ಬಿಸಿ ಬಿಸಿ ಸುದ್ದಿ

ಅಖಂಡ ಕರ್ನಾಟಕ ವೀ.ಲಿಂ ಸಮಾಜ ಮಹಿಳಾ ಘಟಕ ರಾಜ್ಯಾಧ್ಯಕ್ಷೆ ವೀಣಾ ಹಿರೇಮಠ

ಸುರಪುರ: ಅಖಂಡ ಕರ್ನಾಟಕ ವೀರಶೈವ ಲಿಂಗಾಯತ ಸಮಾಜ ಸಂಘಟನೆ ಮಹಿಳಾ ಘಟಕದ ರಾಜ್ಯಾಧ್ಯಕ್ಷೆಯನ್ನಾಗಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಮಹಿಳೆ ಹೋರಾಟಗಾರ್ತಿ ವೀಣಾ ಹಿರೇಮಠ ಅವರನ್ನು ನೇಮಕಗೊಳಿಸಲಾಗಿದೆ.

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಉಜ್ಜಯನಿ ಮಠದಲ್ಲಿ ಉಜ್ಜಯನಿನ ಪೀಠದ ಜಗದ್ಗುರು ಸಿದ್ದಲಿಂಗ ಶೀವಾಚಾರ್ಯರ ಭಗವತ್ಪಾದರ ದಿವ್ಯ ಸಾನಿಧ್ಯದಲ್ಲಿ ನಡೆದ ಸಭೆಯಲ್ಲಿ ವೀಣಾ ಹಿರೇಮಠ ಅವರನ್ನು ನೇಮಕಗೊಳಿಸಲಾಗಿದೆ.ಇದೇ ಸಂದರ್ಭದಲ್ಲಿ ಸಿದ್ದಲಿಂಗ ಶಿವಾಚಾರ್ಯರು ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನರಡ್ಡಿ ಅಮ್ಮಾಪುರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ನೇಮಕಾತಿ ಪತ್ರವನ್ನು ನೀಡಿ ಸನ್ಮಾನಿಸಿ ಶ್ರೀಗಳು ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನರಡ್ಡಿ,ಸಂಘಟನೆ ಈಗಾಗಲೇ ಅನೇಕ ಜಿಲ್ಲೆಗಳಲ್ಲಿ ಘಟಕಗಳನ್ನು ಆರಂಭಿಸಲಾಗಿದ್ದು,ರಾಜ್ಯದಲ್ಲಿನ ವೀರಶೈವ ಲಿಂಗಾಯತ ಸಮಾಜದ ಸಮಗ್ರ ಅಭಿವೃಧ್ಧಿಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸುತ್ತಿದ್ದು,ಮಹಿಳಾ ಘಟಕಗಳನ್ನು ಕೂಡ ಆರಂಭಿಸಿ ಮಹಿಳೆಯರ ಸಮಗ್ರ ಏಳಿಗೆಗಾಗಿ ಅನೇಕ ಯೋಜನೆಗಳನ್ನು ಹೊಂದಿ ಸಂಘಟನೆ ಕೆಲಸ ಮಾಡುತ್ತಿದೆ. ಅದಕ್ಕೆ ಸಾರಥಿಯಾಗಿ ಇಂದು ವೀಣಾ ಹಿರೇಮಠ ಅವರು ಮಹಿಳಾ ಘಟಕದ ರಾಜ್ಯಾಧ್ಯಕ್ಷರನ್ನಾಗಿ ನೇಮಕಗೊಳಿಸಿರುವುದು ತುಂಬಾ ಸಂತೋಷ ತಂದಿದೆ.

ಮುಂಬರುವ ದಿನಗಳಲ್ಲಿ ಸಂಘಟನೆಯ ತತ್ವ ಸಿದ್ದಾಂತಕ್ಕೆ ಧಕ್ಕೆ ಬಾರದಂತೆ ನಾಡಿನೆಲ್ಲೆಡೆ ಸಮಾಜದ ಏಳಿಗೆಗಾಗಿ ಕಾರ್ಯಕ್ರಮಗಳನ್ನು ಮತ್ತು ಹೋರಾಟಗಳನ್ನು ರೂಪಿಸಿಕೊಂಡು ಸಂಘಟನೆಯನ್ನು ಬಲಪಡಿಸುವಂತೆ ಆಶಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಮಾಲಹಳ್ಳಿಯ ಸ್ವಾಮೀಜಿಗಳು,ಕಲಬುರ್ಗಿ ಜಿಲ್ಲಾ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಭಾಗ್ಯಶ್ರೀ ಪಾಟೀಲ್,ವಿಜಯಪುರ ಜಿಲ್ಲಾ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಅಶ್ವಿನಿ ಬಿರಾದಾರ,ಮುಖಂಡರಾದ ಮಹೇಶ ಕಮತಿಗೆ,ಶಿವಕುಮಾರ ಶಾಸ್ತ್ರಿ,ಶಂಕರಗೌಡ,ಅನಿಲ್ ಕಲಬುರ್ಗಿ ಸೇರಿದಂತೆ ಅನೇಕರಿದ್ದರು.

