಾದಿ ಶರಣಪ್ಪ ಅನಸೂರ ಅವರನ್ನು ನೇಮಕಗೊಳಿಸಲಾಗಿದೆ.

ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧ್ಯಕ್ಷ ಚಂದ್ರಶೇಖರ ಕವಡಿಮಟ್ಟಿ ಮಾತನಾಡಿ,ಇಂದು ದೇಶದಲ್ಲಿನ ದಲಿತ ಶೋಷಿತರ ಸ್ಥಿತ ಗಂಭೀರವಾಗಿದೆ.ಆಡಳಿತ ನಡೆಸುವ ಸರಕಾರಗಳು ದಲಿತರ ಏಳಿಗೆಗೆ ಯಾವುದೇ ಯೋಜನೆಗಳನ್ನು ನೀಡುತ್ತಿಲ್ಲ.ಅಲ್ಲದೆ ನಮಗೆ ಸಂವಿಧಾನ ಬದ್ಧವಾಗಿ ಸಿಗಬೇಕಾದ ಸೌಲಭ್ಯಗಳು ಸಿಗುತ್ತಿಲ್ಲ,ಇವುಗಳನ್ನು ಪಡೆದುಕೊಳ್ಳಲು ನಾವೆಲ್ಲರು ಸಂಘಟಿತರಾಗಿ ಹೋರಾಟ ಮಾಡುವ ಅನಿವಾರ್ಯವಿದೆ.ಆದ್ದರಿಂದ ಇಂದು ನಮ್ಮ ದಲಿತ ವಿಮೋಚನಾ ಸೇನೆಯ ಸುರಪುರ ತಾಲೂಕ ಘಟಕ ರಚನೆ ಮಾಡಲಾಗಿದ್ದು,ನೂತನ ಅಧ್ಯಕ್ಷರನ್ನಾಗಿ ವಕೀಲ ಶರಣಪ್ಪ ಅನಸೂರ ಅವರನ್ನು ನೇಮಕಗೊಳಿಸಲಾಗಿದ್ದು.ಮುಂದಿನ ದಿನಗಳಲ್ಲಿ ತಾಲೂಕಿನಾದ್ಯಂತ ಸಂಘಟನೆಯನ್ನು ಬಲಪಡಿಸುವಂತೆ ಕರೆ ನೀಡಿದರು.

ಇದೇ ಸಂದರ್ಭದಲ್ಲಿ ನೂತನ ತಾಲೂಕ ಅಧ್ಯಕ್ಷ ಶರಣಪ್ಪ ಅನಸೂರಗೆ ಸನ್ಮಾನಿಸಿ ನೇಮಕಾತಿ ಪತ್ರವನ್ನು ನೀಡಿ ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಡಿ.ಜಿ ಸಾಗರ ಬಣದ ಜಿಲ್ಲಾ ಸಂಘಟನಾ ಸಂಚಾಲಕ ಶಿವಲಿಂಗ ಹಸನಾಪುರ,ಅಹಿಂದ ಸಂಘಟನೆ ತಾಲೂಕ ಅಧ್ಯಕ್ಷ ಚನ್ನಪ್ಪ ಎಲಿಗಾರ,ಮುಖಂಡರಾದ ನಾಗರಾಜ ಪೂಜಾರಿ ತಿಮ್ಮಾಪುರ,ಭೀಮರಾಯ ಕಡಿಮನಿ ಲಕ್ಷ್ಮೀಪುರ,ಚಂದ್ರಶೇಖರ ವಾಯ್.ದೊಡ್ಮನಿ,ಬಸವರಾಜ ದೊಡ್ಮನಿ ಹಂಧ್ರಾಳ ಸೇರಿದಂತೆ ಅನೇಕರಿದ್ದರು.

emedialine

Recent Posts

ರಾವೂರ ಮಕ್ಕಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಲಬುರಗಿ: ರಾವೂರ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯ ವಿವೇಕಾನಂದ ಪ್ರಾಥಮಿಕ ಮತ್ತು ಸಚ್ಚಿದಾನಂದ ಪ್ರೌಢ ಶಾಲೆಯ ಮಕ್ಕಳು ತಾಲೂಕ…

23 mins ago

ಜೀ಼ ಕನ್ನಡದ ಸರಿಗಮಪ ಆಡಿಷನ್ ಕಲಬುರಗಿಯಲ್ಲಿ ಇದೇ ಶನಿವಾರದಂದು

  ನಿಮ್ಮ ಕನಸಿಗೆ ರೆಕ್ಕೆ ಕಟ್ಟಲು ನಿಮ್ಮೂರಿಗೂ ಬರ್ತಿದೆ ಸರಿಗಮಪ ಆಡಿಷನ್, ತನ್ನ ವಿಭಿನ್ನ ರಿಯಾಲಿಟಿ ಶೋಗಳ ಮೂಲಕ ಸಾಕಷ್ಟು…

53 mins ago

ಅತಿವೃಷ್ಟಿ ಬೆಳೆ ಹಾನಿ ಪರಿಹಾರ ಕೊಡಿ: ಮುಖ್ಯಮಂತ್ರಿಗಳಿಗೆ ಪ್ರಾಂತ ರೈತ ಸಂಘದ ಆಗ್ರಹ

ಕಲಬುರಗಿ: ಅತಿವೃಷ್ಟಿ ಮಳೆಯಿಂದ ಹಾನಿಯಾದ ಉದ್ದು, ಹೆಸರು, ತೊಗರಿ ಬೆಳೆ ನಷ್ಟವಾಗಿದ್ದು, ಉತ್ಪಾದನೆ ಆಧಾರದಲ್ಲಿ ಪರಿಹಾರ ಕೊಡುವಂತೆ ಹಾಗೂ ಕಬ್ಬಿನ ಬಾಕಿ…

13 hours ago

ಯುವಜನ ಒಕ್ಕೂಟದಿಂದ 76 ನೇ ಕಲ್ಯಾಣ ಕರ್ನಾಟಕ ಸ್ವಾತಂತ್ರೋತ್ಸವ ಆಚರಣೆ

ಕಲಬುರಗಿ: ಸರದಾರ ವಲ್ಲಭಭಾಯಿ ಪಟೇಲ ರ ಮೂರ್ತಿಗೆ ಮಾಲಾರ್ಪಣೆ ಮತ್ತು ರಾಷ್ಟ್ರೀಯ ಗೀತೆ ವಾಚಿಸುವ ಮೂಲಕ ನೈಜ ಕ. ಕ.…

13 hours ago

ಸೆ.19 ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಚಿತ್ತಾಪುರ: ಪಟ್ಟಣದ ಕ್ರೀಡಾಂಗಣದಲ್ಲಿ 2024-25 ನೇ ಸಾಲಿನ ಚಿತ್ತಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ.19 ರಂದು ಆಯೋಜಿಸಲಾಗಿದೆ ಎಂದು…

13 hours ago

ಕೆಎಎಸ್‌ಎಸ್‌ಐಎಗೆ ನಿಜಾಮೋದ್ದಿನ್ ಚಿಸ್ತಿ ನಾಮನಿರ್ದೇಶನ

ಚಿತ್ತಾಪುರ: ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಸಂಘಕ್ಕೆ 2024-25 ನೇ ಸಾಲಿಗಾಗಿ ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತರಾಗಿ ಸೈಯದ್ ನಿಜಾಮೋದ್ದಿನ್…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420