ಬಿಸಿ ಬಿಸಿ ಸುದ್ದಿ

ಅನರ್ಹ ಬಿ.ಪಿ.ಎಲ್ ಪಡಿತರ ಚೀಟಿ ಪತ್ತೆ ಹಚ್ಚಿ: ಅಕ್ರಮ‌ ಮದ್ಯ ಮಾರಾಟಕ್ಕೆ ಬ್ರೆಕ್ ಹಾಕಿ| ಡಿ.ಸಿ. ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಉಳ್ಳವರು ಸಹ ಸರ್ಕಾರಿ ಸೌಲಭ್ಯ ಪಡೆಯಲು ಬಿ‌.ಪಿ‌.ಎಲ್ ಪಡಿತರ ಚೀಟಿ ಪಡೆದಿರುವ ಸಾಧ್ಯತೆ ಇದ್ದು, ಕೂಡಲೆ ಇಂತಹ ಅನರ್ಹ ಬಿ‌.ಪಿ‌.ಎಲ್ ಪಡಿತರ ಚೀಟಿ ಪತ್ತೆ ಹಚ್ಚಿ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅಹಾರ ಇಲಾಖೆ ಅಧಿಕಾರಿಗಳಿಗೆ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಸೂಚನೆ ನೀಡಿದರು.

ಸೋಮವಾರ ತಮ್ಮ ಕಚೇರಿಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಅಬಕಾರಿ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಹೊಸ ಪಡಿತರ ಚೀಟಿ ಕೋರಿ ಸಲ್ಲಿಕೆಯಾದ ಅರ್ಜಿದಾರರ ಮನೆಗಳಿಗೆ ಭೇಟಿ ನೀಡಿ ಕ್ಷೇತ್ರ ತಪಾಸಣೆ‌ ಕಾರ್ಯ ಪೂರ್ಣಗೊಳಿಸಬೇಕು. ಸರ್ಕಾರದ ಆದೇಶ ಬಂದ ಕೂಡಲೆ ಪಡಿತರ ಚೀಟಿ ವಿತರಣೆಗೆ ಕ್ರಮ ವಹಿಸಬೇಕೆಂದರು.

ಅನ್ನಭಾಗ್ಯ ಯೋಜನೆಯಡಿ ಬಿ‌ಪಿ‌ಎಲ್ ಪಡಿತರ ಚೀಟಿದಾರರಿಗೆ 5 ಕೆ.ಜಿ. ಅಕ್ಕಿ ಬದಲಾಗಿ ಹಣವನ್ನು ಡಿ.ಬಿ.ಟಿ. ಮೂಲಕ ಹಾಕಲಾಗುತ್ತಿದ್ದು, ಎನ್.ಪಿ.ಸಿ.ಐ. ಸಮಸ್ಯೆ ಕಾರಣ ಜಿಲ್ಲೆಯಲ್ಲಿ 24 ಸಾವಿರಕ್ಕೂ ಹೆಚ್ಚು ಪಡಿತರ ಚೀಟಿದಾರ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಹಣ ಹೋಗುತ್ತಿಲ್ಲ. ಕೂಡಲೆ ಪಡಿತರದಾರರಿಗೆ ಬ್ಯಾಂಕುಗಳಿಗೆ ಹೋಗಿ ಎನ್.ಪಿ.ಸಿ.ಐ ಅಪಡೇಟ್ ಮಾಡಿಕೊಳ್ಳುವಂತೆ ತಿಳಿಹೇಳಬೇಕು ಎಂದರು.

ಸಭೆಯಲ್ಲಿ ಭಾಗವಹಿಸಿದ ಆಹಾರ ಇಲಾಖೆ ಪ್ರಭಾರಿ ಉಪನಿರ್ದೇಶಕ ಡಿ.ಬಿ.ಪಾಟೀಲ ಮಾತನಾಡಿ, ಕಾರ್ಮಿಕ ಇಲಾಖೆಯಿಂದ ಇ-ಶ್ರಮ ಕಾರ್ಡ್ ಪಡೆದವರಿಗೆ ಬಿ.ಪಿ‌.ಎಲ್ ಪಡಿತರ ಚೀಟಿ ನೀಡಬೇಕೆಂದು ಇತ್ತೀಚೆಗೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, ಅದರಂತೆ ಈಗಾಗಲೆ 4 ಸಾವಿರ ಜನರಿಗೆ ಬಿ.ಪಿ.ಎಲ್. ಕಾರ್ಡ್ ನೀಡಿದ್ದು, 16 ಸಾವಿರ ಜನರಿಗೆ ನೀಡಬೇಕಿದೆ ಎಂದರು. ಡಿ.ಸಿ. ಬಿ.ಫೌಜಿಯಾ ತರನ್ನುಮ್ ಮಾತನಾಡಿ ಉಳಿದ 16 ಸಾವಿರ ಕಾರ್ಮಿಕರಿಗೆ 15 ದಿನದಲ್ಲಿ ಕಾರ್ಡ್ ನೀಡಲು ಕ್ರಮ ವಹಿಸಬೇಕು ಎಂದರು.