emedialine

Recent Posts

ಆ.25 ರಂದು ಹಟಗಾರ ಸಮಾಜ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ

ಕಲಬುರಗಿ: ನಗರದ ಪತ್ರಿಕಾ ಭವನದ ಸಾಂಸ್ಕøತಿಕ ಸಭಾಂಗಣದಲ್ಲಿ ಆ.25 ರಂದು ಬೆಳಗ್ಗೆ 10.30 ಗಂಟೆಗೆ ಗುಲಬರ್ಗಾ ಹಟಗಾರ ಸಮಾಜ ಅಭಿವೃದ್ಧಿ…

31 mins ago

ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ACC ಅದಾನಿ ಫೌಂಡೇಷನ್ ಮತ್ತು NGN  ಫೌಂಡೇಷನ್ ಹಾಗೂ ಗ್ರಾಮ ಪಂಚಾಯತವತಿಯಿಂದ ನಮ್ಮ ಗ್ರಾಮದ ಸರಕಾರಿ ಹಿ. ಪ್ರಾ.…

34 mins ago

ಐ.ಟಿ.-ಟೆಲಿಫೋನ್ ಕ್ರಾಂತಿಗೆ ನಾಂದಿ ಹಾಡಿದವರು ರಾಜೀವ ಗಾಂಧಿ: ಡಿಸಿಎಂ ಡಿ.ಕೆ.ಶಿವಕುಮಾರ

ರಾಜೀವ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ ಕಾರ್ಯಕ್ರಮಕ್ಕೆ ಚಾಲನೆ ಕಲಬುರಗಿ: ಐ.ಟಿ. ಮತ್ತು ದೂರಸಂಪರ್ಕ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ರಾಜೀವ…

50 mins ago

1,558 ಜನರಿಗೆ ಸರ್ಕಾರಿ ಸೌಲಭ್ಯ ವಿತರಿಸಿದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್

ಕಲಬುರಗಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಕಲಬುರಗಿ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಇಲ್ಲಿನ…

56 mins ago

ದಿ. ಡಿ.ದೇವರಾಜ ಅರಸು ಹಿಂದುಳಿದ ವರ್ಗದ ಏಳಿಗೆಗಾಗಿ ಅನೇಕ ಕೂಡುಗೆ ಇದೆ: ಶಾಸಕ ಅಲ್ಲಮಪ್ರಭು ಪಾಟೀಲ್

ಕಲಬುರಗಿ: ದಿ. ಡಿ. ದೇವರಾಜ್ ಅರಸು ಒಬ್ಬ ಮುತ್ಸದ್ಧಿ ರಾಜಕಾರಣೆಯಾಗಿದ್ದರು ಬಡವರ ಮತ್ತು ಹಿಂದುಳಿದ ವರ್ಗದ ಏಳಿಗೆಗಾಗಿ ರಾಜ್ಯಕ್ಕೆ ಅನೇಕ…

1 hour ago

ಸಾಧನೆ ಮಾಡಲು ಓದಿನಷ್ಟೆ ಕ್ರೀಡೆಯಲ್ಲೂ ಅವಕಾಶವಿದೆ

ಸುರಪುರ:ಯಾವುದೇ ವ್ಯಕ್ತಿ ಸಾಧನೆ ಮಾಡಲು ಕೇವಲ ಓದು ಒಂದೇ ಮುಖ್ಯವಲ್ಲ,ಇಂದು ಓದಿನಷ್ಟೆ ಕ್ರೀಡೆಯಲ್ಲೂ ಸಾಧನೆ ಮಾಡಲು ಅವಕಾಶವಿದೆ ಎಂದು ಕ್ಷೇತ್ರ…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420