ಬಿಸಿ ಬಿಸಿ ಸುದ್ದಿ

ಆದರ್ಶದ ಬದುಕಿಗೆ ಯಾವೊತ್ತೂ ಬೆಲೆ: ಮಹಾಂತ ಸ್ವಾಮೀಜಿ

ಕಲಬುರಗಿ: ಮನುಷ್ಯ ಆದರ್ಶದ ಬದುಕನ್ನು ಕಳೆದಾಗ ಬೆಲೆಯುಳ್ಳ ಬದುಕಾಗುತ್ತದೆ. ಆಗ ಆ ಬದುಕಿಗೆ ಮೌಲ್ಯ, ಅರ್ಥ ಬರುತ್ತದೆ ಎಂದು ಮುದಗಲ್- ತಿಮ್ಮಾಪುರ ಕಲ್ಯಾಣಾಶ್ರಮದ ಮಹಾಂತ ಸ್ವಾಮೀಜಿ ನುಡಿದರು.

ಹಾಗರಗಾ ಗ್ರಾಮದ ಲಿಂ.ಗಂಗಮ್ಮ ಹಾಗೂ ಲಿಂ. ಬಸವಣ್ಣಪ್ಪ ಕೇಸೂರ ಸ್ಮರಣಾರ್ಥ ಇಲ್ಲಿನ ಜಯನಗರದ ಬಸವ ಸಮಿತಿಯ ಅನುಭವ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ ೮೦೮ನೇ ಅರಿವಿನ‌ ಮನೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಬಡ, ದೀನ-ದಲಿತರಲ್ಲದೆ ಅನ್ಯ ಕೋವಿನವರಿಗೂ ಸಹಾಯ ಸಹಕಾರ ಮಾಡಿದ ಕೇಸೂರ ಮನೆತನ ನಿಜಕ್ಕೂ ಕಲ್ಯಾಣ ಕಾರ್ಯಕ್ಕೆ ಹೆಸರಾಗಿದೆ ಎಂದರು.

ಪರಸ್ಪರ ದ್ವೇಷಾಸೂಹೆಗಳಿಂದ ಕೂಡಿರುವ ಈ ಸಮಾಜದಲ್ಲಿ ಮನುಷ್ಯ ಮನುಷ್ಯರನ್ನು ಪ್ರೀತಿಸುವ, ಗೌರವಿಸುವ, ಸೌಹಾರ್ದಯುತವಾಗಿ ಬಾಳಿ ಬದುಕುವ ಮಾನವೀಯ ಮೌಲ್ಯಗಳನ್ನು ಸಮಾಜದಲ್ಲಿ ಬಿತ್ತುವ ಕಾರ್ಯ ಆಗಬೇಕು ಎಂದು ಅವರು ತಿಳಿಸಿದರು.

ಹಿರಿಯರ ಸ್ಮರಣೆಯನ್ನು ಕೇವಲ ಕುಟುಂಬಕ್ಕೆ ಮಾತ್ರ ಸೀಮಿತಗೊಳಿಸದೆ ಆ ನಿಮಿತ್ತ ಜವರಿಗೆ ಅನ್ನ ದಾಸೋಹ ಮತ್ತು ಜ್ಞಾನದಾಸೋಹ ಮಾಡುತ್ತಿರುವ ಅವರ ಮಕ್ಕಳು ಮಾದರಿ ಕಾರ್ಯ ಮಾಡುವ ಮೂಲಕ ಹಿರಿಯರ ಸ್ಮರಣೆಯನ್ನು ಬಹಳಷ್ಟು ಅರ್ಥಪೂರ್ಣವಾಗಿ ಮಾಡುತ್ತಿದ್ದಾರೆ. ತ್ತಮ ವಿಚಾರ, ಸಂಸ್ಕೃತಿಯನ್ನು ಹಂಚುವುದು, ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.

ಬಸವ ಸಮಿತಿ ಅಧ್ಯಕ್ಷೆ ಡಾ. ವಿಲಾಸವತಿ ಖೂಬಾ ಅಧ್ಯಕ್ಷತೆ ವಹಿಸಿದ್ದರು. ಎಚ್‌.ಕೆ. ಉದ್ದಂಡಯ್ಯ ನಿರೂಪಿಸಿದರು. ಬಸವ ಸಮಿತಿ ಪ್ರಧಾನ ಕಾರ್ಯದರ್ಶಿ ಬಂಡಪ್ಪ ಕೇಸೂರ, ದತ್ತಿ, ದಾಸೋಹಿಗಳಾದ ಚಿತ್ರಶೇಖರ ಬಸವಣ್ಣಪ್ಪ ಪರಿವಾರದವರು, ಸಂಗೀತ ಕಲಾವಿದರು ಇದ್ದರು.