ಜಿಲ್ಲೆಯಲ್ಲಿ ಒಟ್ಟು ಪಡಿತರ ಚೀಟಿ ಪೈಕಿ ಶೇ.27ರಷ್ಟು ಎಸ್.ಸಿ-ಎಸ್.ಟಿ. ಸಮುದಾಯದ ಪಡಿತರದಾರರಿದ್ದು, ಇವರಲ್ಲಿ 21 ಸಾವಿರ ಕಾರ್ಡ್ ದಾರರು ತಮ್ಮ ಜಾತಿ ಪ್ರಮಾಣ ಪತ್ರವನ್ನು ಪಡಿತರ ಚೀಟಿಯೊಂದಿಗೆ ಮ್ಯಾಪಿಂಗ್ ಮಾಡಿಕೊಂಡಿದ್ದು, ಬಾಕಿ 6 ಸಾವಿರ ಕಾರ್ಡ್ ಕೂಡಲೆ‌ ಮ್ಯಾಪಿಂಗ್ ಮಾಡಿಸಬೇಕೆಂದು ಆಹಾರ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ ಡಿ.ಸಿ. ಅವರು, ಅಗತ್ಯ ವಸ್ತುಗಳ ಕಾಯ್ದೆಯಡಿ ಅಕ್ರಮ ಅಕ್ಕಿ ಸಾಗಾಟ ಪ್ರಕರಣದಲ್ಲಿ ಎಫ್.ಐ.ಆರ್ ದಾಖಲಿಸಬೇಕು. ನಿರಂತರ ದಾಳಿ ಮಾಡಿ ಇದಕ್ಕೆ ಕಡಿವಾಣ ಹಾಕಬೇಕೆಂದರು.

ಹಳ್ಳಿಯಲ್ಲಿ ಅಕ್ರಮ‌ ಮದ್ಯ ಮಾರಾಟಕ್ಕೆ ಬ್ರೆಕ್ ಹಾಕಿ: ಅಬಕಾರಿ ಇಲಾಖೆ ಪ್ರಗತಿ ಪರಿಶೀಲನೆ ವೇಳೆ ಮಾತನಾಡಿದ ಡಿ.ಸಿ. ಬಿ.ಫೌಜಿಯಾ ತರನ್ನುಮ್, ಹಳ್ಳಿಯಲ್ಲಿ ಶಾಲೆ, ದೇವಸ್ಥಾನ, ಕಿರಾಣಾ ಅಂಗಡಿಯಲ್ಲಿ‌ ಅಕ್ರಮ ಮದ್ಯ ಮಾರಾಟವಾಗುತ್ತಿವೆ. ಇಲಾಖೆ ಇದಕ್ಕೆಲ್ಲ ಕಡಿವಾಣ ಹಾಕಬೇಕು. ತಪಾಸಣೆ ತೀವ್ರಗೊಳಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಅಬಕಾರಿ ಉಪ ಆಯುಕ್ತೆ ಸೈಯದ್ ಅಜ್ಮತ್ ಅಫ್ರೀನ್ ಸೇರಿದಂತೆ ಆಹಾರ ಮತ್ತು ಅಬಕಾರಿ ಇಲಾಖೆಯ ಅಧಿಕಾರಿಗಳಿದ್ದರು.

emedialine

Recent Posts

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯ ಘಟಕದ ಚುನಾವಣೆ 25ರಂದು

ಕಲಬುರಗಿ: ಆ. 25 ರಂದು ನಡೆಯಲಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಘಟಕದ 27 ಸ್ಥಾನಗಳಿಗೆ (…

1 hour ago

ಬೀದಿ ಬದಿ ವ್ಯಾಪಾರಸ್ಥರಿಗೆ ಮೂಲಭೂತ ಸೌಕರ್ಯ ಒದಗಿಸಲು ಮೇಯರ್‍ ಗೆ ಮನವಿ

ಕಲಬುರಗಿ : ನಗರದ ಬೀದಿ ಬದಿಯಲ್ಲಿ ಕುಳಿತುಕೊಂಡು ವ್ಯಾಪಾರ ಮಾಡುತ್ತಿರುವ ವ್ಯಾಪಾರಸ್ಥರಿಗೆ ಈಗಾಗಲೇ ಪಾಲಿಕೆಯಿಂದ ನೀಡಿರುವ ಹಳೆ ಜೈಲ್ ಸೂಪರ…

15 hours ago

ನಾರಿ ನ್ಯಾಯ ಸಮ್ಮಾನ್ ಕಾರ್ಯಕ್ರಮ

ಕಲಬುರಗಿ: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹಾಗೂ…

15 hours ago

ಬಾಂಗ್ಲಾದೇಶದ ಹಿಂದೂಗಳ ಮೇಲೆ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ಶಹಾಬಾದ: ಬಾಂಗ್ಲಾದೇಶದ ಹಿಂದೂಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ಹಿಂಸಾತ್ಮಕ ದೌರ್ಜನ್ಯ, ಅತ್ಯಾಚಾರಗಳನ್ನು ಖಂಡಿಸಿ ವಿಶ್ವಹಿಂದೂ ಪರಿಷತ್ ವತಿಯಿಂದ ಮಂಗಳವಾರ ನಗರದ…

15 hours ago

ಹಿಂದುಳಿದ ಸಮುದಾಯಗಳ ಆಶಾಕಿರಣವಾಗಿದ್ದರು ದೇವರಾಜ ಅರಸ್

ಶಹಾಬಾದ: ಹಿಂದುಳಿದ ವರ್ಗಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ನಾನಾ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಹಿಂದುಳಿದ ಸಮುದಾಯಗಳ…

15 hours ago

ವೈದ್ಯೆಯ ಮೇಲಿನ ಅತ್ಯಾಚಾರ – ಕೊಲೆ ಖಂಡಿಸಿ ಎಐಡಿವೈಒ ಪ್ರತಿಭಟನೆ

ಶಹಾಬಾದ: ಕೊಲ್ಕತ್ತಾದ ಸರ್ಕಾರಿ ಆರ್. ಜಿ. ಕರ್ ವೈದ್ಯಕೀಯ ಕಾಲೇಜಿನ ಸ್ನಾತಕೋತ್ತರ ವೈಧ್ಯೆಯ ಮೇಲಿನ ಅತ್ಯಾಚಾರ ಕೊಲೆ ಹಾಗೂ ಪ್ರತಿಭಟನಾಕಾರರ…

15 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420