ಕಲಬುರಗಿಯ ಸುಪ್ರಭಾ ಆಚಾರ್ಯಗೆ ಸಿಎ ಪದವಿ ಅಭಿನಂದನೆ

0
95

ಕಲಬುರಗಿ: ಈ ಬಾರಿಯ ವೃತ್ತಿಪರ ಲೆಕ್ಕಪರಿಶೋಧಕರ (ಚಾರ್ಟೆರ್ಡ್ ಅಕೌಂಟೆಂಟ್ ಸಿ ಎ) ಪರೀಕ್ಷೆಯಲ್ಲಿ ಕಲಬುರ್ಗಿಯ ಶ್ರೀನಿವಾಸ್ ಆಚಾರ್ಯ ಮತ್ತು ಲತಾ ಆಚಾರ್ಯ ಅವರ ಸುಪುತ್ರಿ ಸುಪ್ರಭಾ ಆಚಾರ್ಯ ತೇರ್ಗಡೆ ಹೊಂದಿ ಕಲಬುರಗಿಗೆ ಕೀರ್ತಿ ತಂದಿದ್ದಾರೆ.

ನಗರದ ಶ್ರೀರಾಮ ಮಂದಿರ ಮತ್ತು ಮೋಹನ್ ಲಾಡ್ಜ್ ನ ಶ್ರೀನಿವಾಸ ಆಚಾರ್ಯ ಅವರ ಪುತ್ರಿ ಸುಪ್ರಭಾ ಅವರು ಸೈಂಟ್ ಮೇರಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಮುಗಿಸಿ ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಕಾಮರ್ಸ್ ಅಧ್ಯಯನ ಮಾಡಿ ನಂತರ ಪುಣೆಯಲ್ಲಿ ಐಪಿಪಿ ಕೋರ್ಸ್ ಮುಗಿಸಿ ಚಾರ್ಟರ್ಡ್ ಅಕೌಂಟೆಂಟ್ ಪರೀಕ್ಷೆಯನ್ನು ತೇರ್ಗಡೆ ಹೊಂದಿದ್ದಾರೆ. ಸದ್ಯ ಬೆಂಗಳೂರಿನಲ್ಲಿ ಕಂಪನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ.

Contact Your\'s Advertisement; 9902492681

ಸಿಎ ಸುಪ್ರಭಾ ಆಚಾರ್ಯ ಅವರ ಯಶಸ್ಸಿಗೆ ಆಕಾಶವಾಣಿಯ ನಿವೃತ್ತ ಹಿರಿಯ ಕಾರ್ಯಕ್ರಮ ನಿರ್ವಹಣಾಧಿಕಾರಿ ಡಾ. ಸದಾನಂದ ಪೆರ್ಲ, ಉಡುಪಿಯ ರಮಣ ಆಚಾರ್ಯ, ಮಾಧವ ಆಚಾರ್ಯ ಕಲ್ಬುರ್ಗಿ ಜಿಲ್ಲಾ ಹೋಟೆಲ್ ಅಸೋಸಿಯೇಷನ್ ಕಾರ್ಯದರ್ಶಿ ನರಸಿಂಹ ಮೆಂಡನ್, ಶ್ರೀಮತಿ ಸವಿತಾ ಸತೀಶ್ ಗುತ್ತೇದಾರ್, ಬ್ರಹ್ಮಶ್ರೀ ನಾರಾಯಣ ಗುರು ಟ್ರಸ್ಟ್ ನ ಅಧ್ಯಕ್ಷರಾದ ವೆಂಕಟೇಶ ಕಡೇಚೂರ್, ದಯಾನಂದ ಪೂಜಾರಿ, ಮೈಕಾನ, ಪ್ರಮೀಳಾ ಪೆರ್ಲ,ಆಶಾ ಮೋಹನ್ ಬೆಂಗಳೂರು,ಪದ್ಮನಾಭ ಭಟ್, ರಾಮ ಮಂದಿರದ ಮ್ಯಾನೇಜರ್ ನಿರಂಜನರಾವ್, ಗುರು ಆಚಾರ್ಯ, ರಾಮಕೃಷ್ಣ ಕೆದಿಲಾಯ, ಎಂ.ಎನ್.ಎಸ್ ಶಾಸ್ತ್ರಿ ಮತ್ತಿತರರು ಶುಭ ಕೋರಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here