ಡಾ. ಮಲ್ಲಿಕಾರ್ಜುನ ವಡ್ಡನಕೇರಿ, ಡಾ. ಶಿವರಂಜನ ಸತ್ಯಂಪೇಟೆ, ಶರಣಗೌಡ ಪಾಳಾ, ಎಸ್.ವಿ.‌ಹತ್ತಿ, ಸತೀಶ ಸಜ್ಜನ, ವಿಶ್ವನಾಥ ಮಂಗಲಗಿ, ಮಲ್ಲಣ್ಞ ಗುಳಗಿ, ಸಂಗಣ್ಣ ಜಿ. ಸತ್ಯಂಪೇಟೆ ಇತರರು ಭಾಗವಹಿಸಿದ್ದರು.

emedialine

Recent Posts

ಚಳವಳಿ, ಹೋರಾಟದಿಂದಲೇ ದಲಿತ ಸಾಹಿತ್ಯ ಉದಯ: ದಲಿತ ಚಳವಳಿ ಸಾಹಿತ್ಯ ಸಮ್ಮೇಳನ

ಕಲಬುರಗಿ: ದಲಿತ, ಹಿಂದುಳಿದವರು, ದೀನರು ಎಂದು ಹೇಳಿಕೊಂಡು ಎಷ್ಟು ದಿನ ಅಂತಾ ಜೀವನ ಸಾಗಿಸಬೇಕು. ಸಾಧನೆ ಮಾಡಿ ಸಾಧಕರಾಗಿ ಸಾಯೋಣ.…

10 hours ago

ಕಲಬುರಗಿ ಪ್ರವಾಸಿ ತಾಣಗಳ ಆಯ್ಕೆಗೆ ಆನ್‌ಲೈನ್‌ ಮೂಲಕ ವೋಟ್‌ ಮಾಡಲು ಡಿ.ಸಿ. ಮನವಿ

ಕಲಬುರಗಿ: ಕೇಂದ್ರದ ಪ್ರವಾಸೋದ್ಯಮ ಇಲಾಖೆಯು ಪ್ರವಾಸಿ ತಾಣಗಳನ್ನು ಗುರುತಿಸಿ ಅಭಿವೃದ್ಧಿಪಡಿಸುವ ದೃಷ್ಟಿಯಿಂದ ಸಾರ್ವವಜನಿಕರು ಮತ್ತು ಪ್ರವಾಸಿಗರೆ ಪ್ರವಾಸೋದ್ಯಮ ತಾಣಗಳನ್ನು ಆಯ್ಕೆ…

11 hours ago

ಎರಡನೇ ದಿನದ ಪ್ರಥಮ ದಲಿತ ಚಳವಳಿ ಸಾಹಿತ್ಯ ಸಮ್ಮೇಳನಕ್ಕೆ ತೆರೆ

ಕಲಬುರಗಿ: ಹೋರಾಟದ ಸಾಗರಕ್ಕೆ ಡಾ. ಡಿ.ಜಿ. ಸಾಗರ ಅವರ ಮಹಾ ಸಾಗರವೇ ಆಗಿದ್ದಾರೆ. ನೋವು, ಅವಮಾನ ಸಹಿಸಿ ಬಹು ಎತ್ತರಕ್ಕೆ…

11 hours ago

ಶ್ರೀ ರೇವಣಸಿದ್ದೇಶ್ವರ ಬೆಳ್ಳಿ ಪಲ್ಲಕ್ಕಿ ಉತ್ಸವ ನಾಳೆ

ಕಲಬುರಗಿ: ಧಾರ್ಮಿಕ ದತ್ತಿ ಇಲಾಖೆಯ ಕಾಳಗಿ ತಾಲ್ಲೂಕಿನ ರೇವಗ್ಗಿ ರಟಕಲ್ ಶ್ರೀ ರೇವಣಸಿದ್ದೇಶ್ವರ ಗುಡ್ಡದಲ್ಲಿ ನಾಳೆ ಶ್ರಾವಣ ಮಾಸದ ನಡುವಿನ…

13 hours ago

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿವೆ

ಕಲಬುರಗಿ; ನಗರದ ಎಐಟಿಸಿ ಕಚೇರಿಯ ಹತ್ತಿರದ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (CPI) ನಗರ ಹಾಗೂ ತಾಲ್ಲೂಕಾ ಸಮಾವೇಶ…

13 hours ago

ಬೂಟು ಧರಿಸಿ ಧ್ವಜಾರೋಹಣ ಮಾಡಿದ ಶಿಕ್ಷಕನ ಅಮಾನತಿಗೆ ಆಗ್ರಹ

ಸುರಪುರ: ಆಗಷ್ಟ್ 15 ರಂದು ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಹುಣಸಗಿ ತಾಲೂಕಿನ ಕನ್ನೆಳ್ಳಿ ಗ್ರಾಮದ ಸರಕಾರಿ ಹಿರಿಯ…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420